ಬೆಂಗಳೂರು : ಕಾಂಗ್ರೆಸ್ ತನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲನೆಯ ಯೋಜನೆಯನ್ನು ಇಂದು ಜಾರಿ ಮಾಡಿದೆ. ಇನ್ನು ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಧಿಕೃತ ಚಾಲನೆ ದೊರೆತ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಚುನಾವಣಾ ಸಂದರ್ಭದಲ್ಲಿ ಜನರಿಗೆ ಕೊಟ್ಟ 5 ಗ್ಯಾರಂಟಿಗಳಲ್ಲಿ ಮೊದಲನೇ ಗ್ಯಾರಂಟಿಯನ್ನು ತಲುಪಿಸಿದ್ದೇವೆ ಎಂದು ಹೇಳಿದರು.
ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ನೀಡಿದ್ದಾರೆ, ನಾವು ಅದನ್ನು ಉಳಿಸಿಕೊಳ್ಳುತ್ತೇವೆ. ವಿಪಕ್ಷಗಳ ಟೀಕೆಗೆ ಉತ್ತರ ನೀಡುವಷ್ಟು ದೊಡ್ಡವರು ನಾವಲ್ಲ, ನಮ್ಮ ಕೆಲಸವೇ ಅವರಿಗೆ ಉತ್ತರ ನೀಡುತ್ತದೆ ಎಂದು ಹೇಳಿದ್ದಾರೆ.
ಇನ್ನು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಬಿಜೆಪಿಯ ಆರೋಪಕ್ಕೂ ತಿರುಗೇಟು ನೀಡಿದ ಅವರು ಮಧ್ಯಪ್ರದೇಶದಲ್ಲಿ ಅವರದ್ದೇ ಸರ್ಕಾವಿದೆ. ಅಲ್ಲಿನ ಬಿಜೆಪಿ ಸರ್ಕಾರ ಕೂಡ ಮಹಿಳೆಯರಿಗೆ 1 ಸಾವಿರ ರೂಪಾಯಿ ಕೊಡೋದಾಗಿ ಹೇಳಿದೆ ಎಂದು ಹೇಳಿದರು.