ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಹಾನಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ.
ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮಾರತಳ್ಳಿಯಲ್ಲಿ ರಾಜಕಾಲುವೆ ಮುಚ್ಚಿದ್ದಕ್ಕೆ ಇಕೋ ಸ್ಪೇಸ್ ಬಳಿಯ ಮುಖ್ಯರಸ್ತೆ ಜಲಾವೃತಗೊಂಡಿದೆ. ಕೈಗೊಂಡನಹಳ್ಳಿ, ಸರ್ಜಾಪುರ ಕೆರೆಗಳ ನೀರು ರಸ್ತೆಗೆ ರಭಸವಾಗಿ ಹರಿದು ಬರುತ್ತಿದೆ. ಮಾರತ್ಹಳ್ಳಿ-ಸರ್ಜಾಪುರ ಔಟರ್ ರಿಂಗ್ರೋಡ್ ಜಲಾವೃತವಾಗಿದೆ.
ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಬಿಬಿಎಂಪಿ 10 ಸಾವಿರ ರೂ. ಪರಿಹಾರ ಘೋಷಿಸಲಾಗಿದ್ದು, ಸರ್ವೆ ಕಾರ್ಯ ನಡೆಯುತ್ತಿದೆ. ಕಾನೂನು ಬದ್ದವಾಗಿ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.