ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಮಲಗಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮೃತರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ
ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...
Read moreDetails





