ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ಇತರೆ ಮೂವರ ವಿರುದ್ಧ ಜೀವ ಬೆದರಿಕೆ ಆರೋಪದ ಮೇಲೆ ವಿಜಯನಗರದ ಹೊರಪೇಟೆಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.
ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್ 504, 506ರ ಅಡಿ SC/ST ಕಾಯ್ದೆ ಅನ್ವಯ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ SP ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಪ್ರಕರಣ ದಾಖಲಿಸಿಕೊಂಡು ಆಸ್ಪತ್ರೆಗೆ ಕಳಿಸಿರುವ ಘಟನೆ ನಡೆದಿದೆ.