ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಳೂರಿನ ಹಾಲು ಸ್ಥಳಗಳಿಗೆ ಸರ್ಪ್ರೈಸ್ ವಿಸಿಟ್ ನೀಡಿದರು, ಹಲವು ಕಡೆ ವಿವಿಧ ಕಾಮಗಾರಿಗಳು, ಪ್ರಗತಿ ಪರಿಶೀಲನೆ ಹಾಗೂ ವಿವಿಧ ಅಭಿವೃದ್ಧಿ ವಿಚಾರಗಳ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿವಿಧ ಸ್ಥಳಗಳಿಗೆ ದಿಢೀರ್ ಭೇಟಿಯನ್ನು ನೀಡಿದ್ದರು ಈ ವೇಳೆ ಉಪಮುಖ್ಯಮಂತ್ರಿಗಳ ಎಸ್ಕಾರ್ಟ್ ವಾಹನ ದಾರಿ ತಪ್ಪಿದೆ
ಹೌದು ರಸ್ತೆಯಲ್ಲಿ ತೆರಳುವ ವೇಳೆ ಬೆಂಗಾಗಲು ವಾಹನ ದಾರಿತಪ್ಪಿ, ಡಿಕೆ ಶಿವಕುಮಾರ್ ಅವರಿದ್ದ ವಾಹನ ಬಿಟ್ಟು ಎಸ್ಕಾರ್ಟ್ ವಾಹನ ಮುಂದೆ ಹೋಗಿದೆ. ಬಳಿಕ ತಿರುವು ತೆಗೆದುಕೊಂಡು ವಾಪಸ್ ಬಂದಿದೆ

ಹೀಗಾಗಿ ಎಸ್ಕಾರ್ಟ್ ವಾಹನ ಬರುವವರೆಗೂ ಮಾರ್ಗ ಮಧ್ಯೆ ಡಿ.ಕೆ ಶಿವಕುಮಾರ್ ವಾಹನ ನಿಲ್ಲಿಸಿದ್ದಾರೆ. ನಂತರ ಎಸ್ಕಾರ್ಟ್ ವಾಹನ ವಾಪಸ್ ಬಂದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ವಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟನಿಗೆ ತೆರಳಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ಸಾರ್ವಜನಿಕರ ಜೊತೆ ಕೂತು ಉಪಹಾರ ಸೇವಿಸಿದ್ದಾರೆ ಡಿಕೆ ಶಿವಕುಮಾರ್ ಅವರು ಮೊದಲು ಬೆಳಗ್ಗೆ ಬೆಂಗಳೂರಿನ ಚೌಕಸಂದ್ರ ಇಂದ್ರ ಕ್ಯಾಂಟೀನ್ ಗೆ ಹೋಗಿದ್ದರು ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು ಸಾರ್ವಜನಿಕರ ಜೊತೆ ಕೂತು ಕೇಸರಿಬಾತ್ ಉಪ್ಪಿಟ್ಟು ಸೇವನೆ ಮಾಡಿದ್ದಾರೆ.

ಇನ್ನು ಇವತ್ತು ಡಿಕೆ ಶಿವಕುಮಾರ್ ಅವರ ಎಸ್ಕಾರ್ಟ್ ವಾಹನ ದಾರಿತಪ್ಪಿದ್ದರ ಹಿನ್ನೆಲೆಯಲ್ಲಿ ಮತ್ತೊಮ್ಮೆ ಭದ್ರತಾ ಲೋಪವನ್ನ ಬಲವಾಗಿ ರಾಜ್ಯ ಸರ್ಕಾರ ಎದುರಿಸುತ್ತಿದೆ ಎಂಬ ಅನುಮಾನಗಳು ಕೂಡ ಸಾರ್ವಜನಿಕ ವಲಯದಲ್ಲಿ ಮೂಡಲು ಪ್ರಾರಂಭವಾಗಿದೆ