ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರು ಈ ದಿನ ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಯಾವುದೇ ವ್ಯವಹಾರ ಮಾಡುವಾಗ ಎಚ್ಚರವಹಿಸಿ. ಪರಿಚಿತರೊಂದಿಗೆ ಹಣದ ವ್ಯವಹಾರ ಮಾಡುವ ಮುನ್ನ ಎರಡು ಬಾರಿ ಯೋಚಿಸಿ. ಆರೋಗ್ಯ ಸುಧಾರಿಸಲಿದೆ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಹೆಚ್ಚಾಗಲಿದೆ. ಆತ್ಮೀಯರು ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರು ಇಂದು ಹಣಕಾಸಿನ ವ್ಯವಹಾರದಲ್ಲಿ ಅಭಿವೃದ್ಧಿ ಹೊಂದುತ್ತೀರಿ. ಮನೆಯಲ್ಲಿ ವಿನಾಕಾರಣ ಅಸಮಾಧಾನ ಹೆಚ್ಚಾಗಲಿದೆ. ಮಾತು ನಡೆ ನುಡಿಯಲ್ಲಿ ಎಚ್ಚರಿಕೆ ಇರಲಿ.
ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರು ಸ್ನೇಹಿತರೊಂದಿಗೆ ಮನೋರಂಜನೆಗೋಸ್ಕರ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಅನಾರೋಗ್ಯದಿಂದ ಖರ್ಚು ಹೆಚ್ಚಾಗಲಿದೆ. ಮಕ್ಕಳಿಂದ ನೆಮ್ಮದಿ ಸಿಗಲಿದೆ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರ ದೀರ್ಘಕಾಲದ ಆರ್ಥಿಕ ಬಿಕ್ಕಟ್ಟಿಗೆ ಇಂದು ಮುಕ್ತಿ ಸಿಗಲಿದೆ. ಕುಟುಂಬದ ವ್ಯವಹಾರಗಳು ಹೆಚ್ಚು ಇರುತ್ತದೆ. ದಿಢೀರ್ ಧನ ಲಾಭವಾಗುವ ಸಾಧ್ಯತೆ ಇದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಸಿಗಲಿದೆ. ಆತ್ಮೀಯರು ಮನೆಗೆ ಭೇಟಿ ನೀಡಲಿದ್ದಾರೆ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಕೆಲಸದಲ್ಲಿ ಹೆಚ್ಚು ಒತ್ತಡದಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತದೆ. ಪ್ರಯಾಣದಲ್ಲಿ ಎಚ್ಚರ ವಹಿಸಿ. ಮಾತಿನಲ್ಲಿ ಎಚ್ಚರಿಕೆ ಇರಲಿ. ಖುಷಿಯಲ್ಲಿ ಯಾರಿಗೂ ಮಾತು ಕೊಡಬೇಡಿ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರು ಇಂದು ಸಾಲ ಮರುಪಾವತಿ ಮಾಡುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಉತ್ತಮ. ಮಕ್ಕಳಿಂದ ಕಿರಿ ಕಿರಿಯಾಗುವ ಸಾಧ್ಯತೆ ಇದೆ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಉದ್ಯೋಗದ ಪ್ರಯತ್ನಕ್ಕೆ ಪ್ರತಿ ಫಲ ಪ್ರಾಪ್ತಿ ಉಂಟಾಗುತ್ತದೆ. ಪುಣ್ಯಕ್ಷೇತ್ರದ ದರ್ಶನ ಮಾಡುವಿರಿ. ಮನಸ್ಸಿಗೆ ನೆಮ್ಮದಿ ಸಿಗುವ ಕೆಲಸದಲ್ಲಿ ಮಗ್ನರಾಗುತ್ತೀರಿ. ಮನೆಯಲ್ಲಿ ಖುಷಿ ಸಂತೋಷ ಹೆಚ್ಚಾಗಲಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ಪ್ರಾಪ್ತಿ ಆಗುತ್ತದೆ. ಈ ದಿನ ಹೆಚ್ಚು ಖರ್ಚುಗಳು ಉಂಟಾಗುತ್ತದೆ. ಯಾರಿಗೂ ಸಾಲ ಕೊಡಬೇಡಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಇಂದು ನಿಮ್ಮ ಸ್ನೇಹಿತರೊಂದಿಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಆಹಾರದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಅಪರಿಚಿತರೊಂದಿಗೆ ಹಣದ ವ್ಯವಹಾರ ಒಳ್ಳೆಯದಲ್ಲ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಕುಟುಂಬದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಕೆಲಸದ ಒತ್ತಡ ಹಾಗೂ ಅನಗತ್ಯ ಕಿರಿಕಿರಿ ಹೆಚ್ಚಾಗಲಿದೆ. ಮೌನ ವಹಿಸುವುದು ಉತ್ತಮ.











