• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಾಕ್‌ಡೌನ್‌ ಅವಧಿಯಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆ: ಸಂಘರ್ಷ ಹೆಚ್ಚಳ: NCRB ವರದಿ

ಫಾತಿಮಾ by ಫಾತಿಮಾ
September 16, 2021
in ದೇಶ
0
ಲಾಕ್‌ಡೌನ್‌ ಅವಧಿಯಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆ: ಸಂಘರ್ಷ ಹೆಚ್ಚಳ: NCRB ವರದಿ
Share on WhatsAppShare on FacebookShare on Telegram

2020ರಲ್ಲಿ ದೇಶ ಮೊದಲ ಬಾರಿ ರಾಷ್ಟ್ರೀಯ ಲಾಕ್‌ಡೌನ್ನನು ಕಂಡಿತ್ತು. ಈ ಅವಧಿಯಲ್ಲಿ ಸಾಂಪ್ರದಾಯಿಕ ಅಪರಾಧಗಳಾದ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕಡಿಮೆ ದಾಖಲಾದವು ಆದರೆ ಇದು ದೊಡ್ಡ ಮಟ್ಟದ ನಾಗರಿಕ ಸಂಘರ್ಷಗಳಿಗೆ ಕಾರಣವಾಯಿತು.

ADVERTISEMENT

ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (NCRB) ಬಿಡುಗಡೆ ಮಾಡಿದ ‘ಕ್ರೈಮ್ ಇನ್ ಇಂಡಿಯಾ’ದ ಇತ್ತೀಚಿನ ಮಾಹಿತಿಯ ಪ್ರಕಾರ, 2020 ರಲ್ಲಿ ಕೋಮು ಗಲಭೆಗಳು ಹಿಂದಿನ ವರ್ಷಕ್ಕಿಂತ 96% ಹೆಚ್ಚಳವನ್ನು ದಾಖಲಿಸಿವೆ.  ಅಂತೆಯೇ, ಜಾತಿ ಗಲಭೆಗಳು 50%, ಕೃಷಿ ಗಲಭೆಗಳು 38%ಮತ್ತು ‘ಆಂದೋಲನ/ಪ್ರತಿಭಟನಾ’ ಸಮಯದಲ್ಲಿನ ಗಲಭೆಗಳು 33%ಹೆಚ್ಚಾಗಿದೆ.

ಕಳೆದ ವರ್ಷ ಮಾರ್ಚ್ 25 ಮತ್ತು ಮೇ 31 ರಿಂದ ಸಂಪೂರ್ಣ ಲಾಕ್ಡೌನ್ನಿಂದಾಗಿ, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರೀಕರ ವಿರುದ್ಧದ ಪ್ರಕರಣಗಳು, ಕಳ್ಳತನ, ದರೋಡೆ ಮತ್ತು ದೌರ್ಜನ್ಯಗಳಂತಹ ಅಪರಾಧಗಳು ಸುಮಾರು 2 ಲಕ್ಷದಷ್ಟು ಕಡಿಮೆಯಾಗಿದೆ ಎಂದು ವರದಿ ಹೇಳಿದೆ.  ‘ಹಿಂಸಾತ್ಮಕ ಅಪರಾಧಗಳ’ ವರ್ಗದಲ್ಲಿ ಬರುವ ಅಪರಾಧಗಳು 0.5% ರಷ್ಟು ಕಡಿಮೆಯಾಗಿದ್ದರೂ ಸಹ ಕೊಲೆ 1% ನಷ್ಟು ಹೆಚ್ಚಳವನ್ನು ದಾಖಲಿಸಿದೆ.

ಈ ವರ್ಷವು ‘ದೇಶದ ವಿರುದ್ಧದ ಅಪರಾಧಗಳಿಗೆ’ ಸಂಬಂಧಿಸಿದ ಪ್ರಕರಣಗಳು ಗಮನಾರ್ಹ ಕುಸಿತವನ್ನು ಕಂಡಿದೆ, ಇವು 2019 ಕ್ಕಿಂತ 27% ನಷ್ಟು ಇಳಿಕೆಯಾಗಿದೆ. ಆದಾಗ್ಯೂ, ಹೆಚ್ಚಿನ ಸಂಖ್ಯೆಯ ಕಾರಣದಿಂದಾಗಿ ಈ ವರ್ಗದಲ್ಲಿ ಹೆಚ್ಚಳವನ್ನು ದಾಖಲಿಸಿದ ಏಕೈಕ ಪ್ರಮುಖ ರಾಜ್ಯ ಯುಪಿ.  ರಾಜ್ಯವು ದಾಖಲಿಸಿದ ‘ಸಾರ್ವಜನಿಕ ಆಸ್ತಿಗೆ ಹಾನಿ’ ಪ್ರಕರಣಗಳಲ್ಲಿ ಹಲವು ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭದ್ದು.

ಬಿಹಾರವು 117 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ, ಹರಿಯಾಣ ಮತ್ತು ಜಾರ್ಖಂಡ್ ತಲಾ 51, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ (26) ಮತ್ತು ಗುಜರಾತ್ (23) ಇವೆ.  ಡಾಟಾಗಳ ಪ್ರಕಾರ 2020 ರಲ್ಲಿ ಉತ್ತರ ಪ್ರದೇಶವು ಒಂದೇ ಒಂದು ಕೋಮುಗಲಭೆಯನ್ನು ದಾಖಲಿಸಿಲ್ಲ.

2019ರಲ್ಲಿ 492ರಷ್ಟಿದ್ದ ಜಾತಿ ಸಂಘರ್ಷದ ಪ್ರಕರಣಗಳು 2020 ರಲ್ಲಿ 736 ಕ್ಕೆ ಏರಿಕೆಯಾಗಿದೆ. ಬಿಹಾರದಲ್ಲಿ ಈ ವಿಭಾಗದಲ್ಲಿ 208, ಮಹಾರಾಷ್ಟ್ರ (125), ಯುಪಿ (116), ಕರ್ನಾಟಕ (95) ಮತ್ತು ತಮಿಳುನಾಡು (69) ಪ್ರಕರಣಗಳು ದಾಖಲಾಗಿವೆ.

ಆದರೆ ಈ ಎನ್‌ಸಿಆರ್‌ಬಿ ದತ್ತಾಂಶವು ಪೊಲೀಸರು ದಾಖಲಿಸಿದ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿರುತ್ತವೆ ಆದ್ದರಿಂದ ದತ್ತಾಂಶವು ಸಾಮಾನ್ಯವಾಗಿ ಪೊಲೀಸ್ ಸಿಬ್ಬಂದಿಯ ಪ್ರತಿಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ.

ಕೇಂದ್ರವು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ಅಭೂತಪೂರ್ವ ಪ್ರತಿಭಟನೆಗಳನ್ನು ಕಂಡ ಈ ವರ್ಷವು 2,188 ಕೃಷಿ ಗಲಭೆಗಳನ್ನು ದಾಖಲಿಸಿದೆ.

ಆದರೆ ಕುತೂಹಲಕಾರಿ ಪ್ರಕ್ರಿಯೆಯಲ್ಲಿ ಪಂಜಾಬ್ ನಲ್ಲಿ ಕೃಷಿ ಗಲಭೆಗಳ ಶೂನ್ಯ ಪ್ರಕರಣಗಳು ದಾಖಲಾಗಿದೆ.

ಹರಿಯಾಣ 34, ಬಿಹಾರ 1,286, ಮಹಾರಾಷ್ಟ್ರ 279, ಕರ್ನಾಟಕ 148, ಯುಪಿ 142 ಮತ್ತು ಜಾರ್ಖಂಡ್ನಲ್ಲಿ 83  ಪ್ರಕರಣಗಳು ವರದಿಯಾಗಿವೆ.

‘ಆಂದೋಲನ/ಪ್ರತಿಭಟನಾ’ ಸಮಯದ ಗಲಭೆಯ ಪ್ರಕರಣಗಳಲ್ಲಿ, ಕೇರಳವು 1,798 ಪ್ರಕರಣಗಳನ್ನು ದಾಖಲಿಸಿದೆ. ಇದು 2020 ಕ್ಕಿಂತ 95% ಹೆಚ್ಚು.

ಯುಎಪಿಎ ಪ್ರಕರಣಗಳು 2019 ಕ್ಕಿಂತ 2020 ರಲ್ಲಿ 35% ನಷ್ಟು ಇಳಿಕೆಯನ್ನು ದಾಖಲಿಸಿವೆ. ಅತಿಹೆಚ್ಚು UAPA ಪ್ರಕರಣಗಳು J&K (287) ನಲ್ಲಿ ದಾಖಲಾಗಿವೆ, ಮಣಿಪುರ (169), ಜಾರ್ಖಂಡ್ (86), ಅಸ್ಸಾಂ (76) ಮತ್ತು UP (72) ನಂತರದ ಸ್ಥಾನದಲ್ಲಿವೆ.

Tags: Corona LockdownCovid 19Crime Ratecrime storyLockdownlockdown effectnationwide lockdownNCRBಕೋವಿಡ್-19
Previous Post

ಕೇಂದ್ರ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ನ್ಯಾಯಮಂಡಳಿಗಳಿಗೆ ನೇಮಕಾತಿ ಆಯ್ಕೆ ಮಾಡುತ್ತಿದೆ: ಸುಪ್ರೀಂ ಕೋರ್ಟ್ ಆಕ್ಷೇಪ

Next Post

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಪುಣೆ ನ್ಯಾಯಾಲಯದಿಂದ ಎಲ್ಲಾ 5 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಪುಣೆ ನ್ಯಾಯಾಲಯದಿಂದ ಎಲ್ಲಾ 5 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಪುಣೆ ನ್ಯಾಯಾಲಯದಿಂದ ಎಲ್ಲಾ 5 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada