• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್-19: ಕೇರಳಕ್ಕೆ ದುಬಾರಿಯಾಗಿ ಪರಿಣಮಿಸಿದ ಓಣಂ ಹಾಗೂ ಬಕ್ರೀದ್ ಆಚರಣೆ

ಪ್ರತಿಧ್ವನಿ by ಪ್ರತಿಧ್ವನಿ
August 26, 2021
in ದೇಶ
0
ಕೋವಿಡ್-19: ಕೇರಳಕ್ಕೆ ದುಬಾರಿಯಾಗಿ ಪರಿಣಮಿಸಿದ ಓಣಂ ಹಾಗೂ ಬಕ್ರೀದ್ ಆಚರಣೆ
Share on WhatsAppShare on FacebookShare on Telegram

ಈ ಬಾರಿಯ ಓಣಂ ಹಾಗೂ ಬಕ್ರೀದ್ ಆಚರಣೆ ಕೇರಳಕ್ಕೆ ಮಾರಕವಾಗಿ ಪರಿಣಮಿಸಿದೆ. ಬರೋಬ್ಬರಿ ಮೂರು ತಿಂಗಳ ಬಳಿಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರವನ್ನು ದಾಟಿದೆ. ಓಣಂ ಆಚರಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಜನರು ಮರೆತಿದ್ದು ಈ ಅವಾಂತರಕ್ಕೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಬುಧವಾರದಂದು ಕೇರಳದಲ್ಲಿ 31,445 ಹೊಸ ಕೋವಿಡ್ ಪ್ರಕರಣಗಳ ದಾಖಲಾಗಿವೆ. ಇದರೊಂದಿಗೆ ರಾಜ್ಯ ಕೋವಿಡ್ ಪಾಸಿಟಿವಿಟಿ ರೇಟ್ ಕೂಡಾ ಬೃಹತ್ ಏರಿಕೆ ಕಂಡು 19%ಕ್ಕೆ ಬಮದು ನಿಂತಿದೆ. ಕಳೆದ ಬಾರಿ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಮೂವತ್ತು ಸಾವಿರದ ಗಡಿ ದಾಟಿದ್ದು ಮೇ 20ರಂದು. ಅಂದು 30,491 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ದೇಶದೆಲ್ಲೆಡೆ ಕೋವಿಡ್ ಎರಡನೇ ಅಲೆಯು ತಗ್ಗಿದ್ದರೂ, ಕೇರಳದಲ್ಲಿ ಮಾತ್ರ ಇನ್ನೂ ಮುಂದುವರೆಯುತ್ತಲೇ ಇದೆ. ಮೊದಲು ಈ ಬೆಳವಣಿಗೆಗೆ ರಾಜ್ಯದ ಆರೋಗ್ಯ ಮಂತ್ರಿಯಾಗಿರುವ ವೀಣಾ ಜಾರ್ಜ್ ಅವರು ಸ್ಪಷ್ಟೀಕರಣವನ್ನು ನೀಡುವ ಪ್ರಯತ್ನಪಟ್ಟಿದ್ದರಾದರೂ, ಈಗ ಮಾತ್ರ ಪರಿಸ್ಥಿತಿ ಕೈ ಮೀರುವ ಹಂತವನ್ನು ತಲುಪಿದೆ.

ಕೇರಳದ ಒಟ್ಟು ಸೋಂಕಿತರ ಸಂಖ್ಯೆ 38,83,429ಕ್ಕೆ ತಲುಪಿದೆ. ಇದರಿಂದಾಗಿ ಆತಂಕಕ್ಕೆ ಒಳಗಾಗಿರುವ ಸರ್ಕಾರ, ಕೋವಿಡ್ ಪರೀಕ್ಷೆಯನ್ನು ರಾಜ್ಯದಾದ್ಯಂತ ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿದೆ. ಇದರಿಂದಾಗಿ ಕೋವಿಡ್ ಪ್ರಸರಣವನ್ನು ತಡೆಯುವುದು ಸುಲಭ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಜುಲೈ 27ರಂದು ಆಚರಿಸಲಾಗಿದ್ದ ಬಕ್ರೀದ್ ಹಬ್ಬದ ಬಳಿಕ ಕೇರಳದಲ್ಲಿ ಕೋವಿಡ್ ಸೋಂಕಿನ ಹರಡುವಿಕೆ ತೀವ್ರವಾಗಿದೆ. ಬಕ್ರೀದ್ ಆಚರಣೆಯ ಬಳಿಕ ಪ್ರತಿದಿನವು ಕನಿಷ್ಟ 20 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಈ ಪ್ರಕರಣಗಳ ಸಂಖ್ಯೆ ಓಣಂ ಹಬ್ಬದ ಬಳಿಕ ಹೊಸ ದಾಖಲೆಯನ್ನೇ ನಿರ್ಮಿಸಿದೆ.

ಸದ್ಯಕ್ಕೆ ಕೇರಳದಲ್ಲಿ 1,70,292 ಪ್ರಕರಣಗಳು ಸಕ್ರಿಯವಾಗಿವೆ. ಪ್ರತಿ ದಿನವೂ ಒಮದು ಲಕ್ಷಕ್ಕೂ ಅಧಿಕ ಜನರ ಸ್ವಾಬ್ ಟೆಸ್ಟ್ ನಡೆಸಲಾಗುತ್ತಿದೆ. ಎರ್ನಾಕುಲಂ, ತ್ರಿಶ್ಶೂರ್, ಮಲಪ್ಪುರಂ, ಪಾಲಕ್ಕಾಡ್, ಕೋಝಿಕ್ಕೋಡ್, ಕೊಲ್ಲಂ, ಕೊಟ್ಟಾಯಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಏರಿಕೆಯನ್ನು ಕಾಣುತ್ತಿದೆ.

ಈ ಕಾರಣದಿಂದ ಹಬ್ಬದ ಆಚರಣೆಗಳು ಸಾಧ್ಯವಾದಷ್ಟು ಸರಳವಾಗಿ ಇರಬೇಕು ಎಂದು ರಾಜ್ಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಸರಣಿ ಹಬ್ಬಗಳು ಬರಲಿದ್ದು, ಇದರಿಂದ ಮುರನೇ ಅಲೆಯ ತೀವ್ರತೆ ದೇಶದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

Tags: bakridCovid 19Kerala Governmentonamಕೋವಿಡ್-19
Previous Post

ಕೋವಿಡ್-19 ಲಸಿಕೆ ರಕ್ಷಣೆ ಆರು ತಿಂಗಳಲ್ಲಿ ಕಡಿಮೆಯಾಗುತ್ತದೆ: ಯುಕೆ ಸಂಶೋಧನೆ

Next Post

ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada