ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರಿ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಹಾಗೂ ಸೆಮಿ ಲಾಕ್ಡೌನ್ ಹೇರಿದೆ. ಈ ಮಧ್ಯೆ ಗಡಿ ಜಿಲ್ಲೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಭೀತಿಯಿಂದ ಬೆಳಗಾವಿಯ ಶಾಲೆಗಳಿಗನ್ನ ಬಂದ್ ಮಾಡಿದ್ದಾರೆ.
ಹೌದು, ಗಡಿ ಜಿಲ್ಲೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜಿಲ್ಲಾಡಳಿತ 1-9 ನೇ ತರಗತಿಗಳಿಗೆ ಒಂದು ವಾರ ರಜೆಯನ್ನು ಘೋಷಿಸಿದೆ. ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆರೋಗ್ಯ ಇಲಾಖೆ ಅಧಿಕಾರಗಳ ಸಲಹೆ ಮೇರಗೆ ಜಿಲ್ಲೆಯಾದ್ಯಂತ ವಸತಿ ಶಾಲೆಗಳನ್ನು ಒಳಗೊಂಡಂತೆ 1-9 ತರಗತಿವರೆಗೂ ಒಂದು ವಾರಗಳ ಕಾಲ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರೆದು 10ನೇ ತರಗತಿ ಮತ್ತು ದ್ವಿತೀಯ ಪಿಯು ತರಗತಿಗಳು ಎಂದಿನಂತೆ ನಡೆಯಲಿವೆ ಪೋಷಕರು ಹೆದರುವ ಅವಶ್ಯಕತೆ ಇಲ್ಲ ಮಕ್ಕಳಲ್ಲಿ ಒಂದು ವೇಳೆ ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿ ಮತ್ತು ಸೋಂಕು ಹರಡದಂತೆ ಎಚ್ಚರವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಮೊದಲು ಬೆಂಗಳೂರನಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸುವ ಅಧಿಕಾರವನ್ನ ನೀಡಿತ್ತು.