• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ: ಸಚಿವ ಸಿ.ಪಿ.ಯೋಗೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
July 15, 2021
in ಕರ್ನಾಟಕ, ರಾಜಕೀಯ
0
ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ: ಸಚಿವ ಸಿ.ಪಿ.ಯೋಗೇಶ್ವರ್
Share on WhatsAppShare on FacebookShare on Telegram

ವಿಶ್ವವಿಖ್ಯಾತ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ಇದೇ ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ರವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ.

ADVERTISEMENT

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

 ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧೂ ರೂಪೇಶ್, ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಕೆ.ಎಸ್.ಟಿ.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸಚಿವ ಯೋಗೇಶ್ವರ ಅವರು ಅಧಿಕಾರಿಗಳಿಗೆ  ಹೇಳಿದರು.

AARCON INFRA ಸಂಸ್ಥೆಯವರು ನಂದಿ ಬೆಟ್ಟದ ರೋಪ್ ವೇ ಯೋಜನೆಯ ಪ್ರಾತ್ಯಕ್ಷಿತೆ ಪ್ರದರ್ಶಿಸಿದರು.

ರೋಪ್ ವೇ ನಿರ್ಮಾಣದಲ್ಲಿ ಈ ಸಂಸ್ಥೆಗೆ 51 ವರ್ಷಗಳ ಅನುಭವವಿದ್ದು, ದೇಶ ವಿದೇಶ ಹಾಗೂ ನಮ್ಮ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ 64 ರೋಪ್ ವೇ ಗಳನ್ನು ನಿರ್ಮಾಣ ಮಾಡಿದ್ದಾರೆ.

ರಾಜ್ಯದ ಪ್ರಪ್ರಥಮ ರೋಪ್ ವೇ ಯನ್ನು ಪ್ರವಾಸಿಗರಿಗೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಸಭೆಯಲ್ಲಿ ಸೂಚಿಸಿದರು.

 ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕೀಟ್ ನಿರ್ಮಾಣ:

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒರಿಸ್ಸಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆಯನ್ನು ಪ್ರವಾಸಿಗರಿಗೆ ಒದಗಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ.

 ಜೈನ ಕಾಶಿ ಶ್ರವಣಬೆಳಗೊಳದಲ್ಲಿ ಇದೇ ಮಾದರಿಯಲ್ಲಿ ಬಾಹುಬಲಿಯ ಇತಿಹಾಸವನ್ನು ಹೇಳುವ ಒಂದು ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಥಿಯೇಟರ್‌ನಲ್ಲಿ ಪ್ರದರ್ಶಿಸಲಾಗುವುದು. ನಂತರ ಪ್ರವಾಸಿಗರು ಗೋಮಟೇಶ್ವರ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಪ್ರವಾಸಿಗರಿಗೆ ಬಾಹುಬಲಿಯ ಸಂಪೂರ್ಣ ಇತಿಹಾಸದ ಮಾಹಿತಿಯನ್ನು ನೀಡಲಾಗುವುದು.

ಮೈಸೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ ಹೈಟೆಕ್ ಹಾಥ್ ವೇ ನಿರ್ಮಾಣ:

ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಅತ್ಯಾಧುನಿಕವಾದ ಕಲೆ, ಸಂಸ್ಕೃತಿ, ಜಾನಪದ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಥ್ವೇ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮೂರು ಹಂತಗಳಲ್ಲಿ ಈ ಬೃಹತ್ ಹಾಥ್ವೇ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಅತೀ ಶೀಘ್ರದಲ್ಲಿ ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂದಾಜು ರೂ.100.00ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲು ಬಂಡವಾಳ ಆರ್ಕಷಿಸುವ ಸಂಬಂಧ THE INDIA EXPO-2023 ಬೃಹತ್ ಮೇಳವನ್ನು ಆಯೋಜಿಸಲು ಕಾರ್ಯೋನ್ಮಖರಾಗುವಂತೆ ಸಚಿವ ಯೋಗೇಶ್ವರ ರವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ವಿಸ್ತರಣೆಗೆ ವಿಫುಲ ಅವಕಾಶಗಳಿವೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿ ದೇಶ ವಿದೇಶಗಳ ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರವಾಸಿ ಮೇಳವನ್ನು ಏರ್ಪಡಿಸುವ ಮೂಲಕ ಬಂಡವಾಳವನ್ನು ಆಕರ್ಷಿಸಬೇಕು ಎಂದರು.

ಇದೇ ವೇಳೆ ONE IRIS ಕಂಪನಿಯವರು ಪ್ರವಾಸೋದ್ಯಮ ಮೇಳದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು.

Tags: CP YogeshwarMysoreNandiHillshravanabelagola
Previous Post

ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು: ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022ರ ಫೆಬ್ರವರಿಗೆ ಮುಂದೂಡಿಕೆ

Next Post

ಸುಪ್ರೀಂ ಚಾಟಿ ಬಳಿಕ IT ಸೆಕ್ಷನ್‌ 66ಎ ಅಡಿ ಪ್ರಕರಣ ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಸುಪ್ರೀಂ ಚಾಟಿ ಬಳಿಕ IT ಸೆಕ್ಷನ್‌ 66ಎ ಅಡಿ ಪ್ರಕರಣ ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ

ಸುಪ್ರೀಂ ಚಾಟಿ ಬಳಿಕ IT ಸೆಕ್ಷನ್‌ 66ಎ ಅಡಿ ಪ್ರಕರಣ ದಾಖಲಿಸದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada