ಪುತ್ತೂರು : ಮಹಿಳಾ ಠಾಣಾ ಬಳಿಯಲ್ಲೇ ಯುವತಿಯೋರ್ವಳಿಗೆ ಯುವಕನೋರ್ವ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
![](https://pratidhvani.com/wp-content/uploads/2023/08/WhatsApp-Image-2023-08-24-at-3.45.29-PM-768x1024.jpeg)
ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ನಡೆದಿರುವ ಘಟನೆ ಇದಾಗಿದ್ದು, ಮೂರರಿಂದ ನಾಲ್ಕು ಭಾರೀ ಅಪರಿಚಿತ ವ್ಯಕ್ತಿಯು ಯುವತಿಯ ಕತ್ತುಗೆ ಸೀಳಿದ್ದಾನೆ.
ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಪುತ್ತೂರಿನ ಬರೆಪ್ಪಾಡಿಯ ಯುವಕನಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.ಬಂಟ್ವಾಳ ತಾಲೂಕಿನ ವಿಟ್ಲದ ಗೌರಿ ಎಂಬ ಯುವತಿಯ ಕತ್ತು ಗೆ ಸೀಳಿದ ಯುವಕ. ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿ ಗೌರಿಯನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ
ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು ಗುರುತಿಸಲಾಗಿದ್ದು. ಯುವಕನ ಬೈಕ್ ನಂಬರ್ ಅಧಾರದಲ್ಲಿ ಪದ್ಮರಾಜ್ ಎಂದು ತಿಳಿದು ಬಂದಿದೆ.