
ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ – K.A.S ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು
KAS ಅಧಿಕಾರಿ ಅಪೂರ್ವ ಬಿದರಿ, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಈ ಅಧಿಕಾರಿ ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತವಾಗಿ ಆದೇಶಗಳನ್ನು ಹೊರಡಿಸಿ ಮೇಲ್ಮನವಿ ಪ್ರಕರಣಗಳನ್ನು ವಿಲೇವಾರಿ ಮಾಡಿರುವ ವಿಧಾನಗಳನ್ನು ಪರಿಶೀಲಿಸುವ ಸಂಬಂಧ ತಂಡವನ್ನು ರಚಿಸಿ ಸದರಿ ಅಧಿಕಾರಿಯವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಇಲ್ಲಿಯವರೆಗೂ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲಿಸಿದಾಗ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ನ್ಯೂನ್ಯತೆಗಳು ಉಂಟಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಹೀಗಾಗಿ ಶ್ರೀಮತಿ ಅಪೂರ್ವ ಬಿದರಿಯವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಸೆಕ್ಷನ್ 35 ರಡಿಯಲ್ಲಿ ಹಾಗೂ ಭಾರತೀಯ ನ್ಯಾಯಸಂಹಿತೆ 257 ರಡಿಯಲ್ಲಿ ಶಿಸ್ತು ಕ್ರಮ ಜರುಗಿಸಬಹುದೆಂದು ಪ್ರಸ್ತಾವನೆಯನ್ನು ಉಲ್ಲೇಖ(2) ರಂತೆ ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂದು ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಸದರಿ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಿ, ಶ್ರೀಮತಿ ಅಪೂರ್ವ ಬಿದರಿ, ಕೆಎಎಸ್, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಬೆಂಗಳೂರು ನಗರ ಜಿಲ್ಲೆ ರವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮದ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257ರ ಅಡಿಯಲ್ಲಿ FIR ದಾಖಲಿಸಲು ಕ್ರಮ ಕೈಗೊಳ್ಳುವಂತೆ ಉಲ್ಲೇಖ (1) ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ.
ಆದ್ದರಿಂದ ಉಲ್ಲೇಖ (2) ರ ಪ್ರಸ್ತಾವನೆಯನ್ನು ಆಧರಿಸಿ, ಉಲ್ಲೇಖ (1) ರ ಸರ್ಕಾರದ ಪತ್ರದಲ್ಲಿ ನೀಡಿರುವ ನರ್ದೇಶನದಂತೆ ಶ್ರೀಮತಿ ಅಪೂರ್ವ ಬಿದರಿ, ಕೆಎಎಸ್, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಬೆಂಗಳೂರು ನಗರ ಜಿಲ್ಲೆ ಇವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257ರ ಅಡಿಯಲ್ಲಿ FIR ದಾಖಲಿಸಿ, ಸದರಿ FIR ಪ್ರತಿಯೊಂದಿಗೆ ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸಲು ಸೂಚಿಸಿದೆ ಎಂದು ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.