• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಜಮೀರ್ ಅಹಮದ್ ಖಾನ್ ಮನೆಯಲ್ಲಿ ಕೋಟ್ಯಂತರ ಚಿನ್ನ ಕಳ್ಳತನ: ಕದ್ದವರು ಕಳ್ಳರಲ್ಲ ಶಾಸಕರಿಗೆ ಆಪ್ತರು!

ಪ್ರತಿಧ್ವನಿ by ಪ್ರತಿಧ್ವನಿ
May 6, 2026
in Top Story
0
ಸಚಿವ ಜಮೀರ್ ಅಹಮದ್ ಖಾನ್ ಮನೆಯಲ್ಲಿ ಕೋಟ್ಯಂತರ ಚಿನ್ನ ಕಳ್ಳತನ: ಕದ್ದವರು ಕಳ್ಳರಲ್ಲ ಶಾಸಕರಿಗೆ ಆಪ್ತರು!
Share on WhatsAppShare on FacebookShare on Telegram

ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆಯುತ್ತಿದ್ದ ಚಿನ್ನಾಭರಣ ಕಳ್ಳತನದ ಪ್ರಕರಣಕ್ಕೆ ತೆರೆ ಬಿದ್ದಿದೆ. ಬೆಂಗಳೂರಿನ ಶಿವಾಜಿನಗರ ಪೊಲೀಸರ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಹೊರಬಂದಿದ್ದು, ಕಳ್ಳತನ ನಡೆಸಿದ್ದು ಕುಟುಂಬದ ಸಂಬಂಧಿಯೇ ಎಂಬುದು ಬಹಿರಂಗವಾಗಿದೆ.ಈ ಪ್ರಕರಣದಲ್ಲಿ ಸೈಯದ್ ಅಮೀನ್ ಹಾಗೂ ಅವನ ಸ್ನೇಹಿತ ಅಮೀರ್ ಅಹಮದ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ ಒಂದು ಕಿಲೋಗ್ರಾಂಕ್ಕೂ ಹೆಚ್ಚು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸುಮಾರು ಒಂದು ಕೋಟಿ ಹದಿಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ADVERTISEMENT

ಬಂಧಿತ ಸೈಯದ್ ಅಮೀನ್ ಸಚಿವರ ತಾಯಿಯ ಹತ್ತಿರದ ಸಂಬಂಧಿಯಾಗಿದ್ದು, ಈ ನಂಟಿನಿಂದ ಮನೆಗೆ ಸುಲಭವಾಗಿ ಪ್ರವೇಶ ಹೊಂದಿದ್ದ. ಇದನ್ನೇ ದುರುಪಯೋಗಪಡಿಸಿಕೊಂಡು 2025ರಿಂದ ಹಂತ ಹಂತವಾಗಿ ಮನೆದಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ. ವಿಶೇಷವಾಗಿ ಮದುವೆ ಸಮಾರಂಭಗಳ ಸಂದರ್ಭಗಳಲ್ಲಿ ಆಭರಣಗಳನ್ನು ಎಗರಿಸುವುದೇ ಅವನ ಚಾಳಿಯಾಗಿತ್ತು.

ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಆರೋಪಿಗಳು ಸಾಲ ತೀರಿಸಲು ಈ ದುರಾಲೋಚನೆಗೆ ಕೈಹಾಕಿದ್ದರು. ಕಳವು ಮಾಡಿದ ಚಿನ್ನವನ್ನು ಅಡವಿಟ್ಟು ಹಣ ಪಡೆದು, ಅದನ್ನು ಜಮೀನು-ಮನೆ ವ್ಯವಹಾರದಲ್ಲಿ ಹೂಡಿಕೆ ಮಾಡುವ ಯೋಜನೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದ ಬಳಿಕ ಅಮೀನ್ ವರ್ತನೆ ಶಂಕಾಸ್ಪದವಾಗಿದ್ದು, ಮನೆಗೆ ಬರುವುದನ್ನೇ ನಿಲ್ಲಿಸಿದ್ದ. ಕರೆಗಳಿಗೆ ಪ್ರತಿಕ್ರಿಯಿಸದೆ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದ ಪೊಲೀಸರಿಗೆ ಅನುಮಾನ ಬಂದು ತನಿಖೆ ತೀವ್ರಗೊಳಿಸಲಾಯಿತು. ಕೊನೆಗೆ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯದ ಸಂಪೂರ್ಣ ಸತ್ಯ ಬಹಿರಂಗವಾಯಿತು.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಂಧಿತರಿಂದ 759 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ. ನಂಬಿದ್ದ ಸಂಬಂಧಿಯೇ ದ್ರೋಹ ಬಗೆದ ಈ ಘಟನೆ ಸಚಿವರ ಕುಟುಂಬವನ್ನು ಬೆಚ್ಚಿಬೀಳಿಸಿದೆ.

Tags: #BengaluruCrime#CrimeReport#FamilyBetrayal#GoldTheft#indianews#PoliceInvestigationbreakingnewscrimenewskarnatakanewspratidavaniShivajinagar
Previous Post

ಶೃಂಗೇರಿ ಪೋಸ್ಟಲ್ ವೋಟ್ಸ್ ಮರು ಎಣಿಕೆ: ಸತ್ಯ ಬಿಚ್ಚಿಟ್ಟ ಜೀವರಾಜ್ !

Next Post

ಕಾರ್ ಡ್ರೈವರ್ ಮಗನಿಗೂ ಟಿಕೆಟ್ ಕೊಟ್ಟ ವಿಜಯ್: ನಂತರ ಆಗಿದ್ದೇನು ?

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಕಾರ್ ಡ್ರೈವರ್ ಮಗನಿಗೂ ಟಿಕೆಟ್ ಕೊಟ್ಟ ವಿಜಯ್: ನಂತರ ಆಗಿದ್ದೇನು ?

ಕಾರ್ ಡ್ರೈವರ್ ಮಗನಿಗೂ ಟಿಕೆಟ್ ಕೊಟ್ಟ ವಿಜಯ್: ನಂತರ ಆಗಿದ್ದೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada