• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಲಿಂಡರ್‌ ಬೆಲೆ ಗಗನಕ್ಕೆ: ಜಿಲ್ಲಾಧಿಕಾರಿ ಕಚೇರಿ ಎದುರು ಸೌದೆ ಒಲೆ ಉರಿಸಿ ಜೆಡಿಎಸ್ ವಿನೂತನ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in Top Story, ಇತರೆ / Others
0
ಸಿಲಿಂಡರ್‌ ಬೆಲೆ ಗಗನಕ್ಕೆ: ಜಿಲ್ಲಾಧಿಕಾರಿ ಕಚೇರಿ ಎದುರು ಸೌದೆ ಒಲೆ ಉರಿಸಿ ಜೆಡಿಎಸ್ ವಿನೂತನ ಪ್ರತಿಭಟನೆ
Share on WhatsAppShare on FacebookShare on Telegram

ಶಿವಮೊಗ್ಗ: ಕೇಂದ್ರ ಸರ್ಕಾರ ಅಡಿಗೆ ಅನಿಲ, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಮಹಾನಗರ ಜಾತ್ಯತೀತ ಜನತಾದಳ ವತಿಯಿಂದ ಇಂದು ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಂಭಾಗ ರಸ್ತೆಯಲ್ಲಿ ಸೌದೆ ಒಲೆಯಲ್ಲಿ ಅಡುಗೆ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.

ADVERTISEMENT

ಪದೇಪದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವುದರಿಂದ ಬಡವರು, ಕೂಲಿ ಕಾರ್ಮಿಕರು ಮತ್ತು ಅಸಹಾಯಕ ಜನರ ಗೋಳು ನಿತ್ಯವೂ ಹೇಳತೀರದು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ ಹದಗೆಟ್ಟಿದ್ದು ಶ್ರೀಸಾಮಾನ್ಯನ ಬದುಕಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಕಾರರು ದೂರಿದರು.

ರಾಜ್ಯದಲ್ಲಿ ಗುತ್ತಿಗೆದಾರರಿಂದ ಶೇ.೪೦ರಷ್ಟು ಕಮಿಷನ್ನಿನ ಅವಾಂತರದಿಂದಾಗಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಈಗಾಗಲೇ ಒಬ್ಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇತ್ತೀಚೆಗೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪುತ್ತ ಕಮಿಷನ್ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆದು ಕೋಟಿ ಕೋಟಿ ಹಣ ಸಿಕ್ಕಿದ್ದು, ಪ್ರಕರಣದ ಎ-೧ಆರೋಪಿಯಾದ ಶಾಸಕರನ್ನು ಈವರೆಗೂ ಬಂಧಿಸಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿಯಿಂದಾಗಿ ಯಾವ ಕೆಲಸವೂ ಆಗುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆರೋಪಿಸಿದರು.

ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಭ್ರಷ್ಟಾಚಾರದ ನಿಯಂತ್ರಣದ ಬಗ್ಗೆ ಮತ್ತು ಅಗತ್ಯ ಬೆಲೆ ಕೂಡಲೇ ಇಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡುವುದರ ಮೂಲಕ ಸಂಪೂರ್ಣ ಅಧೋಗತಿಗೆ ತಲುಪಿರುವ ಶ್ರೀಸಾಮಾನ್ಯನ ಬದುಕಿಗೆ ನೆರವಾಗುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಜಾತ್ಯಾತೀತ ಜನತಾದಳ ಶಿವಮೊಗ್ಗದ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್‌ ಮಾತನಾಡಿ, ನಗರದಲ್ಲಿಂದು ಪಾದಯಾತ್ರೆ ಮಾಡಿಕೊಂಡು ಪ್ರತಿಭಟನೆ ಮಾಡಿದ್ದೇವೆ.  ಜಿಲ್ಲಾಧಿಕಾರಿ ಕಚೇರಿ ಮುಂದೆ ಸೌದೆ ಒಲೆ ಹಚ್ಚುವ ಮೂಲಕ ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರದಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ ಇದೆ. ಡಬಲ್‌ ಎಂಜಿನ್‌ ಸರ್ಕಾರ ಎಂದು ಬೇರೆ ಹೇಳಿಕೊಳ್ಳುತ್ತಾರೆ. ಎರಡು ತಿಂಗಳಲ್ಲಿ ಚುನಾವಣೆ ಬರುತ್ತಿದೆ. ಜನರ ಬಳಿ ಯಾವ ಮುಖ ಹೊತ್ತು ಓಟು ಕೇಳಲು ಹೋಗುತ್ತೀರಾ..? ಐದು ಹತ್ತು ವರ್ಷದಿಂದ ನೀವು ಏನು ಸಾಧನೆ ಮಾಡಿದ್ದೀರಾ..? ಪೆಟ್ರೋಲ್‌-ಡೀಸೆಲ್ ದರ ಏರಿದೆ. ರಸಗೊಬ್ಬರ ಮುಟ್ಟುವ ಹಾಗಿಲ್ಲ. ಸಿಲಿಂಡರ್‍ ಬೆಲೆ ವರ್ಷಕ್ಕೆ ನಾಲ್ಕು ಸಲ ಹೆಚ್ಚುತ್ತೆ ಅಂದರೆ ಏನು ಅರ್ಥ..? ಎಂದು ಪ್ರಶ್ನಿಸಿದರು.

ಹಾಗಾಗಿ ಜನ ಪ್ರಾದೇಶಿಕ ಪಕ್ಷಗಳತ್ತ ಒಲವು ನೀಡಿದ್ದಾರೆ. ಹೆಚ್‌ ಡಿ ಕುಮಾರಸ್ವಾಮಿ ಬಗ್ಗೆ ಭರವಸೆ ನೀಡಿದ್ದಾರೆ. ರೈತರು, ಕಾರ್ಮಿಕರು ಕುಮಾರಸ್ವಾಮಿ ಸಿಎಂ ಮಾಡಲು ಮುಂದೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಜನ ಪ್ರಾದೇಶಿಕ ಪಕ್ಷಕ್ಕೆ ಒಲವು ತೋರಬೇಕು.  ಎಲ್ಲಾ ಕಡೆ ಮನವಿ ನೀಡುತ್ತೇವೆ ಆದರೆ ಅವರಿಗೆ ಮುಟ್ಟೋದೇ ಇಲ್ಲ ಎಂದು ಗೀತಾ ಹರಿಹಾಯ್ದರು.

Tags: JDS KarnatakaShivamogga District
Previous Post

‘ಯಾವ ಮುಖ ಇಟ್ಕೊಂಡು ವಿಜಯ ಸಂಕಲ್ಪ ಯಾತ್ರೆ ಮಾಡ್ತಿದ್ದೀರಿ?’:ಬಿಜೆಪಿಗೆ ಬಿ.ಕೆ ಹರಿಪ್ರಸಾದ್​ ಪ್ರಶ್ನೆ

Next Post

 “ಕಬ್ಜ” ಕ್ರೇಜ್: ಗಮನ ಸೆಳೆಯುವ ರೆಟ್ರೋ ಸ್ಟೈಲ್’ನ ಕಾರುಗಳ ಕಲೆಕ್ಷನ್​

Related Posts

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

by ಪ್ರತಿಧ್ವನಿ
February 6, 2026
0

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು...

Read moreDetails
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
Next Post
 “ಕಬ್ಜ” ಕ್ರೇಜ್: ಗಮನ ಸೆಳೆಯುವ ರೆಟ್ರೋ ಸ್ಟೈಲ್’ನ ಕಾರುಗಳ ಕಲೆಕ್ಷನ್​

 “ಕಬ್ಜ” ಕ್ರೇಜ್: ಗಮನ ಸೆಳೆಯುವ ರೆಟ್ರೋ ಸ್ಟೈಲ್’ನ ಕಾರುಗಳ ಕಲೆಕ್ಷನ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada