• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
February 19, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್
Share on WhatsAppShare on FacebookShare on Telegram

ಕಲ್ಲು ಶಿಲೆಯಾಗಬೇಕಾದರೆ ಹತ್ತಾರು ಪೆಟ್ಟು ಬೀಳಬೇಕು

ADVERTISEMENT

“ಡಿ.ಕೆ. ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ಹೀಗಾಗಿ ಎಲ್ಲರೂ ಮಾತನಾಡುತ್ತಿದ್ದಾರೆ. ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ಶಿವಕುಮಾರ್ ಅವರು ಆಗಾಗ್ಗೆ ಹೇಳುತ್ತಿರುತ್ತಾರೆ. ಕಲ್ಲಿಗೆ ಪೆಟ್ಟು ಬಿದ್ದಾಗಲೇ ಶಿಲೆಯಾಗಿ ಮಾರ್ಪಾಡಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ನಾಲ್ಕೈದು ಸಚಿವರು ಡಿ.ಕೆ. ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಳಿದಾಗ, “ಅದೆಲ್ಲಾ ಗೊತ್ತಿಲ್ಲಾ. ಎಲ್ಲರೂ ಸೇರಿ ಒಳ್ಳೆಯದನ್ನು ಬಯಸುತ್ತಿದ್ದು ಒಳ್ಳೆಯದೇ ಆಗುತ್ತದೆ. ಯಾರಿಗಾದರೂ ಒಳ್ಳೆಯದಾಗಬೇಕಾದರೆ ಹತ್ತಾರು ಜನರ ಪೆಟ್ಟು ಬೀಳಬೇಕು. ಅದನ್ನು ನಾವು ತಪ್ಪಾಗಿ ತಿಳಿಯಬಾರದು, ಅದನ್ನು ಪ್ರಸಾದವಾಗಿ ಸ್ವೀಕರಿಸಬೇಕು” ಎಂದು ತಿಳಿಸಿದರು.

ಪ್ರಸಾದ ಹೆಚ್ಚಾಗಿ ಸ್ವೀಕರಿಸಿದರೆ ಹೊಟ್ಟೆ ನೋವು ಬರುವುದಿಲ್ಲವೇ ಎಂದು ಮಾರ್ಮಿಕವಾಗಿ ಕೇಳಿದ ಪ್ರಶ್ನೆಗೆ, “ನಮಗೆ ಆ ರೀತಿ ಬರುವುದಿಲ್ಲ. ನಾವು ಹಳ್ಳಿಯಲ್ಲಿ ಬೆಳೆದಿದ್ದೇವೆ” ಎಂದು ಮಾರ್ಮಿಕವಾಗಿಯೇ ಉತ್ತರಿಸಿದರು.

ಆಗಿದ್ದರೆ ಶಿಲೆಯಾಗಿ ಹೊರಹೊಮ್ಮುವರೆ ಎಂದು ಕೇಳಿದಾಗ, “ಖಂಡಿತ. ಆದರೆ ಎಷ್ಟು ತಟ್ಟುತ್ತಾರೋ, ತಟ್ಟಲಿ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಣ್ಣ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಮೇಲೆ ಗೌರವ, ಪ್ರೀತಿ ಜಾಸ್ತಿ. ಹೀಗಾಗಿ ಆ ರೀತಿ ಹೇಳಿದ್ದಾರೆ” ಎಂದರು.

ಪ್ರೀತಿ ಜಾಸ್ತಿ ಆದರೆ ಕಷ್ಟ ಆಗುತ್ತಲ್ಲವೇ ಎಂದು ಕೇಳಿದಾಗ, “ಶಿವಕುಮಾರ್ ಅವರಿಗೆ ಒಳ್ಳೆಯದಾಗಬೇಕು ಎಂದು ಬಯಸಿದಾಗ ಏನು ಮಾಡಲು ಆಗುತ್ತದೆ” ಎಂದು ಮಾರ್ಮಿಕವಾಗಿ ತಿಳಿಸಿದರು.

ರಾಜಣ್ಣ ಅವರ ಮಾತಿಗೆ ಮಿತಿ ಇಲ್ಲವೇ, ಇದರಿಂದ ಪಕ್ಷಕ್ಕೆ ಮುಜುಗರವಾಗುವುದಿಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ, ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿ ಅವರನ್ನು ಕೇಳಿ” ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ” ಎಂದರು.

ಈ ವಿಚಾರದಲ್ಲಿ ನೀವು ಮೌನ ಅಸ್ತ್ರ ಪ್ರಯೋಗಿಸುತ್ತಿದ್ದೀರಾ ಎಂದು ಕೇಳಿದಾಗ, “ನಾವು ಮಾತನಾಡುತ್ತಿದ್ದೇವೆ. ಮೌನ ಯಾಕೆ? ನಾವು ಮಾತನಾಡುವುದನ್ನು ನಿಲ್ಲಿಸಿಲ್ಲ. ನೀವು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತಿದ್ದೇವೆ” ಎಂದರು.

ನೀವು ಬಹಳ ಸೈಲೆಂಟಾಗಿದ್ದೀರಾ ಎಂದು ಕೇಳಿದಾಗ, “ಇದು ಮಳೆ ಬರುವ ಕಾಲ ಅಲ್ಲ, ಮಳೆ ಬರಲು ಇನ್ನ ಕಾಲಾವಕಾಶವಿದೆ” ಎಂದು ತಿಳಿಸಿದರು.

ಖಾಲಿ ಇಲ್ಲದ ಹುದ್ದೆಗೆ ಈಗ ಚರ್ಚೆ ಯಾಕೆ?

ಸಿಎಂ ಬದಾವಣೆಯಾದರೆ ಶಾಸಕರ ಅಭಿಪ್ರಾಯ ಪಡೆಯಲೇಬೇಕು ಎಂಬ ಪಟ್ಟಿನ ಬಗ್ಗೆ ಕೇಳಿದಾಗ, “ಆ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ನಾಯಕರನ್ನು ಕೇಳಿ. ಈಗ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಖಾಲಿ ಇಲ್ಲದ ಸ್ಥಾನಕ್ಕೆ ಈಗ ಚರ್ಚೆ ಯಾಕೆ? ಚರ್ಚೆ ಹುಟ್ಟು ಹಾಕಿದ್ದು ಯಾರು? ನನಗೆ ಗೊತ್ತಿಲ್ಲ” ಎಂದರು.

ಪವರ್ ಶೇರಿಂಗ್ ಇಲ್ಲವೇ ಎಂದು ಕೇಳಿದಾಗ, “ನಾನು ಈ ವಿಚಾರದಿಂದ ಹೊರಗೆ ಇದ್ದೇನೆ. ನನಗೆ ಅದರ ಬಗ್ಗೆ ಗೊತ್ತಿಲ್ಲ. ನಾನ್ಯಾಕೆ ಅದರ ಬಗ್ಗೆ ಮಾತನಾಡಲಿ. ಈ ಸಿನಿಮಾದಲ್ಲಿ ಇರುವವರನ್ನು ಕೇಳಿ. ನಾನು ಈ ಸಿನಿಮಾದಲ್ಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಎಂದು ಎಐಸಿಸಿ ಪತ್ರಿಕಾ ಪ್ರಕಟಣೆ ಆಧಾರದ ಮೇಲೆ ಒತ್ತಾಯ ಮಾಡುತ್ತಿದ್ದೇವೆ ಎಂಬ ವಾದದ ಬಗ್ಗೆ ಕೇಳಿದಾಗ, “ನನಗೆ ಇದ್ಯಾವುದರ ಬಗ್ಗೆ ಗೊತ್ತಿಲ್ಲ. ಈ ಎಲ್ಲಾ ವಿಚಾರವನ್ನು ದೆಹಲಿ ನಾಯಕರ ಜತೆ ಚರ್ಚೆ ಮಾಡಬೇಕು. ನಾನು ಈ ಹಿಂದೆ ಸಂಸದನಾಗಿದ್ದೆ. ಈಗ ಕೇವಲ ಪಕ್ಷದ ಕಾರ್ಯಕರ್ತ ಮಾತ್ರ. ಪಕ್ಷದ ವರಿಷ್ಠರ ಮಟ್ಟದಲ್ಲಿ ಏನು ಚರ್ಚೆಯಾಗುತ್ತದೆ ಎಂಬುದು ಗೊತ್ತಿಲ್ಲ. ನಾನು ಆಯ್ತು, ನನ್ನ ಕೆಲಸ ಆಯ್ತು ಎಂದು ಇದ್ದೇನೆ” ಎಂದು ತಿಳಿಸಿದರು.

ದೆಹಲಿಗೆ ಹೋದಾಗ ನಾಯಕರ ಭೇಟಿ ಮಾಡುವುದು ಸಹಜ:

ಪರಮೇಶ್ವರ್ ಅವರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ದೆಹಲಿಗೆ ಪರಮೇಶ್ವರ್, ಶಿವಕುಮಾರ್, ಸಿದ್ದರಾಮಯ್ಯ, ಬೇರೆ ಸಚಿವರು ಹೋಗುತ್ತಾರೆ. ದೆಹಲಿಯಲ್ಲಿ ಹತ್ತಾರು ಕೆಲಸ ಕಾರ್ಯಗಳು ಇರುತ್ತವೆ. ಕೇಂದ್ರ ಸರ್ಕಾರದ ಜತೆ ಮಾತುಕತೆ ಮಾಡುವುದಿರುತ್ತದೆ, ದೆಹಲಿಗೆ ಹೋದಾಗ, ಪಕ್ಷದ ನಾಯಕರನ್ನು ಭೇಟಿ ಮಾಡುವುದು ಸಹಜ” ಎಂದರು.

ದಲಿತ ಶಾಸಕರುಗಳ ಡಿನ್ನರ್ ಸಭೆಗೆ ಶಿವಕುಮಾರ್ ಅವರು ಬ್ರೇಕ್ ಹಾಕಿದರು, ಹೀಗಾಗಿ ಸಮಾವೇಶಕ್ಕೆ ಅನುಮತಿ ನೀಡಿ ಎಂದು ಕೇಳಿದಾಗ, “ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ನಾನು ಬಹಳ ಸಣ್ಣವನು. ಈ ಬಗ್ಗೆ ದೊಡ್ಡವರನ್ನೇ ಕೇಳಿ” ಎಂದು ತಿಳಿಸಿದರು.

Krishna Byregowda on Revenue site: ರೆವೆನ್ಯೂ ಸೇರಿ ಎಲ್ಲಾ ಸೈಟ್​ಗಳಿಗೂ ಖಾತೆ ಇರಬೇಕು  #pratidhvani

ಚುನಾವಣೆಗೆ ನಿಲ್ಲುವ ಇರಾದೆ ನನ್ನದಲ್ಲ:

ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಜನ ನನಗೆ ವಿಶ್ರಾಂತಿ ನೀಡಿದ್ದಾರೆ” ಎಂದು ತಿಳಿಸಿದರು.

ನೀವು ಕೂಡ ಡೈರಿಗೆ ಹಾಲು ಹಾಕುತ್ತಿದ್ದೀರಿ ಎಂದು ಕೇಳಿದಾಗ, “ನಾನು ಹೊಸತಾಗಿ ಹಾಲು ಹಾಕುತ್ತಿಲ್ಲ. ಇಲ್ಲಿಯವರೆಗೂ ನಮ್ಮ ತಾಯಿ ನನ್ನ ಹೆಸರಿನಲ್ಲಿ ಹಾಲು ಹಾಕುತ್ತಿದ್ದರು. ಈಗ ನಾನು ಅದನ್ನು ಮುಂದುವರಿಸುತ್ತಿದ್ದೇನೆ. ಹಾಲು ಉತ್ಪಾದನೆಯನ್ನು ನಾನು ಈಗ ಆರಂಭಿಸಿಲ್ಲ. ಶಿವಕುಮಾರ್ ಅವರು ಸಹಕಾರ ಸಚಿವರಾಗಿದ್ದಾಗಲೇ ಡೈರಿ ಮಾಡಲು ಮುಂದಾಗಿದ್ದೆ. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಒಂದೇ ದಿನ 40-50 ಡೈರಿ ಆರಂಭಿಸಿದ್ದೆವು. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಮುಲ್‌ ವತಿಯಿಂದ ಕನಕಪುರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಮೆಘಾ ಡೈರಿ ಆರಂಭಿಸಿದ್ದೇವೆ. ಆಗಾಗಾ ಹಾಲು ಉತ್ಪಾದನಾ ವಲಯದ ಆಗುಹೋಗುಗಳನ್ನು ನಾನು ಪರಿಶೀಲಿಸುತ್ತೇನೆ. ರೇಷ್ಮೆ ಹಾಗೂ ಹಾಲಿನಲ್ಲಿ ರೈತರ ಬದುಕು ಅಡಗಿದೆ. ಈ ಎರಡು ಕ್ಷೇತ್ರದ ಮೇಲೆ ನಮ್ಮ ಜಿಲ್ಲೆ ಜನ ಅವಲಂಭಿತವಾಗಿದ್ದು, ಇದಕ್ಕೆ ಅಗತ್ಯವಿರುವ ಪ್ರೋತ್ಸಾಹ, ಮಾರ್ಗದರ್ಶನಗಳನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದು, ಇದನ್ನು ಮಾಡುತ್ತಿದ್ದೇನೆ ಎಂದರೆ ಚುನಾವಣೆಗೆ ನಿಲ್ಲುತ್ತೇನೆ ಎಂಬ ಅರ್ಥವಲ್ಲ. ಚುನಾವಣೆಗೆ ನಿಲ್ಲುವ ಇರಾದೆಯೂ ನನ್ನದಲ್ಲ” ಎಂದು ಸ್ಪಷ್ಟಪಡಿಸಿದರು.

Tags: CM SiddaramaiahDK Shivakumardk shivakumar latest newsdk shivakumar newsdk shivakumar siddaramaiahdk sureshkarnataka cm siddaramaiah or shivakumarsiddaramaiahSiddaramaiah and DK Shivakumarsiddaramaiah karnataka cmsiddaramaiah news
Previous Post

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ.. ಕೋರ್ಟ್‌ಗೆ B ರಿಪೋರ್ಟ್‌

Next Post

ಕಾರ್ಮಿಕನ ಮೃತದೇಹ ಅಮಾನುಷವಾಗಿ ಎಳೆದೊಯ್ದ ಪ್ರಕರಣ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕಾರ್ಮಿಕನ ಮೃತದೇಹ ಅಮಾನುಷವಾಗಿ ಎಳೆದೊಯ್ದ ಪ್ರಕರಣ

ಕಾರ್ಮಿಕನ ಮೃತದೇಹ ಅಮಾನುಷವಾಗಿ ಎಳೆದೊಯ್ದ ಪ್ರಕರಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada