• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ನೆಪ: ಮಕ್ಕಳಿಲ್ಲದೆ ಶಾಲೆಗಳಲ್ಲಿ ಗಾಂಧಿ ಜಯಂತಿಗೆ ಸರ್ಕಾರದ ಸೂಚನೆ!

Any Mind by Any Mind
October 2, 2021
in ಕರ್ನಾಟಕ
0
ಕೋವಿಡ್ ನೆಪ: ಮಕ್ಕಳಿಲ್ಲದೆ ಶಾಲೆಗಳಲ್ಲಿ ಗಾಂಧಿ ಜಯಂತಿಗೆ ಸರ್ಕಾರದ ಸೂಚನೆ!
Share on WhatsAppShare on FacebookShare on Telegram

ಗಾಂಧಿ ಜಯಂತಿ ಆಚರಣೆಯ ಸಂಬಂಧ ಶುಕ್ರವಾರ ರಾಜ್ಯ ಸರ್ಕಾರ ತುರ್ತು ಸುತ್ತೋಲೆ ಹೊರಡಿಸಿದ್ದು, ಅಕ್ಟೋಬರ್ 2ರ ಶನಿವಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗಾಂಧೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಲ್ಲಿ ಕೇವಲ ಶಿಕ್ಷಕರು ಮತ್ತು ಸಿಬ್ಬಂದಿ ಮಾತ್ರ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

ಕೋವಿಡ್-19 ರ ಮಾರ್ಗಸೂಚಿ(ಎಸ್ ಒಪಿ) ಪ್ರಕಾರ ಆಚರಣೆಗಳನ್ನು ನಡೆಸುವಂತೆ ಸೂಚಿಸಲಾಗಿದ್ದು, ಈ ಸಂಬಂಧ ಕಳೆದ ಜೂನ್ ನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರಕಾರ ಎಲ್ಲಾ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಕೇವಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾತ್ರ ಹಾಜರಿದ್ದು, ಆಚರಣೆ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಈ ಆದೇಶ, ರಾಜ್ಯದ ಎಲ್ಲಾ ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗಲಿದ್ದು, ಶಾಲಾ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ.

ಆದರೆ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದೆಯೇ? ಅಥವಾ ಇನ್ನಾವುದಾದರೂ ಕಾರಣವಿದೆಯೇ? ಎಂಬ ಜಿಜ್ಞಾಸೆಗೆ ಈ ದಿಢೀರ್ ಆದೇಶ ಕಾರಣವಾಗಿದೆ. ಏಕೆಂದರೆ, ಕಳೆದ ಒಂದೂವರೆ ತಿಂಗಳುಗಳಿಂದ ಆರನೇ ತರಗತಿ ನಂತರದ ವಿದ್ಯಾರ್ಥಿಗಳು ನಿತ್ಯ ಶಾಲೆಗಳಿಗೆ ಹೋಗಿ ಬರುತ್ತಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮಕ್ಕಳು ಮಾಸ್ಕ್ ಧರಿಸುವುದನ್ನು ಹೊರತುಪಡಿಸಿ ಉಳಿದ ಯಾವುದೇ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದು ದುಸ್ತರವಾಗಿದೆ. ತರಗತಿಗಳ ಒಳಗೆ ಮಕ್ಕಳು ಕುಳಿತು ಪಾಠಪ್ರವಚನ ಕೇಳುತ್ತಿದ್ದಾರೆ.

ಹಾಗಿರುವಾಗ, ಮಾಸ್ಕ್ ಧರಿಸಿ ಮಕ್ಕಳು ಎಂದಿನಂತೆ ಆಯಾ ತರಗತಿಗಳಲ್ಲೇ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನೂ ಆಚರಿಸಲು ಏನು ಅಡ್ಡಿ ಇತ್ತು? ಯಾವುದೇ ಗುಂಪುಗೂಡಿ ಸಮಾರಂಭ ಮಾಡದೇ ಹೋದರೂ, ಕನಿಷ್ಟ ಗಾಂಧಿ ಮತ್ತು ಶಾಸ್ತ್ರಿಯವರ ಬದುಕು, ಹೋರಾಟ ಮತ್ತು ಆದರ್ಶಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸುವ ಭಾಷಣ, ಪ್ರಬಂಧ, ಚಿತ್ರಕಲೆಯಂತಹ ಚಟುವಟಿಕೆ ನಡೆಸಲು ಯಾವ ನಿಯಮವೂ ಅಡ್ಡಿ ಬರುತ್ತಿರಲಿಲ್ಲ. ಶಿಕ್ಷಕರೇ ಆ ಚಟುವಟಿಕೆಗಳನ್ನು ಎಂದಿನ ಪಾಠ-ಪ್ರವಚನದ ರೀತಿಯಲ್ಲೇ ಮಾಡಲು ಅವಕಾಶವಿತ್ತು. ಆದರೂ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರಿ ಅವರ ಜನ್ಮದಿನಾಚರಣೆಯ ಸಂದರ್ಭವನ್ನು ದೇಶದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾತ್ಮರ ಜೀವನಗಾಥೆಯ ಬಗ್ಗೆ ಎಳೆಯರಲ್ಲಿ ಅರಿವು ಮೂಡಿಸುವ, ದೇಶದ ಬಗ್ಗೆ ಹೆಮ್ಮೆ ಮೂಡಿಸುವ ಅವಕಾಶವಾಗಿ ಬಳಸಿಕೊಳ್ಳುವ ವಿಷಯವನ್ನು ರಾಜ್ಯ ಬಿಜೆಪಿ ಸರ್ಕಾರ, ಕೋವಿಡ್ ನೆಪದಲ್ಲಿ ಚೆಲ್ಲಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಅದರಲ್ಲೂ ಕೊನೇ ಕ್ಷಣದಲ್ಲಿ ಇಂತಹ ಅವೈಜ್ಞಾನಿಕ ಮತ್ತು ಅತಾರ್ಕಿಕ ಸುತ್ತೋಲೆ ಹೊರಬೀಳುವ ಹಿಂದೆ ಬಿಜೆಪಿಯ ಸಂಘಪರಿವಾರದ ಕೈವಾಡದ ಶಂಕೆ ವ್ಯಕ್ತವಾಗಿದೆ. ಗಾಂಧಿಯನ್ನು ದ್ವೇಷಿಸುವ ಮತ್ತು ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವುದನ್ನೇ ತಮ್ಮ ರಾಜಕೀಯ ಕಾರ್ಯಸೂಚಿಯ ಭಾಗವಾಗಿಸಿಕೊಂಡಿರುವ ಪಕ್ಷವೊಂದು, ಕೋವಿಡ್ ನಂತಹ ಪರಿಸ್ಥಿತಿಯನ್ನೇ ನೆಪ ಮಾಡಿಕೊಂಡು ದೇಶದ ಭವಿಷ್ಯದ ತಲೆಮಾರಿನ ಪ್ರಜ್ಞೆಯಿಂದ ಮಹಾತ್ಮಾ ಗಾಂಧಿ ಎಂಬ ವ್ಯಕ್ತಿತ್ವವನ್ನೇ ಅಳಿಸಿಹಾಕುವ ಹುನ್ನಾರ ಇಂತಹ ಸುತ್ತೋಲೆಯ ಹಿಂದಿದೆಯೇ ಎಂಬ ಚರ್ಚೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶ ವಿವಾದದ ಸ್ವರೂಪ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

Gandhi-Shastri-Jayanthi-2021-011021Download
Tags: ಕೋವಿಡ್-19ಗಾಂಧಿ ಜಯಂತಿಬಿಜೆಪಿಲಾಲ್ ಬಹಾದ್ದೂರ್ ಶಾಸ್ತ್ರಿಶಿಕ್ಷಣ ಇಲಾಖೆಸಂಘಪರಿವಾರ
Previous Post

ರಾಜ್ಯದಲ್ಲಿ ಲಸಿಕೆ ಪಡೆದ 15 ಸಾವಿರ ಮಂದಿಯಲ್ಲಿ ಕರೋನಾ ಸೋಂಕು ದೃಢ : ಲಸಿಕೆ ಅವಧಿ ಕಡಿತಕ್ಕೆ ಚಿಂತನೆ!

Next Post

ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada