• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 19, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

New Delhi: Congress leader Rahul Gandhi with Karnataka Congress President DK Shivakumar during a meeting at his residence, in New Delhi, Wednesday, May 17, 2023. (PTI Photo)(PTI05_17_2023_000131A)

Share on WhatsAppShare on FacebookShare on Telegram

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ADVERTISEMENT

ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ವಿಶೇಷ ಚೇತನರಿಗೆ ಗಾಲಿಕುರ್ಚಿ, ಲ್ಯಾಪ್ ಟಾಪ್ ವಿತರಣೆ

30 ಸಾವಿರ ನೋಟ್ ಬುಕ್ ಗಳಿಂದ ರಾಹುಲ್ ಗಾಂಧಿ ಭಾವಚಿತ್ರ

ಬೆಂಗಳೂರು, ಜೂ.19

“ಸಮಾಜದ ಎಲ್ಲಾ ವರ್ಗದವರಿಗೂ ರಕ್ಷಣೆ ಸಿಗಬೇಕು, ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂಬುದು ರಾಹುಲ್ ಗಾಂಧಿ ಅವರ ಸಂದೇಶ. ಈ ದೇಶದ ರಕ್ಷಣೆಗೆ ಮುಂದಾಗಿರುವ ರಾಹುಲ್ ಗಾಂಧಿ ಅವರಿಗೆ ದೇವರು ಆರೋಗ್ಯ, ಸಂತೋಷ ಸಿಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಕೋರಿದರು.

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನ ಅಂಗವಾಗಿ ಬೆಂಗಳೂರಿನ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಬಿ ವಿ ಶ್ರೀನಿವಾಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ 30 ಸಾವಿರ ನೋಟ್ ಬುಕ್ ಗಳಿಂದ ರಾಹುಲ್ ಗಾಂಧಿ ಅವರ ಭಾವಚಿತ್ರ ಬಿಡಿಸಿರುವುದನ್ನು ವೀಕ್ಷಿಸಿ, ವಿಶೇಷ ಚೇತನ ಕ್ರೀಡಾಪಟುಗಳಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ಸೈಕಲ್, ಗಾಲಿ ಕುರ್ಚಿ, ಲ್ಯಾಪ್ ಟಾಪ್ ವಿತರಣೆ ಮಾಡಿದರು.

“ಇಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನ್ಮದಿನ ಆಚರಣೆ ಮಾಡುತ್ತಿದ್ದೇವೆ. ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ದೇಶಕ್ಕೆ ಅವರ ಬದ್ಧತೆಯನ್ನು ಸ್ಮರಿಸಲು ನಮ್ಮ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ” ಎಂದು ತಿಳಿಸಿದರು.

“ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಜಾತಿ ಗಣತಿ ವಿಚಾರವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಆದರೆ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಅದನ್ನು ಮುಂದೂಡಿದ್ದೇವೆ.” ಎಂದು ಶುಭ ಕೋರುತ್ತೇನೆ ಎಂದು ತಿಳಿಸಿದರು.

ಇಸ್ರೇಲ್ ನಿಂದ ಭಾರತೀಯ ವಿದ್ಯಾರ್ಥಿಗಲು ಮರಳುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಬೇಕು ಎಂಬುದು ನಮ್ಮ ಆದ್ಯತೆ. ಅದರ ಹೊರತಾಗಿ ಅಂತಾರಾಷ್ಟ್ರೀಯ ರಾಜಕೀಯ ವಿಚಾರವಾಗಿ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಇಂದಿನ ಸಚಿವ ಸಂಪುಟದಲ್ಲಿ ಜಾತಿ ಗಣತಿ ವಿಚಾರ ಚರ್ಚೆ ಮಾಡಲಾಗುವುದೇ ಎಂದು ಕೇಳಿದಾಗ, “ನಾವು ಈಗಾಗಲೇ ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದೇವೆ. ಇದರ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದರು.

Nikhil Kumaraswamy: ಕೇತಗಾನಹಳ್ಳಿ‌ ಜಮೀನು ಒತ್ತುವರಿ ಆರೋಪ ಕುಮಾರಸ್ವಾಮಿಗೆ ರಿಲೀಫ್ ನಿಖಿಲ್ ಏನಂದ್ರು?

Tags: DK Shivakumardk shivakumar birthdaydk shivakumar birthday 2020dk shivakumar birthday giftdk shivakumar latest newsdk shivakumar newsdk shivakumar speechdk shivakumar to meet rahul gandhidk shivakumar today newsdk shivakumar vs siddaramaiahdk shivkumardk shivkumar birthdayhappy birthday dk shivkumarRahul Gandhisiddaramaiah in dk shivakumar birthdaysiddaramaiah vs dk shivakumarSonia Gandhi
Previous Post

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

Next Post

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada