• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

Any Mind by Any Mind
May 11, 2021
in ಕರ್ನಾಟಕ
0
ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?
Share on WhatsAppShare on FacebookShare on Telegram

ನರೇಂದ್ರ ಮೋದಿಯವರೇ, ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ. ಎಲ್ಲಿದ್ದೀರಿ? ಎಂದು ಒಕ್ಕೂಟ ವ್ಯವಸ್ಥೆಯ ಪ್ರಧಾನಿ ಮೋದಿಯವರನ್ನು ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಪ್ರಶ್ನಿಸಿದ್ದಾರೆ.

ADVERTISEMENT

ಈ ಮಹಾವಿಪತ್ತಿನ ಸಂದರ್ಭದಲ್ಲಿ ನೀವಷ್ಟೆ ಅಲ್ಲ, ಇಡೀ ಕೇಂದ್ರ/ಒಕ್ಕೂಟ ಸರ್ಕಾರವೆ ನಾಪತ್ತೆಯಾಗಿದೆ ಎಂದು ಜನ ಭಾವಿಸಿದ್ದಾರೆ. ಹಾಗಾಗಿಯೇ ಸರ್ವೋಚ್ಚ ನ್ಯಾಯಾಲಯ ಇಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಿ ಸೋಂಕನ್ನು ಮತ್ತು ಆರೋಗ್ಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ಇಲ್ಲವಾದಲ್ಲಿ ದೇಶದ ಜನರಿಗೆ ಅಂದಂದಿನ ಮಾಹಿತಿ ನೀಡಿ ವಿಶ್ವಾಸ ತುಂಬಬೇಕಾದ ಕೇಂದ್ರದ ಆರೋಗ್ಯ ಸಚಿವರು ಮತ್ತು ನೀವು ಎಲ್ಲಿದ್ದೀರಿ? ಏನು ಮಾಡುತ್ತಿದ್ದೀರಿ? ಎಂದು ಅವರು ಕೇಳಿದ್ದಾರೆ.

ಅಮೆರಿಕದಲ್ಲಿ ಕೋವಿಡ್-19 ಸೋಂಕು ತಾರಕಕ್ಕೆ ಹೋಗುತ್ತಿದ್ದಾಗ ಅಲ್ಲಿಯ ರಾಷ್ಟ್ರಾಧ್ಯಕ್ಷ ಆಗಿದ್ದ ನಿಮ್ಮ ಆಪ್ತ ಸ್ನೇಹಿತ ಡೊನಾಲ್ಡ್ ಟ್ರಂಪ್ ಸಹ ಮಾಧ್ಯಮದ ಮುಂದೆ ಬಂದು ಒಂದಷ್ಟು ದಿನಗಳ ಕಾಲ ಪ್ರತಿದಿನ ಮಾಹಿತಿ ನೀಡುತ್ತಿದ್ದರು. ಇನ್ನು ನೀವೋ, ನೀವೇ ಹೇಳಿಕೊಂಡಂತೆ 56 ಇಂಚಿನ ಎದೆಯವರು! ಈ ಸಂದರ್ಭದಲ್ಲಿ ದೇಶಕ್ಕೆ ನಿಮ್ಮ ಪ್ರಾಮಾಣಿಕ ಮಾತು ಮತ್ತು ಪರಿಣಾಮಕಾರಿ ಕೆಲಸದ ಅಗತ್ಯ ಇದೆ. ಈಗ ಚುನಾವಣೆಗಳು ಇಲ್ಲದ ಮಾತ್ರಕ್ಕೆ ನೀವು ಮಾತನಾಡಬಾರದು ಎಂದಿಲ್ಲ. ದಯವಿಟ್ಟು ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಿಗೆ ಭೇಟಿ ಕೊಡಿ. ಇಲ್ಲಿಯ ಪರಿಸ್ಥಿತಿ ಮತ್ತು ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿ. ನೀವು ಬರುತ್ತೀರಿ ಎನ್ನುವ ಕಾರಣಕ್ಕಾದರೂ ದುರಾಡಳಿತ ಮತ್ತು ನಿರಾಡಳಿತದ ಮಧ್ಯೆ ಹೊಯ್ದಾಡುತ್ತಿರುವ ನಮ್ಮ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ನೀವು ಸಂಸದರಾಗಿರುವ ಉತ್ತರಪ್ರದೇಶದ ವಾರಣಾಸಿಗೂ ಭೇಟಿ ಕೊಡಿ. ಅಲ್ಲಿ ಸೋಂಕಿಗೆ ಬಲಿಯಾದವರ ಹೆಣಗಳನ್ನು ಗಂಗಾ ನದಿಗೆ ಎಸೆಯಲಾಗುತ್ತಿದೆಯಂತೆ. ಅವು ಬಿಹಾರಕ್ಕೆ ಹೋಗಿ ತೇಲುತ್ತಿವೆ. ಉತ್ತರಪ್ರದೇಶ ಮತ್ತು ಬಿಹಾರದ ರಾಜ್ಯಗಳಲ್ಲಿ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹರಡಿದೆಯಂತೆ. ಮೊದಲೇ ಅವು ಅತಿಹಿಂದುಳಿದ ರಾಜ್ಯಗಳು. ಹಾಗೆಯೇ ನಮ್ಮ ದೇಶದ ಕಾಲುಭಾಗ ಜನಸಂಖ್ಯೆ ಅವೆರಡೇ ರಾಜ್ಯಗಳಲ್ಲಿ ಇದೆ. ನೀವು ಈಗ ಅಲ್ಲಿಗೆ ಖುದ್ದು ಭೇಟಿ ನೀಡದೆ ಇದ್ದರೆ ಊಹಿಸಲಾಗದಷ್ಟು ದುರಂತಗಳನ್ನು ದೇಶ ಕಾಣಲಿದೆ ಎಂದು ರೆಡ್ಡಿ ಅವರು ಎಚ್ಚರಿಸಿದ್ದಾರೆ.

ನೀವು ದಯವಿಟ್ಟು ಮಾತನಾಡಿ. ಸತ್ಯವಾದ ವಿಚಾರಗಳನ್ನು ಹಂಚಿಕೊಳ್ಳಿ. ವಿಜ್ಞಾನವನ್ನು ನಂಬಿ. ತಜ್ಞರ ಮಾತನ್ನು ಕೇಳಿ. ವೈಚಾರಿಕವಾಗಿ ಆಲೋಚಿಸಿ. ಇತರೆ ಪಕ್ಷಗಳ ಉತ್ತಮ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಅಹಂ ಮತ್ತು ಏಕ ವ್ಯಕ್ತಿ ಪ್ರದರ್ಶನವನ್ನು ಬದಿಗಿಟ್ಟು ದೇಶಕ್ಕೆ ನಾಯಕತ್ವ ಕೊಡಲು ಪ್ರಯತ್ನಿಸಿ. ದೇಶವನ್ನು ಈ ಮಹಾವಿಪತ್ತಿನಿಂದ ಪಾರು ಮಾಡಲು ಕೇಂದ್ರ ಸರ್ಕಾರದ ಎಲ್ಲಾ ಸಂಪನ್ಮೂಲಗಳನ್ನು ಈ ಹೋರಾಟದಲ್ಲಿ ತೊಡಗಿಸಿ ಎಂದು ರವಿ ಕೃಷ್ಣಾ ರೆಡ್ಡಿ ಸಲಹೆ ನೀಡಿದ್ದಾರೆ.

Previous Post

ಚುನಾವಣೆ ಸೋತ ಕಾರಣಕ್ಕೆ ಕರೋನಾ ಬಗ್ಗೆ ತಲೆಕೆಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್!

Next Post

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada