• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

Any Mind by Any Mind
May 7, 2021
in ಕರ್ನಾಟಕ
0
ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ  ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ
Share on WhatsAppShare on FacebookShare on Telegram

ADVERTISEMENT

ಕರೋನಾ 2ನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ವೈದ್ಯಕೀಯ ಸೌಲಭ್ಯದ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ದುಬಾರಿ ಯೋಜನೆಯನ್ನು ಕೈಬಿಟ್ಟು, ಆ ಹಣವನ್ನು ವೈದ್ಯಕೀಯ ಕ್ಷೇತ್ರಕ್ಕೆ ಬಳಸಿ ಜನರ ಪ್ರಾಣ ಉಳಿಸಿ ಎಂಬುವುದು ದೇಶದ ರಾಜಕೀಯ ನಾಯಕರ, ಪ್ರಜ್ಞಾವಂತ ಸಮುದಾಯದ ಒತ್ತಾಯವಾಗಿದ್ದು, ಇದೀಗಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನವ ಸಂಸತ್ ಭವನ ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು ಮುಂದೂಡಿ ಅದರ ಹಣ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಆಗ್ರಹಿಸಿದೆ.

ದೆಹಲಿಯಲ್ಲಿ ಸುಮಾರು 13,450 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ “ನವ ಸಂಸತ್ ಭವನ” ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು (Central Vista Project) ಸದ್ಯಕ್ಕೆ ಮುಂದೂಡಿ ಅದಕ್ಕೆ ಒದಗಿಸಿರುವ ಹಣವನ್ನು ದೇಶದಲ್ಲಿ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಕೆಆರ್‌ಎಸ್‌ ಪಕ್ಷದ ರಾಜಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲಹೆ ಕೊಟ್ಟಿದ್ದಾರೆ.

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

ಸದ್ಯಕ್ಕೆ ನಿರುಪಯುಕ್ತವಾಗಿರುವ ಬೆಳಗಾವಿಯ ಸುವರ್ಣಸೌಧವನ್ನು ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ಹೀಗಾಗಲೇ ಹಲವು ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನನ್ನು ಒತ್ತಾಯಿಸಿದ್ದು, ಇದಕ್ಕೆ ಕೆಆರ್‌ಎಸ್‌ ಪಕ್ಷ ಕೂಡ ಬೆಂಬಲ ನೀಡಿದೆ.

ತಕ್ಷಣಕ್ಕೆ ಅಗತ್ಯವಿಲ್ಲದ ಎಲ್ಲಾ ಕಟ್ಟಡ, ಸೇತುವೆ, ಕಾಂಕ್ರೀಟ್ ಯೋಜನೆಗಳನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಿ ಆ ಹಣವನ್ನು ರಾಜ್ಯದ ಆಸ್ಪತ್ರೆ ಮತ್ತು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣಕ್ಕೆ ಬಳಸಬೇಕು. ಹಾಗೆಯೇ ಸೆಂಟ್ರಲ್‌ ವಿಸ್ತಾ(Central Vista Project) ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಠಕ್ಕೆ ಬೀಳದೆ ಮತ್ತು ಅದನ್ನು ತಮ್ಮ ದೊಡ್ಡಸ್ತಿಕೆಯ ತೋರ್ಪಡಿಕೆಗೆ ಬಳಸದೆ ದೇಶದ ಸದ್ಯದ ಪರಿಸ್ಥಿತಿಯನ್ನು ಮನಗಂಡು ಸಂವೇದನೆ ಮತ್ತು ಕಾಳಜಿಯಿಂದ ವರ್ತಿಸಬೇಕೆಂದು ತಿಳಿಸಿದೆ.

ದೇಶದ ಬಹುಜನರು ಸಂಕಷ್ಟದಲ್ಲಿ ಇರುವಾಗ ಆಡಳಿತಗಾರರ ವೈಭವೋಪೇತ ಜೀವನ ಮತ್ತು ಎದ್ದು ಕಾಣಿಸುವ ದುಂದು ವೆಚ್ಚವನ್ನು ಜನರು ಹಗುರವಾಗಿ ಪರಿಗಣಿಸುವುದಿಲ್ಲ. ಅಂತಹ ನಡವಳಿಕೆ ಕೇವಲ ಮೋದಿಯವರ ಮೇಲಷ್ಟೇ ಪರಿಣಾಮ ಬೀರದೆ ಇಡೀ ದೇಶದ ಎಲ್ಲಾ ರಾಜಕಾರಣಿಗಳ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತದೆ. ಜನರು ತಮ್ಮ ಪ್ರತಿನಿಧಿಗಳ ಮೇಲೆ ಸಾರಾಸಗಟಾಗಿ ವಿಶ್ವಾಸವನ್ನು ಕಳೆದುಕೊಂಡ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವೂ ಅಪಾಯಕ್ಕೆ ಸಿಲುಕುತ್ತದೆ. ವ್ಯಕ್ತಿ ಮತ್ತು ಆತನ ವೈಯಕ್ತಿಕ ತೆವಲು ಮತ್ತು ಮಹತ್ವಾಕಾಂಕ್ಷೆಗಳಿಗಿಂತ ದೇಶ ದೊಡ್ಡದು ಈ ವೇಳೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಜನರ ಸಮಸ್ಯೆ ಬಗೆಹರಿಸುವತ್ತ ಚಿತ್ತಹರಿಸ ಬೇಕೆಂಬುವುದು ಕೆಆರ್‌ಎಸ್‌ ಪಕ್ಷದ ಸಲಹೆ.

Previous Post

ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

Next Post

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ  ಆಕ್ಸಿಜನ್ ಮರುಭರ್ತಿ ಕಾರ್ಯ

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada