• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಗೋಲ್ ಮಾಲ್…!

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಅಭಿಮತ, ಕರ್ನಾಟಕ, ವಿಶೇಷ
0
Share on WhatsAppShare on FacebookShare on Telegram

ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಕಳೆದ ವರ್ಷ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಿತು. ಬಿಜೆಪಿ ಸರಕಾರದ ಅವಧಿಯಲ್ಲಿ ಈ ನೇಮಕಾತಿ ನಡೆದಿತ್ತು. ಈಗ ಸರಕಾರ ಬದಲಾಗಿದೆ. ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದೆ. ಕಳೆದ ವರ್ಷ 100ಕ್ಕೂ ಹೆಚ್ಚು ಎಫ್​ಡಿಸಿ, ಎಸ್​ಡಿಸಿ, ಚಾಲಕ ಮತ್ತು ಡಿ ದರ್ಜೆ ಹುದ್ದೆಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ದೊಡ್ಡ ಮಟ್ಟದ ಗೋಲ್ ಮಾಲ್ ನಡೆದಿರುವ ಕುರಿತು ಪರೀಕ್ಷೆ ಬರೆದ ಉದ್ಯೋಗ ಆಕಾಂಕ್ಷಿಗಳು ಅಂದೇ ಆರೋಪ ಮಾಡಿದ್ದರು. ಅಂದಿನ ಆಡಳಿತ ಮಂಡಳಿಯು ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿಯನ್ನು ಮಾಡಿತ್ತು. ಈ ನೇಮಕಾತಿ ಕುರಿತು ಮಂಜುನಾಥ್ ಎನ್ನುವ ಉದ್ಯೋಗ ಆಕಾಂಕ್ಷಿಯು ಕೋರ್ಟ್ ಮೆಟ್ಟಿಲು ಏರಿದ್ದಾರೆ.

ADVERTISEMENT

ಈ ನಡುವೆ ಅನಧಿಕೃತ ವಿವಿಗೆ ಪರೀಕ್ಷೆ ನಡೆಸಲು ಸುಮಾರು 40 ಲಕ್ಷ ರೂ. ಹಣ ನೀಡಿತ್ತು. ಈ ವಿವಿಗೆ ಪರೀಕ್ಷೆ ನಡೆಸುವ ಕುರಿತು ಆಡಳಿತ ಮಂಡಳಿ ಮತ್ತು ಅಪೇಕ್ಸ್ ಬ್ಯಾಂಕ್ ನ ಸಲಹೆಯನ್ನು ಪಡೆದಿರಲಿಲ್ಲ. ಇನ್ನೂ ಕಳೆದ ವರ್ಷ ಲಿಖಿತ ಪರೀಕ್ಷೆ ಬಳಿಕ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡದೇ ವಾಪಸ್ ಪಡೆಯುವ ಮೂಲಕ ಗೊಂದಲ ಮೂಡಿಸಿತ್ತು. ವಿವಿಧ ಹುದ್ದೆಗಳ ಆಯ್ಕೆ ಸಂದರ್ಭದಲ್ಲಿ ನೇರ ಸಂದರ್ಶನದಲ್ಲೂ ತಾರತಮ್ಯ ಮಾಡಿದೆ. ತಮಗೆ ಬೇಕಾಗಿರುವ ಅಭ್ಯರ್ಥಿಗಳಿಗೆ ಮಾತ್ರ ನೇರ ಸಂದರ್ಶನ ಬರಲು ಸೂಚನೆ ನೀಡಿದ್ದರಂತೆ. ಯಾರೆಲ್ಲ ಹಣ ನೀಡಿದ್ದಾರೆ ಅವರಿಗೆ ಮಾತ್ರ ಬ್ಯಾಂಕ್​ನಲ್ಲಿ ಉದ್ಯೋಗ ಸಿಕ್ಕಿದೆ ಎನ್ನುವುದು ಒಂದಿಷ್ಟು ಪರೀಕ್ಷೆ ಬರೆದ ಅಭ್ಯರ್ಥಿಗಳ ಆರೋಪವಾಗಿದೆ.

ಡಿಸಿಸಿ ಬ್ಯಾಂಕ್​ನಲ್ಲಿ ನೇಮಕಾತಿ ಹೆಸರಿನಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ. ನೇಮಕಾತಿಯಲ್ಲಿ ಆಯ್ಕೆ ಆದ ಉದ್ಯೋಗಿಗಳಿಗೆ ಗೌಪ್ಯವಾಗಿ ಸಂದರ್ಶನ ಬಳಿಕ ಆದೇಶವನ್ನು ನೀಡಿದೆ. ಹೀಗೆ ಪರೀಕ್ಷೆ ಬರೆದ ಒಂದಿಷ್ಟು ಅಭ್ಯರ್ಥಿಗಳಿಗೆ ನೇಮಕಾತಿ ಮೊದಲೇ ಬ್ಯಾಂಕ್​ನಲ್ಲಿ ಉದ್ಯೋಗಿಗಳೆಂದು ಲಕ್ಷ ಲಕ್ಷ ರೂ. ವೈಯಕ್ತಿ ಸಾಲ ನೀಡಿದ್ದಾರೆ. ಇದೇ ಸಾಲದ ಹಣವು ಬ್ಯಾಂಕ್ ನ ಆಡಳಿತ ಮಂಡಳಿಯ ಹಲವರಿಗೆ ಸೇರಿದೆ ಅಂತೆ.

ಇನ್ನೂ ಆರನೇ ವೇತನ ಆಯೋಗದ ವೇತನ ಪರಿಷ್ಕರಣೆ ಆಗಿತ್ತು. 7.14 ಕೋಟಿ ರೂ. ಹಣ 23-10-2020 ರಂದು ನೌಕರರ ಉಳಿತಾಯ ಖಾತೆಗೆ ಜಮಾ ಮಾಡಿದ್ದರು. ಜಮಾ ಮಾಡಿದ ದಿನವೇ ನೌಕರರ ಉಳಿತಾಯ ಖಾತೆಯಿಂದ ಹಣ ವಾಪಸ್ ಪಡೆದಿದ್ದಾರೆ. ನೌಕರರ ಬಂದಿರುವ ಹಣದಲ್ಲಿ ಒಂದು ಪಾಲು ಅಂದಿನ ಅಧ್ಯಕ್ಷ ಮತ್ತು ಕೆಲ ಆಡಳಿತ ಮಂಡಳಿ ಕೆಲ ನಿರ್ದೇಶಕರಿಗೆ ಹಂಚಲಾಗಿದೆ ಅಂತೆ. ಇದೇ ರೀತಿ 1-7-21 ರಿಂದ 30-3-22 ವರೆಗಿನ ತುಟ್ಟಿ ಭತ್ಯೆ ಬಾಕಿ ಮೊತ್ತ 1.06 ಲಕ್ಷ ರೂ. ಹಣ 4-4-22 ರಂದು ಮತ್ತೆ ಎಲ್ಲ ನೌಕರರ ಖಾತೆಗೆ ಜಮಾ ಮಾಡಿದ್ದಾರೆ. ಜಮಾ ಮಾಡಿದ ದಿನವೇ ನೌಕರರ ಉಳಿತಾಯ ಖಾತೆಯಿಂದ ಹಣ ಡ್ರಾ ಆಗಿದೆ. ಹೀಗೆ ತುಟ್ಟಿ ಭತ್ಯೆ ಬಂದಿರುವ ಹಣದ ಒಂದು ಪಾಲನ್ನು ಅಂದಿನ ಅಧ್ಯಕ್ಷರು ಮತ್ತು ಕೆಲ ನಿರ್ದೇಶಕರು ನುಂಗಿ ಹಾಕಿದ್ದಾರಂತೆ.

Tags: Congress PartyDCC BankShimogaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್ ಗಾಂಧಿ ಅವರ ಮೈಕ್ ಸ್ವಿಚ್ ಆಫ್ ಆದ ನಂತರ ಸದನದಲ್ಲಿ ಗದ್ದಲ..!

Next Post

ಡಿಕೆ ಸುರೇಶ್​ ಸೋಲಿಸಿದ್ದು ಸಿದ್ದರಾಮಯ್ಯ…!!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post

ಡಿಕೆ ಸುರೇಶ್​ ಸೋಲಿಸಿದ್ದು ಸಿದ್ದರಾಮಯ್ಯ...!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada