• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್​ ಮಾರ್ಗಸೂಚಿ ರಿಲೀಸ್​.. ನ್ಯೂ ಇಯರ್​ಗೆ ಎಲ್ಲೆಲ್ಲಿ ಬ್ರೇಕ್​..?

ಕೃಷ್ಣ ಮಣಿ by ಕೃಷ್ಣ ಮಣಿ
December 27, 2023
in ಕರ್ನಾಟಕ
0
ಮತ್ತೆ ಕರೋನಾ ಭೀತಿ : ರಾಜ್ಯದಲ್ಲಿ ಇನ್ನು ಮುಂದೆ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ
Share on WhatsAppShare on FacebookShare on Telegram

ADVERTISEMENT

ಕರ್ನಾಟಕ ಹಾಗು ಕೇರಳದಲ್ಲಿ ಕೊರೊನಾ ಉಪತಳಿ JN.1 ( Corona ) ಹೆಚ್ಚಳವಾಗ್ತಿದ್ದು, ಕರ್ನಾಟಕದಲ್ಲಿ ಮಂಗಳವಾರ ಮಧ್ಯಾಹ್ನ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಮಾಡಲಾಗಿದೆ. ಆ ಬಳಿಕ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕೋವಿಡ್ ಬಂದಿರೋದು ಉಪತಳಿ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹಳಷ್ಟು ಹರಡಿದೆ. ನಾವು ಕಳಿಸಿದ 60 ಸ್ಯಾಂಪಲ್​ನಲ್ಲಿ 34 ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಕೊರೊನಾ ಸೋಂಕಿನ JN.1 ಉಪತಳಿಗೆ ಭಯ ಪಡುವ ಅವಶ್ಯಕತೆ ಇಲ್ಲ. world health organisation (WHO) ವಿಶ್ವ ಆರೋಗ್ಯ ಸಂಸ್ಥೆ ಅಭಯ ನೀಡಿದೆ. ಇದರಿಂದ ಅಪಾಯ ಹಾಗೂ ರಿಸ್ಕ್ ಫ್ಯಾಕ್ಟರ್ಸ್ ಬಗ್ಗೆ ಮಾಹಿತಿ ತಿಳಿಯಬೇಕಿದೆ. ಆದರೂ ಜಾಗೃತಿಯಿಂದ ಇರಬೇಕು ಎಂದು ಸಚಿವರು ತಿಳಿಸಿದ್ದಾರೆ. 5 ಸಾವಿರ ಕೋವಿಡ್​ ಟೆಸ್ಟ್​ಗೆ ಹೇಳಲಾಗಿತ್ತು. ಆದ್ರೆ ಅದು ಸಾಧ್ಯವಾಗಿರ್ಲಿಲ್ಲ. ಇಂದಿನಿಂದ ಮತ್ತೆ ಟೆಸ್ಟ್​ ಸಂಖ್ಯೆ ಹೆಚ್ಚು ಟೆಸ್ಟ್​​ಗಳಾಗುವೆ. ಜಿನೋಮ್ ಸೀಕ್ವೆನ್ಸಿಂಗ್ ಕೂಡಾ ಹೆಚ್ಚು ಮಾಡಲಾಗುವುದು. ದೇಶದಲ್ಲಿ ಒಟ್ಟು 4,110 ಆಕ್ಟಿವ್ ಕೇಸ್ ಇದೆ. ಕರ್ನಾಟಕ ಹಾಗೂ ಕೇರಳದಲ್ಲಿ ಹೆಚ್ಚು ಆಕ್ಟಿವ್ ಕೇಸ್ ಇದೆ ಎನ್ನುವ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲೆ ಕೊರೊನಾ ಟೆಸ್ಟ್ ಹೆಚ್ಚು ಮಾಡ್ತಿರೋದ್ರಿಂದ ಕೇಸ್ ಹೆಚ್ಚಾಗಿ ಬಂದಿದೆ. 400 ಜನರು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. 400 ಜನ ಕೋವಿಡ್​ ಇರುವವರನ್ನು ಟ್ರಾಕ್ ಮಾಡುತ್ತೇವೆ. ತಾಲೂಕು ಹೆಲ್ತ್ ಆಫೀಸರ್ಸ್, ಎಲ್ಲರೂ ಹೋಗಿ ಖುದ್ದು ನೋಡಿಕೊಂಡು ಬರಬೇಕು. ಸೋಂಕಿತರ ಆರೋಗ್ಯ ಸ್ಥಿತಿಯನ್ನ ಪರಿಶೀಲನೆ ಮಾಡಬೇಕು. ಐಸಿಯು ಸ್ಥಿತಿಗತಿ ನೋಡಲಾಗ್ತಿದೆ. ಆಕ್ಸಿಜನ್ ಸಪ್ಲೈ, ಜನರೇಷನ್ ಪ್ಲಾಂಟ್, ಹಾಗೂ ಲಿಕ್ವಿಡ್ ಆಕ್ಸಿಜನ್ ಸಜ್ಜುಗೊಳಿಸುತ್ತಿದ್ದೇವೆ. ಆಕ್ಸಿಜನ್ ಕೊರತೆ ಎಲ್ಲೂ ಕೊರತೆ ಆಗಬಾರದು ಎಂದು ಹೇಳಲಾಗಿದೆ. ಮೊಬೈಲ್ ಆಕ್ಸಿಜನ್ ಜನರೇಟ್ ವ್ಯವಸ್ಥೆ ಕೂಡ ಮಾಡಲಾಗ್ತಿದೆ. ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗಿದೆ. ಜಿನೋಮ್ ಸೀಕ್ವೆನ್ಸಿಂಗ್​​ ಗೆ ಪೂನಾದಲ್ಲಿ ಮಾಡಲಾಗ್ತಿದೆ. (BMRCL) ಬಿಎಂಸಿಆರ್​ನಲ್ಲು ಮಾಡಲು ಸಿದ್ಧತೆ ನಡೆಯುತ್ತಿದೆ ಎಂದಿದ್ದಾರೆ.

ಕೋವಿಡ್ ಸ್ಯಾಂಪಲ್ಸ್ ಸಂಗ್ರಹ ಮಾಡಲು ಪ್ರೋಟೋಕಾಲ್ ಇದೆ ಎಂದಿರುವ ಆರೋಗ್ಯ ಸಚಿವರು, ಕೋವಿಡ್​ ವ್ಯಾಕ್ಸಿನ್ ಪಡೆಯಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತಿದ್ದೇವೆ. ಪ್ರಿಕಾಷನರಿ ವ್ಯಾಕ್ಸಿನ್ ನೀಡುತ್ತೇವೆ . ಕೇಂದ್ರ ಸರ್ಕಾರದ ಬಳಿ ಹೊಸ ವ್ಯಾಕ್ಸಿನ್ ಯಾವುದು ಇಲ್ಲ. 30 ಸಾವಿರ ಡೋಸ್ ವ್ಯಾಕ್ಸಿನ್ ಪಡೆಯುತ್ತೇವೆ. ಹೆಲ್ತ್ ವರ್ಕರ್ಸ್ ಗೆ ಫ್ಲೂ ವ್ಯಾಕ್ಸಿನ್ ಕೊಡುತ್ತೇವೆ. ಪ್ರೊಟೆಕ್ಷನ್​ಗಾಗಿ ನಾವು ಕೊಡಲು ಮುಂದಾಗಿದ್ದೇವೆ. ಮೆಡಿಕಲ್ ಎಜುಕಷನ್​​ನಿಂದ , ರಾಜೀವ್ ಗಾಂಧಿ ಆಸ್ಪತ್ರೆ ಹಾಗೂ ಎಲ್ಲಾ ಮೆಡಿಕಲ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆಯಾ ಆಸ್ಪತ್ರೆಯ ಕೆಪಾಸಿಟಿಯ ಮೇರೆಗೆ ಬೆಡ್ ಕಾಯ್ದಿರಿಸಲಾಗಿದೆ. ಜೊತೆಗೆ ಕೋವಿಡ್​ ಆಡಿಟ್​ ಮಾಡಲು ಹೇಳಿದ್ದೇವೆ ಎಂದಿರುವ ಆರೋಗ್ಯ ಸಚಿವರು, ಎಲ್ಲರೂ ಮಾಸ್ಕ್ ಹಾಕಿಕೊಳ್ಳಿ ಬೇರೆ ಬೇರೆ ಖಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ ಶಾಲಾ ಮಕ್ಕಳಿಗೆ ಸಿಂಪ್ಟಮ್ಸ್ ಇದ್ದರೆ ಶಾಲೆಗೆ ಕಳುಹಿಸಬೇಡಿ, ಹೊಸ ವರ್ಷಕ್ಕೆ ನಿರ್ಬಂಧನೆ ಇಲ್ಲ. ಹೆಚ್ಚು ಜನರ ಇರುವ ಪ್ರದೇಶದಲ್ಲಿ ಹೋಗಬೇಡಿ. ಸೋಷಿಯಲ್ ಡಿಸ್ಟೆನ್ಸ್ ಇರಬೇಕು. ಕೋವಿಡ್ ಸೋಂಕಿತರು 7 ದಿನಗಳ ಕಾಲ ಹೋಂ ಐಸೋಲೇಷನ್ ಕಡ್ಡಾಯ ಎನ್ನಲಾಗಿದೆ.

ಆಫೀಸ್ ಗಳಲ್ಲಿ ರಜೆ ನೀಡಬೇಕು. ಈ ಬಗ್ಗೆ ಮಾರ್ಗಸೂಚಿ ನೀಡಲಾಗುವುದು. ಟೆಸ್ಟಿಂಗ್ ದರದ ಬಗ‌್ಗೆ ಕಮಿಟಿ ಮಾಡಿದ್ದೇವೆ. 2 ದಿನದಲ್ಲಿ ದರವನ್ನು ನಿಗದಿ ಮಾಡುತ್ತೇವೆ. 7 ಜನರಲ್ಲಿ ಲಸಿಕೆ ಹಾಕಿಕೊಂಡವರು ಇದ್ದಾರೆ. 3 ಜನರು ವ್ಯಾಕ್ಸಿನ್ ಪಡೆದವರು ಇದ್ದಾರೆ
ಯಾವುದೇ ಕಾರಣಕ್ಕೂ ಮೊದಲೇ ಸಿಟಿ ಸ್ಕ್ಯಾನ್ ಮಾಡಬಾರದು . ಪಾಸಿಟಿವ್ ಬಂದ ಮೇಲೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಆದರೆ ಈ ಬಾರಿ ಟೆಸ್ಟ್​ ಹಾಗು ಚಿಕಿತ್ಸೆಗೆ ಜನರೇ ಹಣ ಪಾವತಿ ಮಾಡಬೇಕಾಗಿ ಬರಬಹುದು. ಆದರೆ ಎಷ್ಟುಇ ಹಣ ಪಾವತಿ ಮಾಡಬೇಕು ಅನ್ನೋ ಬಗ್ಗೆ ಇನ್ನೂ ಅಂತಿಮ ಆಗಿಲ್ಲ. ಈಗಾಗಲೇ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೊಸ ಕರೋನಾ ತಳಿ ಆರೋಗ್ಯದ ಮೇಲೆ ಅಷ್ಟೊಂದು ಗಂಭೀರ ಪರಿಣಾಮ ಬೀರುವುದಿಲ್ಲ, ಆದರೆ ಎಚ್ಚರಿಕೆ ಇರಲಿ : ಮೈಸೂರು DHO

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada