ಅತ್ಯಂತ ಪ್ರಾಚೀನ ಹಾಗೂ ಸಾಂಸ್ಕೃತಿಕ ಹಬ್ಬವಾದ ಬೆಂಗಳೂರು ಕರಗಕ್ಕೆ ಮುಹೂರ್ತ ನಿಗದಿಯಾಗಿದೆ.11 ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕರಗ ಶಕ್ತ್ಯೋತ್ಸವ ನಡೆಯಲಿದೆ.

ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಆಚರಣೆಗಳು ನಡೆಯಲಿವೆ.ಜ್ಞಾನೇಂದ್ರ ಸ್ವಾಮಿ ಅವರು ಈ ಬಾರಿ ಸತತ 16ನೇ ಬಾರಿಗೆ ಬೆಂಗಳೂರು ಕರಗವನ್ನು ಹೊರಲಿದ್ದಾರೆ.ಮಲ್ಲಿಗೆ ಹೂವಿನಿಂದ ಅಲಂಕೃತವಾದ ಕರಗವನ್ನು ಹೊತ್ತ ಅರ್ಚಕರು ನಗರದ ಪ್ರಮುಖ ಪೇಟೆ ಬೀದಿಗಳಲ್ಲಿ ಸಂಚರಿಸಲಿದ್ದಾರೆ.

ಮಾರ್ಚ್ 24, 2026 ರಂದು ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. 30, 2026 ರಂದು ರಾತ್ರಿ ಪ್ರಸಿದ್ಧ ‘ಹಸಿಕರಗ’ ಮಹೋತ್ಸವ ಜರುಗಲಿದೆ. ಚೈತ್ರ ಪೌರ್ಣಮಿಯ ದಿನವಾದ ಏಪ್ರಿಲ್ 1, 2026ರ ಮಧ್ಯರಾತ್ರಿ ವಿಶ್ವವಿಖ್ಯಾತ ಹೂವಿನ ಕರಗ ಮೆರವಣಿಗೆ ನಡೆಯಲಿದೆ.






