• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ ಲಸಿಕೆ ಹಾಕಿಸಿದ ಬಳಿಕ ಕಂಡುಬರುವ ʼಗಂಭೀರವಲ್ಲದʼ ಸಂಭಾವ್ಯ ಅಡ್ಡಪರಿಣಾಮಗಳಿವು!

Any Mind by Any Mind
May 17, 2021
in ದೇಶ
0
ಕೋವಿಡ್‌ ಲಸಿಕೆ ಹಾಕಿಸಿದ ಬಳಿಕ ಕಂಡುಬರುವ ʼಗಂಭೀರವಲ್ಲದʼ ಸಂಭಾವ್ಯ ಅಡ್ಡಪರಿಣಾಮಗಳಿವು!
Share on WhatsAppShare on FacebookShare on Telegram

ಭಾರತದಲ್ಲಿ ಇದುವರೆಗೂ ನೀಡಲಾಗುತ್ತಿದ್ದ ಕೋವಿಡ್‌ ವಿರೋಧಿ ಲಸಿಕೆಗಳಾದ ಕೋವಿಶೀಲ್ಡ್‌ ಹಾಗೂ ಕೊವಾಕ್ಸಿನ್‌ ಹೊರತಾಗಿ ಇದೀಗ ರಷ್ಯಾದಲ್ಲಿ ತಯಾರಾಗಿರುವ ಸ್ಪುಟ್ನಿಕ್‌ ವಿ ಕೋವಿಡ್‌ ಲಸಿಕೆ ನೀಡಿಕೆಗೂ ಚಾಲನೆ ನೀಡಲಾಗಿದೆ. ಶುಕ್ರವಾರ ಹೈದರಾಬಾದ್‌ನ ವ್ಯಕ್ತಿಯೊಬ್ಬರಿಗೆ ಈ ಲಸಿಕೆ ನೀಡಿ ಅಧಿಕೃತವಾಗಿ ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಅದರೊಂದಿಗೆ, ದೇಶದಲ್ಲಿ ಒಟ್ಟು ಮೂರು ವಿಧದ ಕೋವಿಡ್‌ ಲಸಿಕೆಗಳ ನೀಡಿಕೆ ಚಾಲ್ತಿಯಲ್ಲಿದೆ.

ADVERTISEMENT

ಕೋವಿಡ್‌ ಲಸಿಕೆಗಳ ಕುರಿತಂತೆ ಜನರಲ್ಲಿ ಅಪನಂಬಿಕೆ ಇರುವಂತೆಯೇ, ಲಸಿಕೆ ಪಡೆದುಕೊಂಡವರಲ್ಲಿ ಕಂಡು ಬಂದ ಕೆಲವು ಅಡ್ಡಪರಿಣಾಮಗಳ ಲಕ್ಷಣಗಳು ಲಸಿಕೆ ಕುರಿತಂತಹ ಭಯಕ್ಕೆ ಇನ್ನಷ್ಟು ಪುಷ್ಟಿ ನೀಡಿತ್ತು. ಆದರೆ, ಈ ಅಡ್ಡ ಪರಿಣಾಮಗಳು ಗಂಭೀರ ಅಪಾಯವಾದುದಲ್ಲ, ಸಾಮಾನ್ಯವಾದುದು ಎಂದು ತಜ್ಞರು ಹೇಳಿದ್ದಾರೆ. ಜಾಗತಿಕ ಲಸಿಕೆ ತಜ್ಞರೆ ಲಸಿಕೆ ಕುರಿತಂತೆ ಅಧ್ಯಯನ ನಡೆಸಿದ್ದು, ಅಡ್ಡ ಪರಿಣಾಮಗಳನ್ನು ಪಟ್ಟಿ ಮಾಡಿದ್ದಾರೆ. 

ಕೋವಿಶೀಲ್ಡ್, ಕೊವ್ಯಾಕ್ಸಿನ್ ಮತ್ತು ಸ್ಪುಟ್ನಿಕ್ ವಿ ಲಸಿಕೆಗಳನ್ನು ಹಾಕಿಸಿಕೊಂಡವರಲ್ಲಿ ಕಾಣಿಸಿಕೊಳ್ಳಬಹುದಾದ ;ಗಂಭೀರವಲ್ಲದʼ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

(ವಿ.ಸೂ: ಈ ಅಡ್ಡ ಪರಿಣಾಮಗಳು ಅಪಾಯಕಾರಿಯಲ್ಲ, ಸಾಮಾನ್ಯವಾದುದು ಹಾಗೂ ಪ್ರತಿಯೊಬ್ಬರಲ್ಲಿಯೂ ಅಡ್ಡಪರಿಣಾಮ ಉಂಟಾಗಬೇಕೆಂದಿಲ್ಲ)

ಕೊವ್ಯಾಕ್ಸಿನ್ – Covaxin

ನಿಷ್ಕ್ರಿಯಗೊಳಿಸಿದ ‘ಸಾರ್ಸ್‌–ಕೊವ್–2’ ಆಂಟಿಜೆನ್ ವೈರಸ್‌ ಬಳಸಿಕೊಂಡು ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಲಾಗಿದೆ. (ಅಂದರೆ ಮೃತಪಟ್ಟ ವೈರಸ್‌ ಬಳಸಿಕೊಂಡು) ಈ ಲಸಿಕೆಯು, ಜೀವಂತ ವೈರಸ್ ದೇಹವನ್ನು ಬಾಧಿಸಿದಾಗ ಅದರ ವಿರುದ್ಧ ಹೋರಾಡಲು ಶರೀರವನ್ನು ಅಣಿಗೊಳಿಸುವ ಕೆಲಸ ಮಾಡುತ್ತದೆ.

ಈ ಲಸಿಕೆ ಹಾಕಿಸಿಕೊಂಡವರಲ್ಲಿ, ಚುಚ್ಚಿಸಿಕೊಂಡ ಜಾಗ ಕೆಂಪು ಬಣ್ಣಕ್ಕೆ ತಿರುಗುವುದು, ಬಾವು, ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನು ಕೆಲವರಲ್ಲಿ ಜ್ವರ, ಶೀತ, ಅತಿಯಾಗಿ ಬೆವರುವುದು, ತುರಿಕೆ, ವಾಂತಿ, ತಲೆನೋವು ಕಾಣಿಸಿಕೊಳ್ಳಬಹುದು. ಆದರೆ, ಇದುವರೆಗೆ ಈ ಲಸಿಕೆ ಹಾಕಿಸಿಕೊಂಡವರಲ್ಲಿ ಯಾವುದೇ ಗಂಭೀರ ಅಡ್ಡಪರಿಣಾಮಗಳು ಕಾಣಿಸಿಕೊಂಡಿಲ್ಲ.

ಈ ಲಸಿಕೆಯನ್ನು ಭಾರತ್‌ ಬಯೋಟೆಕ್‌ ಹಾಗೂ ಐಸಿಎಂಆರ್‌ ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

ಸ್ಪುಟ್ನಿಕ್ ವಿ – Sputnik V 

ಹೊಸದಾಗಿ ಭಾರತದಲ್ಲಿ ಲಸಿಕೆ ಚಾಲನೆ ಆರಂಭಗೊಂಡಿರುವ ಸ್ಪುಟ್ನಿಕ್‌ ವಿಯನ್ನು ಸಾಮಾನ್ಯ ಶೀತ, ನೆಗಡಿಗೆ ಕಾರಣವಾಗುವ ‘ಎಡಿ26’, ‘ಎಡಿ5’ ಮತ್ತು ‘ಸಾರ್ಸ್‌–ಕೊವ್–2’ ವೈರಸ್‌ಗಳನ್ನು ಸಂಯೋಜಿಸಿ ಸಿದ್ಧಪಡಿಸಲಾಗಿದೆ. ಇದು ದೇಹವನ್ನು ಕೋವಿಡ್‌ ಸೋಂಕಿನ ವಿರುದ್ಧ ಪ್ರತಿಕಾಯ ಸೃಷ್ಟಿಗೆ ಪ್ರೇರೇಪಣೆ ನೀಡುತ್ತದೆ. ಈ ಲಸಿಕೆ ಹಾಕಿಸಿಕೊಂಡವರಲ್ಲಿ ತಲೆನೋವು, ಆಯಾಸ, ಚುಚ್ಚುಮದ್ದು ತೆಗೆದುಕೊಂಡ ಜಾಗದಲ್ಲಿ ನೋವು, ಜ್ವರ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಆದರೆ, ಗಂಭೀರವಾದ ಯಾವುದೇ ಅಡ್ಡಪರಿಣಾಮಗಳು ಈವರೆಗೆ ಕಂಡುಬಂದಿಲ್ಲ. ವಿರಳಾತಿ ವಿರಳ ಪ್ರಕರಣಗಳಲ್ಲಿ ಲಸಿಕೆ ಹಾಕಿಸಿಕೊಂಡ ಕೆಲವರಲ್ಲಿ ಅಧಿಕ ರಕ್ತದೊತ್ತಡ, ರಕ್ತ ಹೆಪ್ಪುಗಟ್ಟುವಿಕೆ ಕಾಣಿಸಿಕೊಂಡಿದೆ. ಆದರೆ ಲಸಿಕೆ ಹಾಕಿದ್ದರಿಂದ ಈ ಸಮಸ್ಯೆ ಉಂಟಾಗಿದೆ ಎಂಬುವುದನ್ನು ದೃಢಪಡಿಸುವ ಯಾವ ಅಂಶಗಳೂ ಪತ್ತೆಯಾಗಿಲ್ಲ.

ಕೋವಿಶೀಲ್ಡ್ – Covishield

ಈ ಲಸಿಕೆಯನ್ನು ಆಕ್ಸ್‌ಫರ್ಡ್‌–ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಸದ್ಯ 62 ದೇಶಗಳಲ್ಲಿ ಈ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗುತ್ತಿದೆ. ಚಿಂಪಾಂಜಿಯಲ್ಲಿ ಜ್ವರಕ್ಕೆ ಕಾರಣವಾಗುವ ವೈರಸ್ಸೊಂದನ್ನು ನಿಷ್ಕ್ರಿಯಗೊಳಿಸಿ ಅದಕ್ಕೆ ಕರೊನಾ ವೈರಸ್‌ ಮಾದರಿಯ ಪ್ರತಿರೂಪವನ್ನು ಸೇರಿಸಿ ಅಭಿವೃದ್ಧಿಪಡಿಸಿರುವ ಲಸಿಕೆ ಇದು.

ಈ ಲಸಿಕೆ ಹಾಕಿಸಿಕೊಂಡಾಗ, ಇದನ್ನು ಕರೊನಾ ವೈರಸ್ ಎಂದು ಭಾವಿಸಿ ದೇಹವು ಪ್ರತಿಕಾಯಗಳನ್ನು ಸೃಷ್ಟಿಸುತ್ತದೆ. ಕೊವ್ಯಾಕ್ಸಿನ್‌ ಅಡ್ಡ ಪರಿಣಾಮದಂತೆಯೇ ಈ ಲಸಿಕೆ ಪಡೆದ ಕೆಲವರ ಪೈಕಿಯೂ ಚುಚ್ಚುಮದ್ದು ಹಾಕಿಸಿಕೊಂಡ ಜಾಗದಲ್ಲಿ ಚರ್ಮ ಕೆಂಪಾಗುವಿಕೆ, ನೋವು, ಸಾಮಾನ್ಯ ಅಥವಾ ತೀವ್ರ ಜ್ವರ, ನಿದ್ದೆ ತೂಗುವುದು, ಉದಾಸೀನತೆ, ತೋಳು ಬಿಗಿಯಾಗುವುದು ಹಾಗೂ ದೇಹದಲ್ಲಿ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ಕೆಲವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಂತಹ ಗಂಭೀರ ಅಡ್ಡಪರಿಣಾಮಗಳು ವರದಿಯಾಗಿವೆ. ಆದರೆ ಅವು ತೀರಾ ವಿರಳಾತಿ ವಿರಳವಾಗಿದ್ದು ಅದಕ್ಕೆ ಬೇರೆ ಕಾರಣಗಳೂ ಇರಬಹುದೆಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಇದಕ್ಕೂ ಭಯಪಡಬೇಕಾದ ಅವಶ್ಯಕತೆ ಇಲ್ಲ.

Inputs: DH

Previous Post

DRDO ಅಭಿವೃದ್ಧಿಪಡಿಸಿದ ಕೋವಿಡ್‌ ನಿರೋಧಕ ʼಔಷಧಿʼ ಇಂದು ಬಿಡುಗಡೆ

Next Post

ಸ್ಮಶಾನ ಕಾರ್ಮಿಕರ ತಕ್ಷಣದ & ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಂತೆ ಚೇತನ್ ವಿನಂತಿ

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಸ್ಮಶಾನ ಕಾರ್ಮಿಕರ ತಕ್ಷಣದ & ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಂತೆ ಚೇತನ್ ವಿನಂತಿ

ಸ್ಮಶಾನ ಕಾರ್ಮಿಕರ ತಕ್ಷಣದ & ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಂತೆ ಚೇತನ್ ವಿನಂತಿ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada