• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕ್ರಿಪ್ಟೊಕರೆನ್ಸಿಗಳು “ಚಿಟ್ ಫಂಡ್”ಗಳಿದ್ದಂತೆ: ಹೂಡಿಕೆದಾರರನ್ನು ಎಚ್ಚರಿಸಿದ ರಘುರಾಮ್ ರಾಜನ್

ಪ್ರತಿಧ್ವನಿ by ಪ್ರತಿಧ್ವನಿ
November 25, 2021
in ದೇಶ, ವಿದೇಶ
0
ಕ್ರಿಪ್ಟೊಕರೆನ್ಸಿಗಳು “ಚಿಟ್ ಫಂಡ್”ಗಳಿದ್ದಂತೆ: ಹೂಡಿಕೆದಾರರನ್ನು ಎಚ್ಚರಿಸಿದ ರಘುರಾಮ್ ರಾಜನ್
Share on WhatsAppShare on FacebookShare on Telegram

ಕ್ರಿಪ್ಟೊ ಕರೆನ್ಸಿಗಳು ಚಿಟ್ ಫಂಡ್ ಗಳಂತೆಯೇ ಹೂಡಿಕೆದಾರರಿಗೆ ಸಮಸ್ಯೆ ತಂದೊಡ್ಡುತ್ತವೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ. ಚಿಟ್ ಫಂಡ್ ಗಳು ಜನರಿಂದ ಹಣ ಸಂಗ್ರಹಿಸಿ ದಂಧೆ ನಡೆಸಿ ವಂಚಿಸುವಂತೆಯೇ ಕ್ರಿಪ್ಟೊ ಕರೆನ್ಸಿಗಳೂ ಸಹ. ಚಿಟ್ ಫಂಡ್ ಸಮಸ್ಯೆಯನ್ನೇ ಕ್ರಿಪ್ಟೊ ಕರೆನ್ಸಿ ಖರೀದಿಸಿರುವವರು ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದ್ದಾರೆ.

ADVERTISEMENT

ಕ್ರಿಪ್ಟೊ ಕರೆನ್ಸಿಗಳ ಭವಿಷ್ಯ ಕುರಿತಂತೆ ಮಾತನಾಡಿರುವ ರಘುರಾಮ್ ರಾಜನ್, ಪ್ರಸ್ತುತ ಅಸ್ತಿತ್ವದಲ್ಲಿರುವ ಬಹುತೇಕ ಕ್ರಿಪ್ಟೊ ಕರೆನ್ಸಿಗಳು ನಶಿಸಲಿವೆ ಎಂದೂ ಹೇಳಿದ್ದಾರೆ. ರಘುರಾಮ್ ರಾಜನ್ ಅವರ ಪ್ರಕಾರ, ವಿಶ್ವವ್ಯಾಪಿ ಸುಮಾರು 6,000 ಕ್ರಿಪ್ಟೊ ಕರೆನ್ಸಿಗಳು ಅಸ್ವಿತ್ವದಲ್ಲಿವೆ. ಈ ಪೈಕಿ ಒಂದೆರಡು, ಬಹಳ ಎಂದರೆ ಬೆರಳೆಣಿಕೆಯಷ್ಟು ಕ್ರಿಪ್ಟೊ ಕರೆನ್ಸಿಗಳು ಉಳಿಯಬಹುದು ಎಂದು ರಾಜನ್ ಅಂದಾಜಿಸಿದ್ದಾರೆ.

ಸಿಎನ್ಬಿಸಿ 18 ಸುದ್ದಿವಾಹಿನಿಯೊಂದಿಗೆ ಮಾತನಾಡಿದ ರಘುರಾಮ್ ರಾಜನ್, ವಸ್ತುಗಳ ಮೌಲ್ಯವು ಅದರ ಬೆಲೆಗಿಂತ ಮಿತಿ ಮೀರಿದ್ದರೆ ಅದು ಗಾಳಿಯಲ್ಲಿ ತೆಳುವ ಗುಳ್ಳೆಯಿದ್ದಂತೆ, ಯಾವಾಗಲಾದರೂ ಒಡೆದು ಮಾಯವಾಗಬಹುದು. ಬಹಳಷ್ಟು ಕ್ರಿಪ್ಟೊ ಕರೆನ್ಸಿಗಳ ಮೌಲ್ಯವು ವಾಸ್ತವಿಕ ಬೆಲೆಗಿಂತ ಅದೆಷ್ಟೊ ಪಟ್ಟು ಹೆಚ್ಚಿದೆ. ಮಿತಿ ಮೀರಿದ ಮೌಲ್ಯವಿದ್ದರೂ ಅದನ್ನು ಖರೀದಿಸಲು ಮೂರ್ಖರು ಸಿದ್ದರಿದ್ದಾರೆ ಎಂದೂ ರಾಜನ್ ಹೇಳಿದ್ದಾರೆ.

ಕ್ರಿಪ್ಟೊ ಕರೆನ್ಸಿಗೆ ಮೂಲ ಆಧಾರವಾಗಿರುವ ಬ್ಲಾಕ್ಚೈನ್ ತಂತ್ರಜ್ಞಾನವನ್ನು ಪ್ರವರ್ಧಮಾನಕ್ಕೆ ತರಲು ಕೇಂದ್ರ ಸರ್ಕಾರ ಉತ್ತೇಜನ ನೀಡುವುದು ಅತ್ಯಗತ್ಯ ಎಂದೂ ರಾಜನ್ ಹೇಳಿದ್ದಾರೆ.

ಕ್ರಿಪ್ಟೊ ಕರೆನ್ಸಿ ಮೌಲ್ಯ ಮತ್ತು ಭವಿಷ್ಯ ಕುರಿತಂತೆ ವಿಶ್ವವ್ಯಾಪಿ ಚರ್ಚೆ ಆಗುತ್ತಿರುವ ಹೊತ್ತಿನಲ್ಲಿ ರಘುರಾಮ್ ರಾಜನ್ ಅವರ ಈ ಹೇಳಿಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬಿಡುಗಡೆ ಮಾಡಲುದ್ದೇಶಿಸಿರುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಚೌಕಟ್ಟನ್ನು ಒದಗಿಸುವಾಗ ಮತ್ತು ಖಾಸಗಿ ನಾಣ್ಯಗಳನ್ನು ನಿಯಂತ್ರಿಸುವ, ಕ್ರಿಪ್ಟೋಕರೆನ್ಸಿಗಳಿಗೆ ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸುವ ಸಲುವಾಗಿ ಕೇಂದ್ರ ಸರ್ಕಾರವು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ನಿಯಂತ್ರಣ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಮಸೂದೆ (2021) ಮಂಡಿಸಲಿದೆ.

ಕ್ರಿಪ್ಟೊ ಕರೆನ್ಸಿಯು ಹಾಲಿ ಆರ್ಥಿಕ ವ್ಯವಸ್ಥೆಯ ಮೇಲೆ ಉಂಟುಮಾಡಬಹುದಾದ ಮತ್ತು ಅಕ್ರಮಗಳಿಗೆ ಬಳಕೆಯಾಗಬಹುದಾದ ಸಾಧ್ಯತೆಗಳ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆರಂಭದಿಂದಲೂ ಕ್ರಿಪ್ಟೊಕರೆನ್ಸಿ ವಹಿವಾಟಿಗೆ ಅನುಮತಿ ನೀಡಲು ನಿರಾಕರಿಸುತ್ತಲೇ ಬಂದಿದೆ. ಆದರೆ, ಅಧಿಕೃತವಾಗಿ ಅದನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ.
ಕ್ರಿ
ಪ್ಟೊಕರೆನ್ಸಿಗೆ ಪರ್ಯಾಯವಾಗಿ ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ತರುವ ಮತ್ತು ಅದನ್ನು ವಿನಿಮಯ ಮಾಧ್ಯಮವಾಗಿ ಬಳಕೆ ಮಾಡುವ ಸಾಧ್ಯತೆಯನ್ನು ಆರ್ಬಿಐ ಪ್ರಸ್ತಾಪಿಸಿತ್ತು. ಅದರ ಹಿನ್ನೆಲೆಯಲ್ಲೇ ಕೇಂದ್ರ ಸರ್ಕಾರ ಕ್ರಿಪ್ಟೊಕರೆನ್ಸಿ ನಿಷೇಧಿಸಲು ಮತ್ತು ದೇಶೀಯ ಮತ್ತು ನಿಯಂತ್ರಿತ ಡಿಜಿಟಲ್ ಕರೆನ್ಸಿಯನ್ನು ತರಲು ಮಸೂದೆ ರೂಪಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ದೊರೆಯುವ ನಿರೀಕ್ಷೆ ಇದೆ.

ಭಾರತದಲ್ಲಿ ಕ್ರಿಪ್ಟೊ ಕರೆನ್ಸಿ ನಿಷೇಧಿಸುವ ಮತ್ತು ಪರ್ಯಾಯ ಡಿಜಿಟಲ್ ಕರೆನ್ಸಿ ತರಲು ಸಂಸತ್ತಿನಲ್ಲಿ ಮಸೂದೆ ಮಂಡಿಸುವ ಸುದ್ದಿ ಪ್ರಕಟವಾದ ನಂತರ ಕಳೆದ ಎರಡು ದಿನ ಸತತ ಕುಸಿತ ದಾಖಲಿಸಿದ್ದ ಕ್ರಿಪ್ಟೊ ಕರೆನ್ಸಿಗಳು ಚೇತರಿಸಿಕೊಂಡಿವೆ. ನವೆಂಬರ್ 25ರ ವಹಿವಾಟಿನಲ್ಲಿ ಬಿಟ್ ಕಾಯಿನ್ ಶೇ.2ರಷ್ಟು, ಇಥಿರಿಯಂ ಶೇ.1ರಷ್ಟು, ಬಿನೆನ್ಸ್ ಕಾಯಿನ್ ಶೇ.4ರಷ್ಟು ಏರಿಕೆ ದಾಖಲಿಸಿವೆ. ಸೊಲೊನಾ, ಕರ್ಡಾನೊ, ಎಕ್ಸ್ಆರ್ಪಿ, ಪೊಲ್ಕಾಡಾಟ್ ಕರೆನ್ಸಿಗಳು ಶೇ.1ರಿಂದ 5ರಷ್ಟು ಕುಸಿದಿವೆ.

Tags: BJPCongress PartyCovid 19ಕ್ರಿಪ್ಟೊಕರೆನ್ಸಿಚಿಟ್ ಫಂಡ್ನರೇಂದ್ರ ಮೋದಿಬಿಜೆಪಿರಘುರಾಮ್ ರಾಜನ್ಹೂಡಿಕೆದಾರ
Previous Post

ನಟ ಚೇತನ್‌ ಈ ದೇಶದ ಪ್ರಜೆಯೇ ಅಲ್ಲ, ಮಾಂಸಹಾರಿ & ಸಸ್ಯಹಾರಿಗಳ ನಡುವೆ ತಂದಿಟ್ಟು ಧರ್ಮ ಒಡೆಯುತ್ತಿದ್ದಾರೆ – ಹಿಂದೂಪರ ಸಂಘಟನೆ

Next Post

MLC ಕಾಂಗ್ರೆಸ್‌ ರಾಜಣ್ಣ ನಾವು ಸೇಹ್ನಿತರು ಆದರೆ ಪಕ್ಷದ ವಿಚಾರ ಬಂದರೆ ನಾನು ರಾಜಿ ಆಗಲ್ಲ : ಜೆ.ಸಿ.ಮಾಧುಸ್ವಾಮಿ

Related Posts

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
0

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿ (Labour & farmer policy) ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇಂದು ದೇಶಾದ್ಯಂತ ಟ್ರೇಡ್...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
Next Post
MLC  ಕಾಂಗ್ರೆಸ್‌  ರಾಜಣ್ಣ ನಾವು ಸೇಹ್ನಿತರು ಆದರೆ ಪಕ್ಷದ ವಿಚಾರ ಬಂದರೆ ನಾನು ರಾಜಿ ಆಗಲ್ಲ : ಜೆ.ಸಿ.ಮಾಧುಸ್ವಾಮಿ

MLC ಕಾಂಗ್ರೆಸ್‌ ರಾಜಣ್ಣ ನಾವು ಸೇಹ್ನಿತರು ಆದರೆ ಪಕ್ಷದ ವಿಚಾರ ಬಂದರೆ ನಾನು ರಾಜಿ ಆಗಲ್ಲ : ಜೆ.ಸಿ.ಮಾಧುಸ್ವಾಮಿ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada