• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

D.K ಸುರೇಶ್​ ಸೋಲಿಸಲು ಕೆಲಸ ಮಾಡಿದ್ದ ಟೀಂ ಯಾವುದು..?

ಕೃಷ್ಣ ಮಣಿ by ಕೃಷ್ಣ ಮಣಿ
June 8, 2024
in Top Story, ರಾಜಕೀಯ
0
D.K ಸುರೇಶ್​ ಸೋಲಿಸಲು ಕೆಲಸ ಮಾಡಿದ್ದ ಟೀಂ ಯಾವುದು..?
Share on WhatsAppShare on FacebookShare on Telegram

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಸಹೋದರ ಡಿ.ಕೆ ಸುರೇಶ್ ಸೋಲನ್ನಪ್ಪಿದ್ದಾರೆ. ಬಿಜೆಪಿ ಚಿಹ್ನೆಯಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಅಳಿಯ ಡಾ ಮಂಜುನಾಥ್​​ ಎರಡೂವರೆ ಲಕ್ಷ ಮತಗಳಿಂದ ಗೆದ್ದು ಬೀಗಿದ್ದಾರೆ. ಈ ನಡುವೆ ಭಾನುವಾರ ಡಿ.ಕೆ ಶಿವಕುಮಾರ್​ ಸೋಲಿನ ಆತ್ಮಾವಲೋಕನ ಸಭೆ ನಡೆಸಲು ಮುಂದಾಗಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವುದು ಬಿಟ್ಟರೆ, ಉಳಿದೆಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಡಾ ಮಂಜುನಾಥ್​ಗೆ ಲೀಡ್​ ಸಿಕ್ಕಿರುವುದು ಕಾಂಗ್ರೆಸ್​ಗೆ ನುಂಗಲಾರದ ತುತ್ತಾಗಿದೆ.

ADVERTISEMENT

ಈ ನಡುವೆ ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎನ್ನುವ ಆರೋಪ ಬಿಜೆಪಿ ಪಾಳಯದಿಂದ ಹೊರ ಬಿದ್ದಿದೆ. ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದು, ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಕಂಟಿನ್ಯೂ ಆಗಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸಿದ್ದಾರೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ನಾನು ಈ ಹಿಂದೆಯೇ ಹೇಳಿದ್ದೆ, ಸತೀಶ್​ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನರು ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸ್ತಾರೆ ಎಂದು. ಲೋಕಸಭಾ ಚುನಾವಣೆಗೂ ಮೊದಲೇ ಹೇಳಿದೆ. ಒಂದು ತಿಂಗಳ ಹಿಂದೆಯೇ ಹೇಳಿದ್ದ ಮಾತು ಈಗ ಸತ್ಯವಾಗಿದೆ. ನಾನು ಹೇಳಿದ್ದೆ ಮಾತು ರಿಪೀಟ್ ಆಗಿದೆ. ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಅಂತಾ ಹೇಳಿದ್ದೆ. ಅದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಇದು ರಾಜಕೀಯ ಸಂಚಿನ ಒಂದು ಭಾಗ ಅಷ್ಟೆ. ಡಿ.ಕೆ ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು. ಅವರ ನೈತಿಕತೆ ಕುಸಿಯಬೇಕು ಅಂತಾ ಈಗ ಮಾಡಿದ್ದಾರೆ ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರವೂ ಉಳಿಯಲ್ಲ ಎಂದು ಹೊಸ ಭವಿಷ್ಯವನ್ನೂ ನುಡಿದಿದ್ದಾರೆ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತದೆ. ಕಾಂಗ್ರೆಸ್​ನಲ್ಲಿ ಒಳಜಗಳ ಶುರುವಾಗುತ್ತದೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಇಲ್ಲಿ ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ. ಸರ್ಕಾರ ಪತನವಾಗುತ್ತದೆ ಅಂತಾನು ತಿಳಿಸಿದ್ದಾರೆ. ಆದರೆ ಇದು ರಾಜಕೀಯ ಕಾರಣಕ್ಕೂ ಈ ರೀತಿಯ ಸುದ್ದಿಯನ್ನು ಹಬ್ಬಿಸುತ್ತಿರಬಹುದು. ಅಥವಾ ಇದು ರಾಜಕೀಯ ಆಗಿರುವ ಕಾರಣಕ್ಕೆ ಎದುರಾಳಿ ತಂಡ ಕುತಂತ್ರ ರಾಜಕಾರಣ ಮಾಡಿದ್ದರೂ ಮಾಡಿರಬಹುದು. ಇದು ಸತ್ಯವೇ ಆಗಿದ್ದರೆ ಕಾಂಗ್ರೆಸ್​ ಸರ್ಕಾರ ಪತನದ ದಿನಗಳು ಆರಂಭ ಅಂದರೆ ಸುಳ್ಳಲ್ಲ.

ಕೃಷ್ಣಮಣಿ

Tags: #CMSiddaramaiah #DCMDKShivakumar #modi #PrajwalRevanna RASHOK ##PrajwalRevannaPenDriveCase #jdspratidh#CMSiddaramaiahCongress PartyDKShivakumarDKSureshdrmanjunathaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ಜೈಲಿನಲ್ಲಿ ಜಾಮರ್​’ ಹೋರಾಟಕ್ಕೆ ಇಳಿದ ಸ್ಥಳೀಯರ ಆಕ್ರೋಶ..! ಯಾಕೆ..?

Next Post

ಈಗ ಕರ್ನಾಟಕದಲ್ಲಿ ಪಪ್ಪು ಯಾರು ಗೊತ್ತಾ…?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

ಈಗ ಕರ್ನಾಟಕದಲ್ಲಿ ಪಪ್ಪು ಯಾರು ಗೊತ್ತಾ...?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada