• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DCM DK Shivakumar | ರಾತ್ರೋರಾತ್ರಿ ಫೀಲ್ಡ್​ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್​ ಬುಕ್​..!

ಕೃಷ್ಣ ಮಣಿ by ಕೃಷ್ಣ ಮಣಿ
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
DCM DK Shivakumar | ರಾತ್ರೋರಾತ್ರಿ ಫೀಲ್ಡ್​ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್​ ಬುಕ್​..!
Share on WhatsAppShare on FacebookShare on Telegram

ಬೆಂಗಳೂರು ನಗರದಲ್ಲಿ ನಿನ್ನೆ ಸುರಿದ ಮಹಾಮಳೆಗೆ 22 ವರ್ಷದ ಯುವತಿ ಭಾನುರೇಖಾ ಬಲಿಯಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ರೀತಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಸುರಿದ ಮಳೆಯ ಪ್ರಮಾಣ ಅತ್ಯಧಿಕವಾಗಿದೆ. ಬೆಂಗಳೂರು ನಗರದಲ್ಲಿ 30 ಮಿ.ಮೀ ಗಿಂತ ಹೆಚ್ಚಿನ ಮಳೆ ಸುರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 8.6 ಮಿ.ಮೀ. HAL ಏರ್ಪೋರ್ಟ್​ನಲ್ಲಿ 25.1 ಮಿ.ಮೀ ಮಳೆಯಾಗಿದೆ ಎಂದು ತಿಳಿಸಲಾಗಿದೆ. ಮುಂಗಾರು ಮಳೆಗೂ ಮುನ್ನವೇ ಸುರಿಯುತ್ತಿರುವ ಮಳೆಯಿಂದ ಆಗಿರುವ ಅವಾಂತರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವಿರುದ್ದ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದಿದ್ದಾರೆ. ಪ್ರತೀ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ. ಯಾಕೆ..? ಮಳೆ ಬಂದರೆ ಜನರು ಸಾಯಲೇಬೇಕೆ..? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಪ್ರತಿಧ್ವನಿ ವರದಿಯ ಅಂಶಗಳನ್ನೇ ಹೇಳಿದ ಡಿಸಿಎಂ..!

ಮಳೆಯಿಂದ ಸಾವು ಸಂಭವಿಸಿದ ಬಳಿಕ ಪರಿಹಾರ ನೀಡುವುದರಿಂದ ಯಾವುದೇ ಲಾಭವಿಲ್ಲ. ಸಮಸ್ಯೆಗಳು ಆಗುವುದನ್ನೇ ತಪ್ಪಿಸುವುದು ಸೂಕ್ತ ಎಂದು ಪ್ರತಿಧ್ವನಿ ನಿನ್ನೆ ವರದಿ ಮಾಡಿತ್ತು. ಮಂಡ್ಯದ ಆದಿಚುಂಚನಗಿರಿಯಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಕೃತಿ ಯಾರ ಕೈಯಲ್ಲಿ ಇಲ್ಲ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಏನೇನು ಸಮಸ್ಯೆ ಇದೆ ತೊಂದರೆ ಇದೆ ಅದನ್ನು ಸರಿ ಮಾಡಬೇಕು. ಸರಿ ಮಾಡುವ ಕಾಲ ಬಂದಿದೆ, ನಾವು ಸರಿ ಮಾಡುತ್ತೇವೆ. ಯುವತಿ ಕುಟುಂಬಕ್ಕೆ ಪರಿಹಾರ ಕೊಡುವುದು ಒಂದೇ ಅಲ್ಲ. ಐದು, ಹತ್ತು ಲಕ್ಷ ಕೊಡುವುದು ದೊಡ್ಡದು ಅಲ್ಲ. ಮುಂದೆ ಹೀಗೆ ಆಗದ ರೀತಿ ಮುಂಜಾಗ್ರತೆಯಿಂದ ಕೆಲಸ ಮಾಡಬೇಕು. ನಾವು ಮುಂಜಾಗ್ರತಾ ಕೆಲಸಗಳನ್ನು ನಾವು ಮಾಡುತ್ತೇವೆ ಎಂದಿದ್ದರು. ಬೆಂಗಳೂರಿಗೆ ಬರುತ್ತಿದ್ದ ಹಾಗೆ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಘಟನಾ ಸ್ಥಳ ಕೆ.ಆರ್​ ಸರ್ಕಲ್​ನಾ ಅಂಡರ್​ ಪಾಸ್​ಗೆ ಭೇಟಿ ನೀಡಿದ್ದರು.

ಅಂಡರ್​ಪಾಸ್​ಗೆ ಇನ್ಮುಂದೆ ಸಿಸಿಟಿವಿ, ಕಟ್ಟೆಚ್ಚರದ ಭರವಸೆ..

ಸಚಿವ ರಾಲಿಂಗಾರೆಡ್ಡಿ ಜೊತೆಗೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಡಿಸಿಎಂ ಸಿ.ಕೆ ಶಿವಕುಮಾರ್​, ಅಂಡರ್​ ಒಳಕ್ಕೆ ನೀರು ಬಾರದಂತೆ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಅಂಡರ್​ ಪಾಸ್​ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಸೂಚನೆ ನೀಡಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ ಶಿವಕುಮಾರ್​, ಪರಿಹಾರ ಕೊಡುವುದು ಮುಖ್ಯವಲ್ಲ ಹೆಚ್ಚು ಪ್ರಾಣಾಪಾಯ ತಪ್ಪಿದೆ. ಅಂಡರ್​ಪಾಸ್​ ಸಮಸ್ಯೆಗಳ ಬಗ್ಗೆ ಒಂದು ಆ್ಯಕ್ಷನ್​ ಪ್ಯಾನ್​ ಮಾಡಲು ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗದಂತೆ ಕಟ್ಟೆಚ್ಚರ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮೃತ ಯುವತಿ ಭಾನುರೇಖಾ ಸಂಬಂಧಿಗಳು ಬಿಬಿಎಂಪಿ ವಿರುದ್ಧ ಹಲಸೂರು ಗೇಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಅಂಡರ್​ಪಾಸ್​ನಲ್ಲಿ ನೀರು ತುಂಬಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್​​ 304 ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅನಾಹುತದ ಬಳಿಕ ಅಲರ್ಟ್​ ಆದ ಬಿಬಿಎಂಪಿ, ಸರ್ಕಾರ..!

ಮುಂಗಾರು ಪೂರ್ವ ಮಳೆಯಿಂದ ಯುವತಿ ಬೆಂಗಳೂರಿನ ಕೇಂದ್ರ ಭಾಗದಲ್ಲೇ ಸಾವನ್ನಪ್ಪಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. 41 ಫಾರೆಸ್ಟ್ ಗ್ಯಾಂಗ್ ತಂಡವನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಮರ ಬೀಳುವುದು, ನೀರು ತುಂಬಿಕೊಳ್ಳುವುದು ಸೇರಿದಂತೆ ಮಳೆ ಹಾನಿ ನಿಟ್ಟಿನಲ್ಲಿ ಕೆಲಸ ಮಾಡಲು ತಂಡ ನಿಯೋಜನೆ ಮಾಡಲಾಗಿದೆ. ನಿನ್ನೆ ಒಂದೇ ಒಂದು ಗಂಟೆಗಳ ಅವಧಿಯಲ್ಲಿ ಸುರಿದ ಮಹಾಮಳೆಗೆ 65 ಮರಗಳು ಧರೆಗುರುಳಿವೆ. ಇನ್ನು ಮರ ಬುಡಸಮೇತ ಕಿತ್ತು ಬೀಳುವುದು, ಮರಗಳ ಎಲೆ ಉದುರಿ ಡ್ರೈನೇಜ್ ಬ್ಲಾಕ್ ಆಗಲಿದೆ. ಬೆಂಗಳೂರು ಜನರು ಎಚ್ಚರಿಕೆಯಲ್ಲಿ ಇರುವಂತೆ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್​ ಗಿರಿನಾಥ್​ ಮನವಿ ಮಾಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ವರದಿ ನೀಡಿದ್ದು, ಬೆಂಗಳೂರಿನಲ್ಲಿ 206 ಸೂಕ್ಷ್ಮ ಪ್ರದೇಶ, ಈ ಪ್ರದೇಶದಲ್ಲಿ ಮಳೆ ಬಂದಾಗ ಹೆಚ್ಚು ಹಾನಿಯಾಗುವ ಸಂಭವ ಹೆಚ್ಚು ಎಂದು ವರದಿಯಲ್ಲಿಯಲ್ಲಿ ತಿಳಿಸಲಾಗಿದೆ. ಆದರೂ ನಿರೀಕ್ಷೆಗೆ ಮೀರಿದ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಸರ್ಕಾರಿ ಅಧಿಕಾರಿಗಳೇ ತಿಳಿಸಿದ್ದಾರೆ.

ಕೃಷ್ಣಮಣಿ

Tags: BengaloreBJPBreaking NewsCongress PartydcmDCM DK ShivakumarDK ShivakumarhevyrainRainಸಿದ್ದರಾಮಯ್ಯ
Previous Post

‘ದಿ ಕೇರಳ ಸ್ಟೋರಿ’ ವೈರಲ್​ ಆಗಿರುವುದರ ಹಿಂದಿನ ಮರ್ಮ ಏನು..?

Next Post

Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Karnataka Assembly Session: ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada