ಕೋವಿಡ್ ನಾಲ್ಕನೆ ಅಲೆ ಆಗಸ್ಟ್ ವೇಳೆಗೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ವಿಧಾನ ಪರಿಷತ್ನ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್, ಕೋವಿಡ್ ರೂಪಾಂತರ ತಳಿಯು ಬಿ.ಎ.2 ಮೊದಲು ಫಿಲಿಫೈನ್ಸ್ನಲ್ಲಿ ಕಾಣಿಸಿಕೊಂಡಿತ್ತು ನಂತರ 40 ದೇಶಗಳಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಮೂರನೆ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಿದ ಸಂಸ್ಥೆಯೇ ನಾಲ್ಕನೆ ಅಲೆಯ ಮುನ್ಸೂಚನೆಯನ್ನು ನೀಡಿದೆ. ಬಹುತೇಕ ಆಗಸ್ಟ್ ನಲ್ಲಿ ಕೋವಿಡ್ ನಾಲ್ಕನೆ ಅಲೆ ಬರುವ ಮುನ್ಸೂಚನೆ ನೀಡಿದೆ ಎಂದು ಹೇಳಿದರು.

ನಮ್ಮಲ್ಲಿ ಲಸಿಕಾ ಅಭಿಯಾನ ಉತ್ತಮವಾಗಿದೆ. ಹಾಗಾಗಿ ನಾಲ್ಕನೆ ಅಲೆ ಎದುರಾದರೂ ಸಾರ್ವಜನಿಕರು ಹೆದರುವ ಅಗತ್ಯ ಇಲ್ಲ. ಆದರೆ ಕೋವಿಡ್ ತಡೆಯುವ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯ ಇದೆ. ಒಳಾಂಗಣದಲ್ಲಿ ಮಾಸ್ಕ ಕಡ್ಡಾಯ ಮಾಡುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಶೀಘ್ರವೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಈ ಬಗ್ಗೆ ನಡೆಸಿ ನಿರ್ಧರಿಸಲಾಗುವುದು ಎಂದು ಹೇಳಿದರು.