ಗುದ್ದಾಡಿದರೆ ಗಂಧದ ಜೊತೆ ಗುದ್ದಾಡಬೇಕು, ಹಂದಿಯ ಜೊತೆಯಲ್ಲ, ನಾನು ಮಾಜಿ ಸಿಎಂ ಸಿದ್ದರಾಮಯ್ಯ, ಡಾ.ಎಚ್. ಸಿ ಮಹದೇವಪ್ಪ ಜೊತೆ ಚರ್ಚೆಗೆ ಸಿದ್ಧನಿದ್ದೇನೆ ಎಂದು ಸಂಸದ ಪ್ರತಾಪ್ಸಿಂಹ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಟಾಂಗ್ ನೀಡಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ವೀರರು ಶೂರರು ಕುದುರೆ ಏರಿ ಯುದ್ದಕ್ಕೆ ಬರುತ್ತಾರೆ ಆದರೆ ನೀವೇಕೆ ಹಂದಿ ಏರಿ ಬರುವುದಕ್ಕೆ ಮುಂದಾಗಿದ್ದೀರಿ? ನೀವು ನನ್ನ ಜೊತೆ ಚರ್ಚೆಗೆ ಹಂದಿಯನ್ನು ಕಳಿಸಿದ್ದೀರಿ, ಅದಕ್ಕೆ ನಾವು ಹಂದಿ ಹೊಡೆಯುವವರನ್ನು ಕಳಿಸಿದ್ದೇವೆ. ಹಂದಿ ಹೊಡೆದು ಬಾ ಹೋಗು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನೇ ಕಳುಹಿಸಿದ್ದೇವೆ, ಅವರು ಹಂದಿ ಹೊಡೆದು ಬಂದಿದ್ದಾರೆ,” ಎಂದು ಲೇವಡಿ ಮಾಡಿದರು.

ಡಾ ಮಹದೇವಪ್ಪ ನಿಮಗೆ ಈಗ ಏನು ಕೆಲಸ ಇದೆ ಹೇಳಿ ಸರ್ ? ನೀವು ಯಾಕೆ ಚರ್ಚೆಗೆ ಬರಬಾರದು, ನೀವು ಬನ್ನಿ ಚರ್ಚೆಗೆ, ಮೈಸೂರು-ಬೆಂಗಳೂರು ರಸ್ತೆಗೆ 9 ಪೈಸೆ ನೀವು ಕೊಟ್ಟಿದ್ದರೂ ಬನ್ನಿ ಚರ್ಚೆ ಮಾಡೋಣ. ಖಾಲಿಯಾಗಿ ಕೂತಿದ್ದೀರಿ, ಒಳ್ಳೆಯ ಚರ್ಚೆ ಮಾಡೋಣ ಬನ್ನಿ ಎಂದು ವ್ಯಂಗ್ಯವಾಡಿದ್ದಾರೆ.