ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬರೋಬ್ಬರಿ ನಾಲ್ಕು ತಿಂಗಳು ಸೆರೆವಾಸದಲ್ಲಿದ್ದ ನಟ ದರ್ಶನ್ ಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ. ಅನಾರೋಗ್ಯದ ಕಾರಣ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು ಲಭ್ಯವಾಗಿದೆ.

ಹೈಕೋರ್ಟ್ ನ ಏಕ ಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ S. ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
ಆರೋಪಿ ದರ್ಶನ್ ಬೆನ್ನು ನೋವಿಗೆ ತುರ್ತು ಚಿಕಿತ್ಸೆ ಪಡೆಯಲು ಅವರಿಗೆ ಮಧ್ಯಂತರ ಜಾಮೀನು ನೀಡಿ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆ ಕಾಡಬಹುದು ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ಮನವಿ ಮಾಡಿದ್ದರು. ಈ ಆಧಾರದ ಮೇಲೆ ದರ್ಶನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.