
ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ಪಾದಗಳಿಗೆ ನಮಸ್ಕರಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಶೀರ್ವಾದ ಪಡೆದರು.113ನೇ ಜನ್ಮದಿನ ಆಚರಣೆಗೆ ಆಹ್ವಾನಿಸಲು ಸಿಎಂ ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಸಾಲು ಮರದ ತಿಮ್ಮಕ್ಕ ಅವರು ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಸಾಲು ಮರದ ತಿಮ್ಮಕ್ಕ ಅವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು. ನಂತರ ಡಿಕೆ ಶಿವಕುಮಾರ್ ಅವರು ಸಾಲುಮರದ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದರು.ಇಂದು ಡಿಕೆ ಶಿವಕುಮಾರ್ ಅವರು ಕೊಪ್ಪಳದಲ್ಲಿ ನಡೆಯಲಿರುವ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.