• Home
  • About Us
  • ಕರ್ನಾಟಕ
Wednesday, November 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾರ್ಲಿಂಗ್ ಕೃಷ್ಣ ʼಬ್ರ್ಯಾಟ್‌ʼಗೆ ಗೆಲುವಿನ ಹ್ಯಾಟ್: ಚಿತ್ರತಂಡ ಫುಲ್‌ ಖುಷ್‌

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ವಿಶೇಷ, ಸಿನಿಮಾ
0
ಡಾರ್ಲಿಂಗ್ ಕೃಷ್ಣ ʼಬ್ರ್ಯಾಟ್‌ʼಗೆ ಗೆಲುವಿನ ಹ್ಯಾಟ್: ಚಿತ್ರತಂಡ ಫುಲ್‌ ಖುಷ್‌
Share on WhatsAppShare on FacebookShare on Telegram
ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರ ಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದ ವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ.

ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

Darshan case:  ದರ್ಶನ್ ಕರೆತರಲು ಪೊಲೀಸರ ಹರಸಾಹಸ.. ಕಿಕ್ಕಿರಿದ ಕೋರ್ಟ್ ಸಿಬ್ಬಂದಿ..! #pratidhvani #Darshan

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ಬಳಿಕ ಚಿತ್ರದ ಯಶಸ್ಸಿನ ಖುಷಿ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ, ಸಾಮಾನ್ಯವಾಗಿ ‌ನನ್ನ ಪತ್ನಿ ಇಲ್ಲಿಯವರೆಗೂ ನನ್ನ ಯಾವ ಸಿನಿಮಾ ಲುಕ್‌ನ ಬಗ್ಗೆ ಕೂಡ ಮಾತನಾಡಿರಲಿಲ್ಲ.‌ ಈ ಚಿತ್ರ ನೋಡಿ ತುಂಬಾ ಚೆನ್ನಾಗಿ ಕಾಣುತ್ತೀರಾ ಎಂದು ಪ್ರಶಂಸಿಸಿದ್ದಾರೆ. ನನ್ನ ಅಕ್ಕನ ಮಕ್ಕಳು, ಸ್ನೇಹಿತರು ಹಾಗೂ ಅಭಿಮಾನಿಗಳು ಎಲ್ಲರೂ‌ ಕೂಡ ಈ ಚಿತ್ರದ ನನ್ನ ಹೊಸ ಲುಕ್‌ಗೆ ಹಾಗೂ ಕ್ರಿಸ್ಟಿ‌ ಪಾತ್ರದ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿದರು. ಈ ಎಲ್ಲಾ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಒಂದೊಳ್ಳೆ ಚಿತ್ರ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ನನ್ನ‌ ಧನ್ಯವಾದ ಎಂದರು.

DarshanCaseupdates:ಕೋರ್ಟಿಗೆ ಹಾಜರಾದ D Boss  ಮತ್ತು ಗ್ಯಾಂಗ್..! #pratidhvani #darshanthoogudeepa #dboss

ಮೊದಲಿಗೆ ನಮ್ಮ ಡಾಲ್ಫಿನ್ ಎಂಟರ್ಟೈನ್ಮೆಂಟ್‌ ಸಂಸ್ಥೆಗೆ ಉತ್ತಮ ಚಿತ್ರ ಕೊಟ್ಟ ಶಶಾಂಕ್ ಅವರಿಗೆ ಹಾಗೂ ನಾಯಕ ಕೃಷ್ಣ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ.‌ ನೀವೆಲ್ಲರೂ ನೀಡಿರುವ ಸಹಕಾರಕ್ಕೆ ಎಷ್ಟು ‌ಹೇಳಿದರೂ ಕಡಿಮೆ.‌ ಮುಂದಿನ‌ ದಿನಗಳಲ್ಲಿ‌ ನಮ್ಮ ಸಂಸ್ಥೆಯಿಂದ ಮತ್ತಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತೇವೆ‌ ಎಂದು ನಿರ್ಮಾಪಕ ಮಂಜುನಾಥ್ ಕಂದಕೂರ್ ತಿಳಿಸಿದರು.

ನಾಯಕಿ ಮನಿಶಾ ಕಂದಕೂರ್ ಸಹ ಚಿತ್ರದ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಹೇಳಿದರು. ನಟ ಡ್ರ್ಯಾಗನ್ ಮಂಜು ಅವರು ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮೆಚ್ಚುಗೆಗೆ ಖುಷಿಪಟ್ಟರು. ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಕಲಾವಿದರಾದ ಶ್ರೀವತ್ಸ, ಸಂಚಿತ್, ಗಿರಿರಾಜ್ ಹಾಗೂ ಶಿವಪ್ರಸಾದ್ ಮುಂತಾದವರು ಚಿತ್ರದ ಯಶಸ್ಸಿನ ಸಂತೋಷವನ್ನು ಹಂಚಿಕೊಂಡರು. ಇನ್ನು ಈ ಚಿತ್ರದಲ್ಲಿರುವ ಡಾಲರ್ ಮಣಿ ಪಾತ್ರ ಏಕೆ ಇಂಗ್ಲಿಷ್ ಕಲಿಯುತ್ತಿರುತ್ತದೆ? ಎಂಬ ವಿಡಿಯೋ ತುಣುಕು ಈಗ ಬಿಡುಗಡೆಯಾಗಿದ್ದು, ಆ ಮೂಲಕ “ಬ್ರ್ಯಾಟ್” ಭಾಗ 2 ಬರುವ ಮುನ್ಸೂಚನೆಯನ್ನು ಚಿತ್ರತಂಡ ನೀಡಿದೆ.

Belagavi :  ಮೊರಾರ್ಜಿ ವಸತಿ ಶಾಲೆಯಲ್ಲಿ ಮತ್ತೆ ಫುಡ್‌ ಪಾಯಿಸನ್...! ಮಕ್ಕಳ ಸ್ಥಿತಿ ಅಸ್ತವ್ಯಸ್ತ.. #pratidhvani
Tags: Actor Darling KrishnaKannadakannada moviesMoviessandalwood
Previous Post

ಸಾಹಿತ್ಯಿಕ ಪರಿಸರ ಕಾಣದ ಸಮ್ಮೇಳನ ನಿರರ್ಥಕ

Next Post

ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

Related Posts

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 12, 2025
0

ನವದೆಹಲಿ: ಭಾರೀ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಎರಡೂ ಹಂತದ ಮತದಾನ ಪೂರ್ಣಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟಗೊಂಡಿದೆ. ನಿನ್ನೆ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ...

Read moreDetails
ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

November 12, 2025
ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

November 12, 2025
Next Post
ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

Recent News

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 12, 2025
ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?
Top Story

ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

by ಪ್ರತಿಧ್ವನಿ
November 12, 2025
ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ
Top Story

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

by ಪ್ರತಿಧ್ವನಿ
November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
Top Story

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

by ಪ್ರತಿಧ್ವನಿ
November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ
Top Story

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

by ಪ್ರತಿಧ್ವನಿ
November 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

November 12, 2025
ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

ಚುನಾವಣೆ ಸಮಯದಲ್ಲೇ ಭಯೋತ್ಪಾದಕರ ದಾಳಿ ಯಾಕೆ?: ನೆಟ್ಟಿಗರ ಪ್ರಶ್ನೆಗೆ ಉತ್ತರಿಸೋರ್ಯಾರು..?

November 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada