• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

DCM, ಪಕ್ಷದ ಅಧ್ಯಕ್ಷ ಹುದ್ದೆಯಿಂದ ಸಚಿನ್ ಪೈಲಟ್ ರನ್ನು ವಜಾಗೊಳಿಸಿದ ಕಾಂಗ್ರೆಸ್

by
July 14, 2020
in ದೇಶ
0
DCM
Share on WhatsAppShare on FacebookShare on Telegram

ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ ಏರ್ಪಟ್ಟಿರುವ ಬಿಕ್ಕಟ್ಟು ದಿನಕ್ಕೊಂದು ನಾಟಕೀಯ ತಿರುವು ಪಡೆಯುತ್ತಿದೆ. ಇನ್ನೇನು ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕುಸಿದು ಬೀಳಲಿದೆ ಎನ್ನುವಾಗಲೇ ಸಚಿನ್‌ ಪೈಲಟ್‌ ಪಾಳಯದಲ್ಲಿದ್ದ 17 ಕಾಂಗ್ರೆಸ್‌ ಶಾಸಕರು ಸರ್ಕಾರದೊಂದಿಗೆ ಒಮ್ಮತ ತೋರಿಸಿದ್ದಾರೆ. ಇದರಿಂದ ವಿಚಲಿತರಾಗಿದ್ದ ಸಚಿನ್‌ ಕೆಲಕಾಲ ಮಾಧ್ಯಮಗಳಿಂದ ತಲೆತಪ್ಪಿಸಿಕೊಂಡಿದ್ದರು.

ADVERTISEMENT

ರಾಜಕೀಯ ತಜ್ಞರು ಸಚಿನ್‌ ಪೈಲಟ್‌ರ ಹೊಸ ವರಸೆಯನ್ನು ಎದುರು ನೋಡುತ್ತಿರುವಂತೆಯೇ, ರಾಜಸ್ಥಾನ ರಾಜ್ಯ ಕಾಂಗ್ರೆಸ್‌ ತನ್ನ ದಾಳವನ್ನು ಹೂಡಿದೆ. ಸಚಿನ್‌ ಪೈಲಟ್‌ರ ಉಪಮುಖ್ಯ ಮಂತ್ರಿ ಸ್ಥಾನದಿಂದ ವಜಾಗೊಳಿಸಿದ ಪಕ್ಷ, ರಾಜ್ಯದಲ್ಲಿ ಭಾರೀ ವರ್ಚಸ್ಸಿದ್ದ ಕಾಂಗ್ರೆಸ್‌ ಯುವ ನಾಯಕನ ಅಧ್ಯಕ್ಷ ಸ್ಥಾನವನ್ನೂ ಕಿತ್ತುಕೊಂಡಿದೆ.

ಗೆಹ್ಲೋಟ್‌ ನೇತೃತ್ವದ ಸರ್ಕಾರ ಸ್ಥಿರವಾಗಿದೆಯೆಂದು ಸಾಬೀತುಪಡಿಸಿದಾಗಲೇ ಸಚಿನ್‌ರಿಗೆ ಆಘಾತವೆದುರಾಗಿತ್ತು, ತನ್ನ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷಗಿರಿ ಕೈಜಾರುವುದರೊಂದಿಗೆ ಆಘಾತದ ಮೇಲೆ ಆಘಾತ ಎದುರಾಗಿದೆ. ಇದರಿಂದ ಈಗಾಗಲೇ ರಾಜಸ್ಥಾನದಲ್ಲಿ ತೃತೀಯ ರಂಗ ಕಟ್ಟಬೇಕೆಂದು ಆಲೋಚನೆಯಲ್ಲಿರುವ ಸಚಿನ್‌ ತನ್ನ ಆಲೋಚನೆಯೊಂದಿಗೆ ಮುನ್ನುಗ್ಗಲಿದ್ದಾರೆ ಎಂಬ ವಾದಕ್ಕೆ ಇನ್ನಷ್ಟು ಪುಷ್ಟಿ ದೊರೆತಿದೆ.

ಸಚಿನ್‌ ಪೈಲಟ್‌ ಹಾಗೂ ಅವರ ಬಣದ ಇಬ್ಬರು ಮಂತ್ರಿಗಳನ್ನು ಗೆಹ್ಲೋಟ್‌ ಕ್ಯಾಬಿನೆಟ್‌ನಿಂದ ವಜಾಗೊಳಿಸಿರುವುದಾಗಿ ಹೇಳಿರುವ ಕಾಂಗ್ರೆಸ್‌ ಹಿರಿಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲ ಭಾರವಾದ ಹೃದಯದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸುರ್ಜೆವಾಲ, ಸಚಿನ್‌ ಪೈಲಟ್‌ ಹಾಗೂ ಅವರ ಸಂಗಡಿಗರು, ಬಿಜೆಪಿಯೊಂದಿಗೆ ಸೇರಿ ರಾಜಸ್ಥಾನದ ಎಂಟು ಕೋಟಿ ಜನತೆ ಆರಿಸಿರುವ ಸರ್ಕಾರವನ್ನು ತೂಗುಗತ್ತಿಯಲ್ಲಿ ಹಾಕಲು ಹೊರಟಿರುವುದು ವಿಷಾದಣೀಯ. ಕಾಂಗ್ರೆಸ್‌ ರಾಜಸ್ಥಾನ ಪ್ರಾದೇಶಿಕ ಅಧ್ಯಕ್ಷ ಸ್ಥಾನದಿಂದಲೂ ಅವರನ್ನು ವಜಾಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ತನ್ನ ಸಚಿವ ಸಂಪುಟದಿಂದ ಬಂಡಾಯ ನಾಯಕರನ್ನು ಅಧಿಕೃತವಾಗಿ ವಜಾಗೊಳಿಸಲು ರಾಜಭವನಕ್ಕೆ ತೆರಳಿ ರಾಜ್ಯಪಾಲರಲ್ಲಿ ಔಪಚಾರಿಕ ಮನವಿ ಸಲ್ಲಿಸಿದ್ದಾರೆ. ಇಂದು ಸತತ ಎರಡನೇ ದಿನದ ಸಭೆ ಸೇರಿದ ಕಾಂಗ್ರೆಸ್ ಶಾಸಕಾಂಗ ಪಕ್ಷವು ಬಂಡಾಯ ನಾಯಕರ ವಿರುದ್ಧ ಬಲವಾದ ಸಂದೇಶವನ್ನು ಕಳುಹಿಸಲು ಮತ್ತು ಭವಿಷ್ಯದ ಯಾವುದೇ ತೊಂದರೆಗಳನ್ನು ತಡೆಯಲು ಕ್ರಮಕೈಗೊಳ್ಳಬೇಕೆಂದು ಈ ಕಟ್ಟುನಿಟ್ಟಿನ ನಿರ್ಣಯವನ್ನು ಅಂಗೀಕರಿಸಿದೆ.

Tags: ಕಾಂಗ್ರೆಸ್ರಾಜಸ್ಥಾನಸಚಿನ್ ಪೈಲಟ್
Previous Post

ಲಾಕ್‌ಡೌನ್‌ಗೆ ಕ್ಷಣಗಣನೆ… ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ..!

Next Post

ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ, ಸರ್ಕಾರವೇ ಜನರ ಜವಾಬ್ದಾರಿ ವಹಿಸಬೇಕು- ಡಿಕೆಶಿ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
Next Post
ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ

ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ, ಸರ್ಕಾರವೇ ಜನರ ಜವಾಬ್ದಾರಿ ವಹಿಸಬೇಕು- ಡಿಕೆಶಿ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada