ಹೊಲದಿಂದ ಮರಳುತ್ತಿದ್ದ ದಲಿತ ಕುಟುಂಬವನ್ನು ಹಾದಿ ನಡುವೆ ತಡೆದು ನಿಲ್ಲಿಸಿ, ಮಕ್ಕಳೆದುರೇ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಗಳನ್ನು ಲಾಲು ಠಾಕೂರ್, ಧಾನ್ ಸಿಂಗ್ ಠಾಕೂರ್, ವಿಪಿನ್ ಠಾಕೂರ್, ಮೋಹಿತ್ ಠಾಕೂರ್, ಸಚಿನ್ ಠಾಕೂರ್ ಹಾಗೂ ಲೋಕೇಂದ್ರ ಸಿಂಗ್ ಠಾಕೂರ್ ಎಂದು ಗುರುತಿಸಲಾಗಿದೆ.
ಸಂತ್ರಸ್ತೆ ಹಾಗೂ ದುಷ್ಕರ್ಮಿಗಳು ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದು, ಮಂಗಳವಾರದಂದು ಮಹಿಳೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಹೊಲದಿಂದ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.

ದೇಶಿ ಪಿಸ್ತೂಲು ತೋರಿ ಸಂತ್ರಸ್ತೆಯ ಕುಟುಂಬವನ್ನು ಬೆದರಿಸಿದ ಆರೋಪಿಗಳು ಸಂತ್ರಸ್ತೆಯ ಪತಿಯನ್ನು ಥಳಿಸಿ ಓಡಿಸಿದ್ದಾರೆ. ಅನಂತರ ಬಂದೂಕು ತೋರಿಸಿ ಮಹಿಳೆಯ ಮೇಲೆ ಮಕ್ಕಳ ಎದುರಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಚನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಆಗಿದೆ.