• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

Any Mind by Any Mind
April 29, 2021
in ದೇಶ
0
ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ
Share on WhatsAppShare on FacebookShare on Telegram

ADVERTISEMENT

ಸೆಂಟ್ರಲ್‌ ವಿಸ್ತಾ ಯೋಜನೆಗೆ ಬ್ರೇಕ್‌ ಹಾಕಿ, 20 ಸಾವಿರ ಕೋಟಿ ರೂ.ಗಳನ್ನು ಆರೋಗ್ಯ ಕ್ಷೇತ್ರಕ್ಕೆ ವ್ಯಯಿಸಿ ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ #StopCentralVistaStartOxygen (ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ) ಎಂಬ ಟ್ವಿಟರ್ ಅಭಿಯಾನವು ಇಂದಿನಿಂದ ಪ್ರಾರಂಭವಾಗಿದೆ.

ದೇಶ ಕರೋನಾ ಸಂಕಷ್ಟ ಎದುರಿಸುತ್ತಿದ್ದು, ಆರೋಗ್ಯ ಕ್ಷೇತ್ರ ಕುಸಿದಿದೆ. ಇದರ ಮಧ್ಯೆ ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರೆಸಿದಕ್ಕೆ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿದೆ. ಈ ಸೆಂಟ್ರಲ್‌ ವಿಸ್ತಾ ಯೋಜನೆ ಹೊಸ ಸಂಸತ್ ಭವನ ಮತ್ತು ಇತರೆ ಕಟ್ಟಡಗಳನ್ನು ನಿರ್ಮಿಸುವ ದುಬಾರಿ ಯೋಜನೆಯಾಗಿದ್ದು, ಈ ಯೋಜನೆಗಳನ್ನು ಕೂಡಲೇ ಕೈ ಬಿಟ್ಟು, ಕರೋನಾ ಬಿಕ್ಕಟ್ಟಿನ ವೇಳೆ ಜನರ ಜೀವ ಉಳಿಸಲು ಆರೋಗ್ಯ ಕ್ಷೇತ್ರಕ್ಕೆ 20 ಸಾವಿರ ಕೋಟಿಯನ್ನು ವೈದ್ಯಕೀಯ ಸೌಲಭ್ಯ ವಿಸ್ತರಿಸಲು ಬಳಸಬೇಕೆಂದು ಅಭಿಯಾನದ ಮೂಲಕ ಒತ್ತಾಯಿಸಲಾಗುತ್ತಿದೆ.

ಕೋವಿಡ್‌ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ನಿರ್ಮಾಣವನ್ನು ಮುಂದುವರೆಸಿದ್ದು, ಇದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದೆ. ವೈದ್ಯಕೀಯ ವ್ಯವಸ್ಥೆ ದುರ್ಬಲಗೊಂಡು, ಸಾವಿರಾರೂ ಜನರು ಜೀವಕಳೆದು ಕೊಳ್ಳುತ್ತಿರುವ ಸಂಕಷ್ಟದ ಸಮಯದಲ್ಲಿಯೂ ಸೆಂಟ್ರಲ್‌ ವಿಸ್ತಾ ಯೋಜನೆಯನ್ನು ಮುಂದುವರೆಸಿದಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಗೆ ಬಳಸಿದ ಹಣವನ್ನು ಈಗಿನ ಈ ಪರಿಸ್ಥಿತಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಳಸಿ ಹೆಚ್ಚಿನ ಜನರಿಗೆ ಲಸಿಕೆ ನೀಡಲು ಮತ್ತು ಪಿಪಿಇ ಕಿಟ್‌ಗಳನ್ನು ಖರೀದಿಸಲು ಬಳಸಬೇಕೆಂದು ಪ್ರತಿಪಕ್ಷಗಳು ಬಯಸಿದ್ದವು. ಜೊತೆಗೆ ವಲಸೆ ಕಾರ್ಮಿಕರಿಗೆ ನೇರ ವರ್ಗಾವಣೆ ಮಾಡಬಹುದಿತ್ತು ಎಂದು ಪಶ್ಚಿಮ ಬಂಗಾಳ ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ’ಬ್ರಿಯೆನ್ ಮಾಧ್ಯಮವೊಂದಕ್ಕೆ ಕೇಳಿಕೆ ಕೊಟ್ಟಿದ್ದಾರೆ.

ಹೆಚ್ಚುತ್ತಿರುವ COVID-19 ಪ್ರಕರಣಗಳಿಂದಾಗಿ ಆರೋಗ್ಯ ವ್ಯವಸ್ಥೆಯು ತೀವ್ರ ಬಿಕ್ಕಟ್ಟಿನಲ್ಲಿದೆ, ಅದಾಗ್ಯೂ ಮೋದಿ ಸರ್ಕಾರ ಸೆಂಟ್ರಲ್ ವಿಸ್ಟಾ ಯೋಜನೆಯನ್ನು “ ಅಗತ್ಯ ಸೇವೆ” ಎಂದು ಪರಿಗಣಿಸಿ ಯೋಜನೆಯ ಕೆಲಸಗಳನ್ನು ಮುಂದುವರಿಸಲು ಅನುಮತಿ ನೀಡಿರುವುದಾಗಿ Scroll.in ವರದಿ ಮಾಡಿದೆ.

Previous Post

ಹಸಿವು ಮುಕ್ತ ರಾಜ್ಯವೋ- ಸಾವಿನ ರಾಜ್ಯವೋ?

Next Post

karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ

Related Posts

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ
Top Story

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು 27 ಕೋಟಿಗೂ ಹೆಚ್ಚು ಮೌಲ್ಯದ ಪ್ರಮುಖ ನಾವೀನ್ಯತೆ, ಜೈವಿಕ ತಂತ್ರಜ್ಞಾನ ಮತ್ತು ಕೈಗಾರಿಕೆ - ಶೈಕ್ಷಣಿಕ ಉಪಕ್ರಮಗಳನ್ನು ಅನುಮೋದಿಸಿದೆ ಎಂದ ಗೃಹ,...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

June 13, 2026
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
Next Post
karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು  ವಿತರಿಸಿ -ಸಿದ್ದರಾಮಯ್ಯ

karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada