ಹೃದಯಾಘಾತದಿಂದ ಆಗಸ್ಟ್ 6ರಂದು ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾಗ ಮೃತಪಟ್ಟಿರುವ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಪಾರ್ಥಿವ ಶರೀರವು ಮಂಗಳವಾರ (ಆಗಸ್ಟ್ 8) ಮಧ್ಯರಾತ್ರಿ ನಗರಕ್ಕೆ ಆಗಮಿಸಲಿದ್ದು ಬುಧವಾರ (ಆಗಸ್ಟ್ 9) ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಲಿದೆ ಎಂದು ಸ್ಪಂದನಾ ಅವರ ಕುಟುಂಬ ಹೇಳಿದೆ.
ಸ್ಪಂದನಾ ಅವರು ಪ್ರವಾಸದಲ್ಲಿ ಹಠಾತ್ತಾಗಿ ನಿಧರಾಗಿದ್ದಾರೆ. ಆ ರಾಷ್ಟ್ರದ ಔಪಚಾರಿಕತೆಗಳನ್ನು ಪೂರೈಸಿದ ನಂತರ ಸ್ಪಂದನಾ ಅವರ ಮೃತದೇಹ ರಾತ್ರಿ ಹನ್ನೆರಡು ಗಂಟೆಗೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ ಎಂದು ಎಸ್.ಎ.ಚಿನ್ನೇಗೌಡ ಹಾಗೂ ಬಿ.ಕೆ.ಶಿವರಾಂ ಅವರ ಕುಟುಂಬ ಬಿಡುಗಡೆಗಡೆ ಮಾಡಿರುವ ಜಂಟಿ ಹೇಳಿಕೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ನನ್ನ ಬಳಿಯೂ ಪೆನ್ ಡ್ರೈವ್ ಇದೆ : ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್
ಸ್ಪಂದನಾ ವಿಜಯ್ ರಾಘವೇಂದ್ರ ಅವರ ಮೃತದೇಹ ಬೆಂಗಳೂರಿಗೆ ತಲುಪಿದ ನಂತರ ಅವರ ತಂದೆ ಬಿ.ಕೆ.ಶಿವರಾಂ ಅವರ ಮಲ್ಲೇಶ್ವರಂ 15ನೇ ರಸ್ತೆಯಲ್ಲಿರುವ ನಿವಾಸದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.
ನಂತರ ಶ್ರೀರಾಮ್ಪುರದ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಸಕಲ ವಿಧಿವಿಧಾನದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನೇರವೇರಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.