
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024ಕ್ಕೆ ದಿನಗಣನೆ ಆರಂಭವಾಗಿದೆ.
ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಇಂದು ಅರಮನೆ ನಗರಿಗೆ ಎಂಟ್ರಿ ಪಡೆಯಲಿವೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆಯಿತು.ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ
ಬೆಳಿಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪುಷ್ಪಾರ್ಚನೆ ನೆರವೇರಿಸಲಾಗಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ ವೆಂಕಟೇಶ್, ಈಶ್ವರ ಖಂಡ್ರೆ, ಸಂಸದ ಸುನಿಲ್ ಬೋಸ್, ಶಾಸಕರಾದ ಜಿ ಡಿ ಹರೀಶ್ ಗೌಡ, ಡಿ ರವಿಶಂಕರ್, ಅನಿಲ್ ಚಿಕ್ಕಮಾದು, ಎಂಎಲ್ಸಿ ವಿವೇಕಾನಂದ, ಮುಡಾ ಅಧ್ಯಕ್ಷ ಕೆ ಮರೀಗೌಡ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯರಿಂದ ದಸರಾ ಗಜಪಡೆಗೆ ಪುಷ್ಪಾರ್ಚನೆ ಮಾಡಿದ್ರು.

ಆರತಿ ಬೆಳಗಿ ಗಜಪಯಣಕ್ಕೆ ಚಾಲನೆ ನೀಡಲಾಯ್ತು.
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನತ್ತ ಪಯಣ ಬೆಳೆಸಿದೆ.
ಕ್ಯಾಪ್ಟನ್ ಅಭಿಮನ್ಯು , ಭೀಮ ಗೋಪಿ , ಧನಂಜಯ , ಕಂಜನ್ , ರೋಹಿತ್ ,ಲಕ್ಷ್ಮಿ , ವರಲಕ್ಷ್ಮಿ , ಏಕಲವ್ಯ ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ. ಆಗಸ್ಟ್ 23ಕ್ಕೆ ಮೈಸೂರು ಅರಮನೆಗೆ ಗಜಪಡೆ ಎಂಟ್ರಿ ಪಡೆಯಲಿವೆ.
Av Flow..