• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಸಿಕೆಗಾಗಿ ಮೀಸಲಿಟ್ಟ 35 ಸಾವಿರ ಕೋಟಿ ಲೆಕ್ಕ ಕೊಡಿ ಎಂದ ಸುಪ್ರೀಂಕೋರ್ಟ್!

Any Mind by Any Mind
June 3, 2021
in ದೇಶ
0
ಲಸಿಕೆಗಾಗಿ ಮೀಸಲಿಟ್ಟ 35 ಸಾವಿರ ಕೋಟಿ ಲೆಕ್ಕ ಕೊಡಿ ಎಂದ ಸುಪ್ರೀಂಕೋರ್ಟ್!
Share on WhatsAppShare on FacebookShare on Telegram

ಕೇಂದ್ರ ಬಿಜೆಪಿ ಸರ್ಕಾರದ ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಕಾರ್ಯಕ್ರಮದ ವಿಷಯದಲ್ಲಿ ಹಂತ ಹಂತದ ವೈಫಲ್ಯಗಳನ್ನು ಬಯಲಿಗೆಳೆಯುತ್ತಿರುವ ಸುಪ್ರೀಂಕೋರ್ಟ್, ಬುಧವಾರ ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಎತ್ತಿದ್ದು, ಕಳೆದ ಬಜೆಟ್ನಲ್ಲಿ ಲಸಿಕೆ ಕಾರ್ಯಕ್ರಮಕ್ಕಾಗಿಯೇ ಮೀಸಲಿಟ್ಟಿದ್ದ ಬರೋಬ್ಬರಿ 35 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಬಳಸಿ 18-44 ವರ್ಷ ವಯೋಮಾನದವರಿಗೂ ಉಚಿತ ಲಸಿಕೆ ನೀಡುವುದು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದೆ.

ADVERTISEMENT

ಆ ಮೂಲಕ ಲಸಿಕೆ ವಿಷಯದಲ್ಲಿ ಅನುಸರಿಸುತ್ತಿರುವ ದ್ವಿಮುಖ ನೀತಿಯನ್ನು ನ್ಯಾಯಾಲಯ ಎತ್ತಿ ತೋರಿಸುವ ಮೂಲಕ, ಪ್ರಧಾನಿ ಮೋದಿಯವರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕೋವಿಡ್ ಮೊದಲ ಅಲೆಯ ವೇಳೆ ಬರೋಬ್ಬರಿ 20 ಲಕ್ಷ ಕೋಟಿ ಆತ್ಮನಿರ್ಭರ ಭಾರತ ಪ್ಯಾಕೇಜ್ ಎಂದು ಘೋಷಣೆ ಮಾಡಿ, ದೇಶದ ಯಾವ ವ್ಯಕ್ತಿಗೂ ನಯಾಪೈಸೆ ಪ್ರಯೋಜನ ತಲುಪದೆ ತೀರಾ ಅಪಹಾಸ್ಯಕ್ಕೀಡಾಗಿದ್ದ ಮೋದಿಯವರ ಸರ್ಕಾರ, ಬಳಿಕ ಕಳೆದ ಬಜೆಟ್ ನಲ್ಲಿ ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿಯೂ, ಅದಕ್ಕಾಗಿ ಬರೋಬ್ಬರಿ 35 ಸಾವಿರ ಕೋಟಿ ರೂ. ಅನುದಾನದ ತೆಗೆದಿರಿಸುವುದಾಗಿಯೂ ಹೇಳಿತ್ತು. ಆತ್ಮನಿರ್ಭರ ಪ್ಯಾಕೇಜ್ ನಂತೆಯೇ ಈ ಲಸಿಕೆ ಅನುದಾನ ಕೂಡ ಸರ್ಕಾರದ ಜುಮ್ಲಾಗಳ ಸಾಲಿನ ಮತ್ತೊಂದು ಸೇರ್ಪಡೆ ಎಂಬ ಮಾತುಗಳು ಆಗಲೇ ಕೇಳಿಬಂದಿದ್ದವು.

ಇದೀಗ ಸರ್ವೋಚ್ಛ ನ್ಯಾಯಾಲಯ ಕೂಡ ದೇಶದ ಜನರ ಅಂತಹ ಅನುಮಾನ ಮತ್ತು ಪ್ರಶ್ನೆಗಳಿಗೆ ದನಿಯಾಗಿದ್ದು, ಜನರ ಪರವಾಗಿ ಸರ್ಕಾರದ ಮುಂದೆ ಪ್ರಶ್ನೆ ಇಟ್ಟಿದೆ.

ಬಿಜೆಪಿ ಕಾರ್ಯಕರ್ತರಿಗೆ ಲಸಿಕೆ ಶಿಬಿರ: ಶಾಸಕ ರಘು ವಿರುದ್ಧ ಗಂಭೀರ ಆರೋಪ

ಕಳೆದ ಫೆಬ್ರವರಿಯಲ್ಲಿ ಲಸಿಕೆಗಾಗಿ ಮೀಸಲಿಟ್ಟಿರುವ 35 ಸಾವಿರ ಕೋಟಿ ಹಣವನ್ನು ಈವರೆಗೆ ಹೇಗೆ ಕರ್ಚು ಮಾಡಲಾಗಿದೆ? ಎಂಬ ಬಗ್ಗೆ ವಿವರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿರುವ ನ್ಯಾ. ಡಿ ವೈ ಚಂದ್ರಚೂಡ್, ಎಲ್ ನಾಗೇಶ್ವರ್ ರಾವ್ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು, ಇದೇ ಅನುದಾನವನ್ನು ಬಳಸಿಕೊಂಡು ದೇಶದ 18-44 ವಯೋಮಾನದ ಗುಂಪಿನವರಿಗೂ ಉಚಿತವಾಗಿ ಲಸಿಕೆ ನೀಡುವುದು ಸಾಧ್ಯವಿಲ್ಲವೆ? ಎಂದೂ ಕೇಳಿದೆ.

ಕೋವಿಡ್ ವಿಷಯದಲ್ಲಿ ಪ್ರಧಾನಿ ಮೋದಿ ಸರ್ಕಾರ, ಆಮ್ಲಜನಕ, ಆಸ್ಪತ್ರೆ ಹಾಸಿಗೆ, ಆಂಬ್ಯುಲೆನ್ಸ್, ಸ್ಮಶಾನದಲ್ಲಿ ಶವಸಂಸ್ಕಾರ,.. ಹೀಗೆ ಪ್ರತಿ ಹಂತದಲ್ಲೂ ಎಡವಿ, ದೇಶದಲ್ಲಿ ಸಾವಿನ ಮೆರವಣಿಗೆಯೇ ಆರಂಭವಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ತೀರಾ ಹದಗೆಡುತ್ತಿರುವುದನ್ನು ಗಮನಿಸಿದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಈ ಪ್ರಕರಣವನ್ನು ಕೈಗೆತ್ತಿಕೊಂಡು, ವಿಚಾರಣೆ ನಡೆಸಿ ಪರಿಸ್ಥಿತಿ ನಿಭಾಯಿಸಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಿತ್ತು. ಜೊತೆಗೆ ಕೋವಿಡ್ ಚಿಕಿತ್ಸೆ, ಲಾಕ್ ಡೌನ್ ಮತ್ತು ಲಸಿಕೆ ಮತ್ತಿತರ ವಿಷಯಗಳನ್ನೂ ತನ್ನ ವಿಚಾರಣೆಯ ವ್ಯಾಪ್ತಿಗೆ ಸೇರಿಸಿಕೊಂಡು ದಿನಂಪ್ರತಿ ವಿಚಾರಣೆ ನಡೆಸಿ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿದೆ. ಆ ವಿಚಾರಣೆಯ ಮುಂದುವರಿದ ಭಾಗವಾಗಿ ಬುಧವಾರ ಪೀಠವು ಈ ಪ್ರಶ್ನೆಗಳನ್ನು ಕೇಳಿದೆ.

ಪ್ರಮುಖವಾಗಿ ಲಸಿಕೆ ದರದ ವಿಷಯದಲ್ಲಿ ಕೇಂದ್ರ ಸರ್ಕಾರದ ದ್ವಿಮುಖ ನೀತಿ, 18-44 ವಯೋಮಾನದವರಿಗೆ ಉಚಿತ ಲಸಿಕೆ ನೀಡದೆ, ಆ ಹೊಣೆಗಾರಿಕೆಯನ್ನು ರಾಜ್ಯ ಗಳಿಗೆ ವರ್ಗಾಯಿಸುವ ಮೂಲಕ ರಾಜ್ಯಗಳ ಮೇಲೆ ಸಂವಿಧಾನದ 14ನೇ ಪರಿಚ್ಛೇಧಕ್ಕೆ ವಿರುದ್ಧವಾಗಿ ಸಂಕಷ್ಟದ ಹೊತ್ತಲ್ಲಿ ಹಣಕಾಸು ಹೊರೆ ಹಾಕಿರುವುದು ಮುಂತಾದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಪೀಠವು, ಕೇಂದ್ರ ಸರ್ಕಾರಕ್ಕೆ ಈ ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ, ತನ್ನ ಈ ಪ್ರಶ್ನೆಗಳಿಗೆ ಸೂಕ್ತ ವಿವರ ಮತ್ತು ದಾಖಲೆಗಳೊಂದಿಗೆ ಪ್ರಮಾಣಪತ್ರ ಸಲ್ಲಿಸುವಂತೆ ತಾಕೀತು ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ಮುಂದೂಡಲಾಗಿದೆ.

ಒಟ್ಟಾರೆ, ಸುಪ್ರೀಂಕೋರ್ಟಿನ ಈ ಸೂಚನೆಗಳು ಪ್ರಧಾನಿ ಮೋದಿಯವರ ‘ಉದಾರ ಲಸಿಕಾ ನೀತಿ’ಯು ನಿಜವಾಗಿಯೂ ಎಷ್ಟು ಉದಾರ ಮತ್ತು ಎಷ್ಟು ಜನಪರ ಎಂಬ ಪ್ರಶ್ನೆಯ ಹಿನ್ನೆಲೆಯಲ್ಲಿ ಮಹತ್ವ ಪಡೆದಿದ್ದು, ಈವರೆಗೆ ಬಹುತೇಕ ಗೌಪ್ಯವಾಗಿಯೇ ಇರುವ ಲಸಿಕೆ ತಯಾರಿಕಾ ಸಂಸ್ಥೆಗಳು ಮತ್ತು ಕೇಂದ್ರ ಸರ್ಕಾರದ ನಡುವಿನ ವ್ಯವಹಾರಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೊಳಗಾಗಲು ಇಂಬು ನೀಡಿದೆ.

Previous Post

ರಾಜ್ಯದ ಕೋವಿಡ್ ಸಾವಿನ ಸಂಖ್ಯೆ ಬಿಚ್ಚಿಟ್ಟ ಕರೋನಾ ಕರಾಳತೆ..!

Next Post

ಪರೀಕ್ಷೆ ಇಲ್ಲದೆ ಪಾಸ್ ಮಾಡಿ, ವಿದ್ಯಾರ್ಥಿಗಳ ಜೀವ ಉಳಿಸಿ -ವಾಟಾಳ್ ನಾಗರಾಜ್ ಆಗ್ರಹ

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

November 17, 2025
Next Post
ಪರೀಕ್ಷೆ ಇಲ್ಲದೆ ಪಾಸ್ ಮಾಡಿ, ವಿದ್ಯಾರ್ಥಿಗಳ ಜೀವ ಉಳಿಸಿ -ವಾಟಾಳ್ ನಾಗರಾಜ್ ಆಗ್ರಹ

ಪರೀಕ್ಷೆ ಇಲ್ಲದೆ ಪಾಸ್ ಮಾಡಿ, ವಿದ್ಯಾರ್ಥಿಗಳ ಜೀವ ಉಳಿಸಿ -ವಾಟಾಳ್ ನಾಗರಾಜ್ ಆಗ್ರಹ

Please login to join discussion

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada