• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕ್ಯಾತೆ ತೆಗೆಯಲು ತಮಿಳುನಾಡಿನಿಂದ ಕಾನೂನು ಬಾಹಿರ ನಿರ್ಣಯ, ಮೇಕೆದಾಟು ಯೋಜನಾ ವರದಿಯನ್ನು CWMA ಅಂಗೀಕರಿಸಬೇಕು : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 22, 2022
in ಇದೀಗ
0
ಕ್ಯಾತೆ ತೆಗೆಯಲು ತಮಿಳುನಾಡಿನಿಂದ ಕಾನೂನು ಬಾಹಿರ ನಿರ್ಣಯ, ಮೇಕೆದಾಟು ಯೋಜನಾ ವರದಿಯನ್ನು CWMA ಅಂಗೀಕರಿಸಬೇಕು : ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಕೊಡಬೇಕು ಮತ್ತು ನಮ್ಮ ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಅಂಗೀಕರಿಸಬೇಕು ಎಂದು ಸದನದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ADVERTISEMENT

ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ. ಈ ನಿರ್ಣಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ನಾವು ಮೇಕೆದಾಟು ಯೋಜನೆ ಮಾಡುತ್ತಿರೋದು ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನ ಅಂತಿಮ ಆದೇಶ 16/02/2018 ರಲ್ಲಿ ಬಂದಿದೆ. ಸಹಜ ಪರಿಸ್ಥಿತಿಯ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ. ಈ ಆದೇಶವನ್ನು ಎರಡೂ ರಾಜ್ಯಗಳು ಒಪ್ಪಿಕೊಂಡಿದ್ದೇವೆ.

ತನ್ನ ಪಾಲಿನ ನೀರನ್ನು ಪಡೆದುಕೊಳ್ಳುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ವರೆಗೆ ತಮಿಳುನಾಡಿಗೆ ಸುಮಾರು 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ.

ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು.

ಬೆಂಗಳೂರು ನಗರದ ಸುಮಾರು 30% ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು? ಎಂದು ಪ್ರಶ್ನಿಸಿದಾರೆ.

ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ರೂ. 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ.

ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ ಎಂದು ಹೇಳಿದ್ದಾರೆ.

ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ.

ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದಂತೆ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ಕರೆದಿದ್ದರು, ಅಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ.

ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿಗಳು ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿಯನ್ನು ಹೇಳೋಣ.

ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ. ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾನೂನು ಬಾಹಿರತಮಿಳುನಾಡಿತಮಿಳುನಾಡುತಮಿಳುನಾಡು ಪೊಲೀಸ್ತಮಿಳುನಾಡು ರಾಜಕೀಯತಮಿಳುನಾಡು ಸರ್ಕಾರನಿರ್ಣಯಬಿ ಎಸ್ ಯಡಿಯೂರಪ್ಪಬಿಜೆಪಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಮೇಕೆದಾಟುಮೇಕೆದಾಟು 2.0ಮೇಕೆದಾಟು ತಮಿಳುನಾಡುಮೇಕೆದಾಟು ಪಾದಯಾತ್ರೆಮೇಕೆದಾಟು ಯೋಜನೆಸಿದ್ದರಾಮಯ್ಯ
Previous Post

ಮುಖೇಶ್ ಅಂಬಾನಿ ಬಿಟ್ಟ ಅರಾಮ್ಕೊ ವ್ಯವಹಾರಕ್ಕೆ ಕೈ ಹಾಕುತ್ತಿರುವ ಗೌತಮ್ ಅದಾನಿ! 

Next Post

ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada