• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಂಸಾಗರ ದಸರಾ ಆಚರಣೆ : ಒಮ್ಮೆ ನೀಡಿದ ಆದೇಶವನ್ನು ಪಾಲಿಸದ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಕೋರ್ಟ್ ಛೀಮಾರಿ!

Any Mind by Any Mind
October 23, 2023
in ಕರ್ನಾಟಕ
0
ಕಂಸಾಗರ ದಸರಾ ಆಚರಣೆ : ಒಮ್ಮೆ ನೀಡಿದ ಆದೇಶವನ್ನು ಪಾಲಿಸದ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಕೋರ್ಟ್ ಛೀಮಾರಿ!
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ದೊಡ್ಡ ತೇಕಲವಟ್ಟಿ ಗ್ರಾಮದ ಕಂಸಾಗರ ಬೀರಲಿಂಗೇಶ್ವರ ಸ್ವಾಮಿಯ ಹಳೆಯ ದೇವಾಲಯವು ತುಂಬಾ ಶಿಥಿಲಾವಸ್ಥೆಯಲ್ಲಿದ್ದು ಬಿದ್ದು ಹೋಗುವ ಹಂತದಲ್ಲಿದ್ದರಿಂದ ಹೋರಿ ಕುರುಬ ಸಮುದಾಯದವರು 2007ರಲ್ಲಿ ಸಮಾಜದ ಮುಖಂಡರು, ಗ್ರಾಮದ ಮುಖಂಡರು ಹಾಗೂ ಸಮಾಜದ ಧಾರ್ಮಿಕ ಗುರುಗಳು ಸೇರಿ ಹೊಸದಾದ ದೇವಾಲಯಕ್ಕೆ ಅಡಿಪಾಯ ಹಾಕಿ 2015ರಲ್ಲಿ ದೇವಾಲಯವನ್ನ ಲೋಕಾರ್ಪಣೆಗೊಳಿಸಲಾಗಿತ್ತು. ಅಂದಿನಿಂದ 2020ರ ವರೆಗೆ ಧಾರ್ಮಿಕ ವಿಧಿವಿಧಾನ, ಪೂಜಾ ಕೈಂಕರ್ಯಗಳನ್ನ ನೆರವೇರಿಸಿಕೊಂಡು ಬರಲಾಗುತ್ತಿದೆ.

ಹೀಗಿರುವಾಗ 2020ರಲ್ಲಿ ಕೆಲವು ಸ್ಥಳೀಯ ಪಟ್ಟಭದ್ರಾ ಹಿತಾಸಕ್ತಿಗಳು ರಾಜಕೀಯ ಪ್ರೇರಣೆಯಿಂದ ಹೊಸದಾದ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಬದಲು ತಮ್ಮ ಧಾರ್ಮಿಕತೆ ಮೆರೆಯುವ ಬದಲು ಶಿಥಿಲಾವಸ್ಥೆಯಲ್ಲಿದ್ದ ಬಿದ್ದು ಹೋಗುವ ಹಂತ ತಲುಪಿರುವ ಹಳೆಯ ದೇವಾಲಯಕ್ಕೆ ವಿಗ್ರಹ ಹಾಗೂ ಪೂಜಾ ಪರಿಕರಗಳನ್ನ ಸ್ಥಳಾಂತರಿಸುವ ಪ್ರಯತ್ನವನ್ನ ವಿರೋಧಿಸಿ ಹೋರಿ ಕುರುಬ ಸಮುದಾಯದ ಪ್ರಕಾಶ್ ಮತ್ತಿತ್ತರರು ಹೈಕೋರ್ಟ್ ಮೇಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಂ.ನಾಗಪ್ರಸನ್ನರವರು ವಿಚಾರಣೆ ನಡೆಸಿ ರಾಜಕೀಯ ಜಗಳದಿಂದ ಪ್ರಕರಣ ನ್ಯಾಯಾಲಯದ ಕದ ತಟ್ಟಿದೆ ತಮ್ಮ ರಾಜಕೀಯ ಹಾಗೂ ಇತರೆ ಅಜೆಂಡಾ ಸಾರ್ವಜನಿಕ ಹಿತಾಸಕಿ, ಭಕ್ತರ ಸುರಕ್ಷತೆ ಹಾಗೂ ನಂಬಿಕೆಗಳನ್ನ ಕಿತ್ತುಕೊಳ್ಳಬಾರದು ಧಕ್ಕೆ ತರುವಂತಹ ಚಿತ್ತಾವಣೆ ಮಾಡಬಾರದೆಂದು ನ್ಯಾಯಾಧೀಶರು ಬೇಸರ ಹೊರಹಾಕಿದ್ದಾರೆ.

ನೂತನವಾಗಿ ನಿರ್ಮಿಸಿರುವ ಶ್ರೀ ಕಂಸಾಗರ ಬೀರಲಿಂಗೇಶ್ವರ ದೇವಾಲಯದಲ್ಲಿ ಹಿಂದಿನಂತೆ ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವಂತೆ ಮತ್ತು ಯಥಾಸ್ಥಿತಿ ಕಾಪಾಡೊಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ ಹಾಗೂ ಸರ್ಕಾರಿ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ದೇವಾಲಯದ ವಿಧಿವಿಧಾನಗಳನ್ನು ನಡೆಸಿಕೊಂಡು ಹೋಗಲು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ತಾಕೀತು ಮಾಡಿದೆ.

ದೇವರ ಮೇಲೆ ಯಾವುದೇ ಹಕ್ಕನ್ನ ಪ್ರತಿಪಾದಿಸಲು ಸಂಬಂಧಪಟ್ಟವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಬಹುದು. ದಾವೆ ಹೂಡುವವರು ಹೋರಿ ಕುರುಬ ಸಮುದಾಯದೊಂದಿಗೆ ಚರ್ಚಿಸಿ ದೇವರನ್ನು ಇಡಬೇಕಾಗಿರುವ ಸ್ಥಳದ ಕುರಿತು ತೀರ್ಮಾಣ ಕೈಗೊಳ್ಳುವ ಮುನ್ನ ಸಾರ್ವಜನಿಕರ ಸುರಕ್ಷತೆಯನ್ನ ಖಾತರಿ ಪಡಿಸಬೇಕು ಎಂದು ನ್ಯಾಯಾಲಯ ಅರ್ಜಿದಾರರಿಗೆ ನಿರ್ದೇಶಿಸುವ ಮೂಲಕ ಪ್ರಕರಣವನ್ನ 2022 ನವೆಂಬರ್ ನಲ್ಲಿ ಇತ್ಯರ್ಥಗೊಳಿಸಿದೆ.

ಆದರೆ ಮತ್ತೆ ಈ ವಿಷಯವಾಗಿ ತಕರಾರು ತೆಗೆದಿದ್ದು, ಹೋರಿ ಕುರುಬ ಸಮುದಾಯದ ಪ್ರಕಾಶ್ ಮತ್ತಿತ್ತರರು ಮತ್ತೆ ಹೈಕೋರ್ಟ್ ಮೇಟ್ಟಿಲೇರಿದ್ದರು, ಕೋರ್ಟ್ ಮತ್ತೆ ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ ಪೊಲೀಸ್ ಕಮಿಷನರ್ ಸೇರಿದಂತೆ ಕಾನೂನು ಕಾಪಾಡಬೇಕಾದ ಪೊಲೀಸ್ ಇಲಾಖೆಗೆ ಈ ವಿಷಯವಾಗಿ ತರಾಟೆ ತೆಗೆದುಕೊಂಡಿದೆ.

ಕಳೆದ ಆದೇಶವನ್ನೇ ಮರು ಉಲ್ಲೇಖಿಸಿದ ಕೋರ್ಟ್, ದೇವಾಲಯದ ಪರಿಪೂರ್ಣ ಇತಿಹಾಸವನ್ನು ಕೋರ್ಟ್ ಗೆ ಈಗಾಗಲೇ ತಿಳಿಸಿದೆ. ಈ ಹಿಂದೆ ದೇವಸ್ಥಾನ ಶಿಥಿಲವಾಗಿದ್ದು, ಹೊಸ ದೇವಸ್ಥಾನ ನಿರ್ಮಿಸಿ ದೇವರ ಪ್ರತಿಷ್ಟಾಪನೆ ಆಗಿದೆ. ಅಲ್ಲಿಗೆ ಸಾವಿರಾರು ಭಕ್ತಾದಿಗಳು ಬರುವ ಕಾರಣ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆಯಾಗದಂತೆ ಹಾಗೂ ಶಾಂತಿ ಸುವ್ಯವಸ್ಥೆ ಜಿಲ್ಲಾಡಳಿತ ನೋಡಿಕೊಳ್ಳಬೇಕು. ಪೊಲೀಸರು ಕಾನೂನು ಉಲ್ಲಂಘನೆ ಆಗದಂತೆ ಭಕ್ತರಿಗೆ ಬಂದೊಬಸ್ತು ನೀಡಬೇಕು ಎಂದು ಕಳೆದ ಆದೇಶಲ್ಲೇ ಸೂಚಿಸಲಾಗಿದೆ. ಅದನ್ನೇ ಈಗಲೂ ಹೇಳಲು ಇಚ್ಚಿಸುತ್ತೇವೆ ಎಂದು ಹೈಕೋರ್ಟ್ ಜಿಲ್ಲಾಡಳಿತಕ್ಕೆ ಹಾಗೂ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದೆ.

ಒಂದು ಪ್ರಕರಣಕ್ಕೆ ಒಮ್ಮೆ ತೀರ್ಪು ಬಂದರೆ ಅದನ್ನು ಸರಿಯಾಗಿ ಪಾಲಿಸಿಕೊಂಡು ಹೋಗುವುದು ಜಿಲ್ಲಾಡಳಿತ ಕರ್ತವ್ಯವಾಗಿರುತ್ತದೆ ಆದರೆ ಒಮ್ಮೆ ನೀಡಿದ ತೀರ್ಪನ್ನು ಪ್ರತಿ ವರ್ಷ ಪಾಲಿಸದೇ ಮತ್ತೆ ಕೋರ್ಟ್ ಮೂಲಕ ಆದೇಶ ಬರುವವರೆಗೂ ಪೊಲೀಸರು ಕಾಯ್ದಿರುವುದು ನಿಜಕ್ಕೂ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ವಿಷಯವೇ ಹೌದು.

ಕೋರ್ಟ್ ಆದೇಶದ ನಂತರ ಈಗ ಕಂಸಾಗರ ದಸರಾ ಆಚರಣೆಗೆ ಸೂಕ್ತ ಪೊಲೀಸ್ ಪಡೆಯಲ್ಲಿ ನಿಯೋಜಿಸಲಾಗಿದೆ. ಹಬ್ಬದ ವಾತಾವರಣ ಮತ್ತೆ ಊರಿನಲ್ಲಿ ಕಳೆಕಟ್ಟಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

Next Post

ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಸಿದ್ದರಾಮಯ್ಯ : ಹೆಚ್.ಡಿ ಕುಮಾರಸ್ವಾಮಿ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಸಿದ್ದರಾಮಯ್ಯ : ಹೆಚ್.ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಸಿದ್ದರಾಮಯ್ಯ : ಹೆಚ್.ಡಿ ಕುಮಾರಸ್ವಾಮಿ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada