ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renuka swamy murder case) ಲಾಕ್ ಆಗಿರುವ ನಟ ದರ್ಶನನ್ನು (Actor darshan) ರಕ್ಷಿಸಲು ಪ್ರಭಾವಿಗಳು ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಪ್ರಕರಣದ SPP ಅಂದ್ರೆ ಸರ್ಕಾರಿ ಪರ ವಕೀಲರನ್ನು ಬದಲಾಯಿಸಲು ಷಡ್ಯಂತ್ರ ಮಾಡಲಾಗ್ತಿದೆ ಎನ್ನಲಾಗ್ತಿದೆ.
![](https://pratidhvani.com/wp-content/uploads/2024/06/IMG_8284.jpeg)
SPP ಪ್ರಸನ್ನ ಕುಮಾರ್ (Prasanna kumar) ಬದಲಾಯಿಸಲು ಒತ್ತಡ ಹೆಚ್ಚಾಗಿದೆ. ಪ್ರಸನ್ನ ಕುಮಾರ್ ಮೊದಲೇ CBI – NIA ಪರ ಅಡ್ವಕೇಟ್ ಆಗಿದ್ದವರು. ಅಂತವು ಇದ್ರೆ ದರ್ಶನ್ ರಕ್ಷಣೆ ಅಸಾಧ್ಯ ಎಂಬ ಲೆಕ್ಕಾಚಾರ ಶುರುವಾಗಿದೆ. ಯಾಕಂದ್ರೆ ಈಗಾಗಲೇ ಅನೇಕ ಪ್ರಕರಣದಲ್ಲಿ ಪ್ರಸನ್ನ ಕುಮಾರ್ ಸಾಮರ್ಥ್ಯ ಸಾಬೀತಾಗಿದೆ. ಅನೇಕ ಮಂದಿ ಉಗ್ರರಿಗೆ ಪ್ರಸನ್ನಕುಮಾರ್ ಶಿಕ್ಷೆ ಕೊಡಿಸಿದ್ದರು.
![](https://pratidhvani.com/wp-content/uploads/2024/06/IMG_8285.jpeg)
ಯಾರ ಒತ್ತಡಕ್ಕೂ ಮಣಿಯೋದಿಲ್ಲ ಅಂತಾನೇ ಪ್ರಸನ್ನ ಕುಮಾರ್ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಅವರನ್ನು ಬದಲಾಯಿಸಲು ಒತ್ತಡ ಹೇರಲಾಗ್ತಿದೆ ಅಂತ ನ್ಯೂಸ್ಫಸ್ಟಗೆ ಪ್ರಕರಣದ ತನಿಖಾ ತಂಡದಿಂದ ಮಾಹಿತಿ ಸಿಕ್ಕಿದೆ.