• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್ ತುರ್ತು ಸುದ್ದಿಗೋಷ್ಟಿ..

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಕರ್ನಾಟಕ, ರಾಜಕೀಯ
0
ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್ ತುರ್ತು ಸುದ್ದಿಗೋಷ್ಟಿ..
Share on WhatsAppShare on FacebookShare on Telegram

ಡಿಸೆಂಬರ್ ಅಂತ್ಯದಲ್ಲಿ ಡಿ.ಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದರು. ವಾರದ ಬಳಿಕ ಭಾರತಕ್ಕೆ ವಾಪಸ್ ಆಗಿದ್ದಾರೆ ಡಿಸಿಎಂ ಡಿ.ಕೆ ಶಿವಕುಮಾರ್, ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ಕರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂದು‌ ಬೆಳಗ್ಗೆ 5.30 ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಡಿ.ಕೆ ಶಿವಕುಮಾರ್ ಸದ್ಯ ವಿಶ್ರಾಂತಿಯಲ್ಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹತ್ವದ ಸುದ್ದಿಗೋಷ್ಟಿ ಕರೆದಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ADVERTISEMENT
Chaluvaraya swamy on HDK : ಸುಮಲತಾ ಕೂತಿರೋ ಕಾರಲ್ಲಿ ಕೂರಲ್ಲ ಅಂತಾರೆ.. HDKಗೆ ಚಲುವಣ್ಣ ಟಾಂಗ್ #pratidhvani

ಡಿ.ಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೆ ರಾಜ್ಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿದ್ದು, ಆ ಎಲ್ಲಾ ವಿಚಾರಗಳ ಬಗ್ಗೆ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಬಹುದು ಎನ್ನಲಾಗುತ್ತಿದೆ. ಕಳೆದ ಗುರುವಾರ ಸಿಎಂ ಸಿದ್ದರಾಮಯ್ಯ ಹಾಗು ಅಹಿಂದ ಸಮುದಾಯದ ಸಚಿವರು ಡಿನ್ನರ್ ಮೀಟ್ ಮಾಡಿದ್ದರು. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಮುಖ್ಯಮಂತ್ರಿ ಬದಲಾವಣೆಗೆ ಚರ್ಚೆ ಆರಂಭ ಆದರೆ ಹೈಕಮಾಂಡ್ ಎದುರು ಏನೆಲ್ಲಾ ವಿಷಯ ಮಂಡಿಸಬೇಕು ಅನ್ನೋ ವಿಚಾರವಾಗಿ ಚರ್ಚೆ ಮಾಡಿದ್ದರು.

Tamil Nadu: ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ವಿರೋಧಿಸಿ AIADMK  ಪ್ರತಿಭಟನೆ..! #annamalai

ಇನ್ನು ದೇವರಾಜ ಅರಸು ಕಾಲದಿಂದಲೂ ಒಬ್ಬರಿಗೆ ಒಂದೇ ಹುದ್ದೆ ಎಂದು ಪಾಲಿಸಿಕೊಂಡು‌ ಬರಲಾಗ್ತಿತ್ತು. ಆದರೆ ಇದೀಗ ಡಿ.ಕೆ ಶಿವಕುಮಾರ್, ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದರೂ ಕೆಪಿಸಿಸಿ ಆಧ್ಯಕ್ಷರಾಗಿಯೂ ಮುಂದುವರಿದಿದ್ದಾರೆ. ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಒತ್ತಡ ಹೇರುವುದು ಹಾಗು ಡಿಸಿಎಂ ಸ್ಥಾನಗಳನ್ನು ಏರಿಕೆ ಮಾಡುವ ಮೂಲಕ ಡಿ.ಕೆ ಶಿವಕುಮಾರ್ ಹುದ್ದೆಗೆ ಇರುವ ಘನತೆ ಕಡಿಮೆ ಮಾಡುವ ಮೂಲಕ ಡಿ.ಕೆ ಶಿವಕುಮಾರ್ ಕಟ್ಟಿಹಾಕುವ ಪ್ರಯತ್ನವೂ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡ್ತಾರಾ ಅನ್ನೋದು ಈಗಿರುವ ಪ್ರಶ್ನೆ.

ಇನ್ನು ದೆಹಲಿಯಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಈಗಾಗಲೇ ಸರ್ಧಿಗಳ ಪಟ್ಟಿ ಬಿಡುಗಡೆ ಮಾಡಲಾಗ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿರುವ ಬಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ಮಾಡಿ ಮಾಹಿತಿ ನೀಡಲಿದ್ದಾರೆ ಅನ್ನೋ ಮಾಹಿತಿಯೂ ಹೊರ ಬಿದ್ದಿದೆ. ಆದರೂ ಪತ್ರಕರ್ತರು ರಾಜ್ಯದ ವಿಚಾರಗಳನ್ನು ಅದರಲ್ಲೂ ವಿದೇಶ ಪ್ರವಾಸ ತೆರಳಿದ ಬಳಿಕ ನಡೆದಿರುವ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಆಗ ಎಲ್ಲದಕ್ಕೂ ಉತ್ತರ ಕೊಡಬೇಕಾಗುತ್ತದೆ ಎನ್ನಬಹುದು. ಇನ್ನು ದಾವಣಗೆರೆಯಲ್ಲಿ ಕನಕ ಜಯಂತಿ ಹೆಸರಲ್ಲಿ ಅಹಿಂದ ಶಕ್ತಿ ಪ್ರದರ್ಶನವೂ ನಡೆದಿದೆ. ಈ ಬಗ್ಗೆಯೂ ಡಿ.ಕೆ ಶಿವಕುಮಾರ್ ಉತ್ತರ ನೀಡಬೇಕಿದೆ. ಇನ್ನೇನು ಕೆಲವೇ ಗಂಟೆಗಳು ಬಾಕಿ ಇದ್ದು ಎಲ್ಲಾ ಕುತೂಹಲಗಳಿಗೂ ತೆರೆ ಬೀಳಲಿದೆ.

Tags: CM Siddaramaiahdeve gowda vs siddaramaiahdk shivakumar vs siddaramaiahdks vs siddhagt devegowda vs siddaramaiahhd deve gowda vs siddaramaiahkarnataka cm siddaramaiahsiddaramaiahSiddaramaiah CMsiddaramaiah frontrunner for karnataka cmsiddaramaiah newssiddaramaiah speechsiddaramaiah vs deve gowdasiddaramaiah vs dk shiva kumarsiddaramaiah vs dk shivakumarsiddaramaiah vs dk sivakumarsiddaramaiah vs shivakumar
Previous Post

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಪಡೆಗಳ ಮುಂಜಾಗರೂಕತಾ ಕ್ರಮ ಪರಿಶಿಲನೆ ನಡೆಸಿದ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಭೇಟಿ

Next Post

ದುಬೈನಿಂದ ಬಂದಿಳಿದ ಪಿಎಫ್‌ಐ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ದುಬೈನಿಂದ ಬಂದಿಳಿದ ಪಿಎಫ್‌ಐ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada