• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಚಿಕ್ಕನಾಯಕನಹಳ್ಳಿಯಲ್ಲಿ 98 ಜನರಿಗೆ ಅಕ್ರಮ ಮಂಜೂರಿ
• ತನಿಖಾ ತಂಡದಿಂದ ಹಲವಾರು ವಿಚಾರ ಬಯಲಿಗೆ
• ಭೂ ಕಬಳಿಕೆದಾರರ ವಿರುದ್ಧ ಎಫ್ಐಆರ್ ದಾಖಲು
• 2018ರಿಂದ ಸಂಬಂಧಿತ ಎಲ್ಲಾ ಅಧಿಕಾರಿಗಳ ವಿರುದ್ಧ ಕೇಸ್

ADVERTISEMENT

ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭ ಶಾಸಕರಾದ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 98 ಜನರಿಗೆ ರೈತರ ಹೆಸರಿನಲ್ಲಿ ಸಾಗುವಳಿ ಚೀಟಿ ನೀಡಿರುವ ಪ್ರಕರಣ ಇಲಾಖೆ ಗಮನದಲ್ಲಿದೆ. ಈ ನಕಲಿ ಸಾಗುವಳಿ ಚೀಟಿ ಮೇಲೆ ಖಾತೆಗೆ ಅರ್ಜಿ ಸಲ್ಲಿಸಿದ ಭೂ ಕಬಳಿಕೆದಾರರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲು ಮಾಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

“ರೈತರ ಹೆಸರಲ್ಲಿ ನಕಲಿ ಭೂ ಸಾಗುವಳಿ ಚೀಟಿ ನೀಡುತ್ತಿರುವ ವಿಚಾರ ನಮ್ಮ ಗಮನಕ್ಕೆ ಬಂದ ಕೂಡಲೇ ಕಳೆದ ನವೆಂಬರ್ 13 ರಂದೇ ತನಿಖಾ ತಂಡವನ್ನು ರೂಪಿಸಿ ಚಿಕ್ಕನಾಯಕನಹಳ್ಳಿಗೆ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಅಭಿಲೇಖಾಲಯದ ಅಧಿಕಾರಿಗಳ ಸಹಾಯ ಇಲ್ಲದೆ ಕಡತಗಳನ್ನು ತಿದ್ದಲು ಸಾಧ್ಯವಿಲ್ಲ. ಹೀಗಾಗಿ 2018 ರಿಂದ ಈವರೆಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಭಿಲೇಖಾಲಯದ ಉಸ್ತುವಾರಿ ವಹಿಸಿದ್ದ ಎಲ್ಲಾ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದರು.

“ನಕಲಿ ಸಾಗುವಳಿ ಚೀಟಿಯಲ್ಲಿರುವ ಅಧಿಕಾರಿಗಳ ಸಹಿ ಪೈಕಿ ಯಾರ ಸಹಿ ಅಸಲಿ, ಯಾರ ಸಹಿ ನಕಲಿ ಎಂದು ಪತ್ತೆ ಹಚ್ಚುವ ಕೆಲಸದಲ್ಲಿ ತನಿಖಾ ತಂಡ ನಿರತವಾಗಿದೆ. ನಿಜವಾದ ಸಹಿ ತಾಳೆಗೆ ಸಂಬಂಧಿಸಿದ ವರದಿ ನೀಡಲು ಅಧಿಕಾರಿಗಳು ಇನ್ನೂ ಒಂದು ವಾರ ಸಮಯ ಕೇಳಿದ್ದಾರೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ವರದಿ ಕೈಸೇರುತ್ತಿದ್ದಂತೆ ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವ ಜೊತೆಗೆ ಇಲಾಖೆ ಶಿಸ್ತುಕ್ರಮವನ್ನೂ ಜರುಗಿಸಲಾಗುವುದು” ಎಂದು ತಿಳಿಸಿದರು.

Tags: ashok vs krishna byre gowdaKrishna Byre Gowdakrishna byre gowda comedykrishna byre gowda familykrishna byre gowda in buskrishna byre gowda livekrishna byre gowda mlakrishna byre gowda newskrishna byre gowda speakskrishna byre gowda speechkrishna byre gowda todaykrishna byre gowda wifeKrishna Byregowdakrishna byregowda latest newskrishna byregowda meets nirmala sitharamankrishna byregowda newskrishna byregowda speechkrishna byregowda today newsMinister Krishna Byregowda
Previous Post

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

Next Post

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada