• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರ್ಜಿಕಲ್ ಸ್ಟ್ರೈಕ್‌ ಚರ್ಚೆ ಮತ್ತೆ ಮುನ್ನಲೆಗೆ : ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತ ಕೆಸಿಆರ್‌

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
February 14, 2022
in ದೇಶ, ರಾಜಕೀಯ
0
ಸರ್ಜಿಕಲ್ ಸ್ಟ್ರೈಕ್‌ ಚರ್ಚೆ ಮತ್ತೆ ಮುನ್ನಲೆಗೆ : ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತ ಕೆಸಿಆರ್‌
Share on WhatsAppShare on FacebookShare on Telegram

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದನಾ ಅಡಗು ತಾಣಗಳ ಮೇಲೆ ಭಾರತ ನಡೆಸಿದ 2016 ರ ಸರ್ಜಿಕಲ್ ಸ್ಟ್ರೈಕ್‌ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮೇಲೆ ಕೆಸಿಆರ್ ‌ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

ADVERTISEMENT

ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಸಿಆರ್, “ಕೇಂದ್ರ ಸರ್ಕಾರವು ಸರ್ಜಿಕಲ್ ಸ್ಟ್ರೈಕ್‌ ಗಳ ಪುರಾವೆಗಳನ್ನು ಒದಗಿಸಬೇಕೆಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೇಡಿಕೆಯನ್ನು ಬೆಂಬಲಿಸಿ ಮಾತನಾಡಿದ್ದಾರೆ.

“ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಈಗಲೂ ನಾನು ಕೇಳುತ್ತಿದ್ದೇನೆ. ಭಾರತ ಸರ್ಕಾರ ಸಾಕ್ಷಿಗಳನ್ನು ತೋರಿಸಲಿ. ಅದು ಅವರ ಜವಾಬ್ದಾರಿ ಕೂಡ ಹೌದು. ಜನರಲ್ಲಿ ಈ ಬಗ್ಗೆ ಅನುಮಾನಗಳಿವೆ ಎಂದು ಕೆಸಿಆರ್‌ ಹೇಳಿದ್ದಾರೆ.

ಮುಂದುವರೆದು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಪಪ್ರಚಾರ ಮಾಡುತ್ತಿದೆ. ಜನರು ಪುರಾವೆ ಕೇಳಲು ಅವರ ಅಪಪ್ರಚಾರವೇ ಕಾರಣ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ರಾವ್, ಪ್ರಜಾಪ್ರಭುತ್ವದಲ್ಲಿ ನೀವು ರಾಜನಲ್ಲ, ರಾಜನಲ್ಲ ಎಂದು ಕಿಡಿಕಾರಿದ್ದಾರೆ.

ಸೋಮವಾರ ಈ ವಿಚಾರವಾಗಿ ಸುದ್ದಿ ಸಂಸ್ಥೆ ANI ಪ್ರತಿಕ್ರಿಯಿಸಿರುವ ಶರ್ಮಾ, “ಪುಲ್ವಾಮಾ ದಾಳಿಯ (ಫೆಬ್ರವರಿ 14, 2019) ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕ ಯೋಧರು ಸಾವನ್ನಪ್ಪಿದ ವಾರ್ಷಿಕೋತ್ಸವದಂದು ಪ್ರತಿಪಕ್ಷಗಳು ಇಂಥ ಪ್ರಶ್ನೆಗಳನ್ನು ಎತ್ತುವ ಮೂಲಕ ಹುತಾತ್ಮರನ್ನು ಅವಮಾನಿಸುತ್ತಿವೆ,” ಎಂದು ಟೀಕಿಸಿದ್ದಾರೆ.

“ಗಾಂಧಿ ಕುಟುಂಬಕ್ಕೆ ತಮ್ಮ ನಿಷ್ಠೆಯನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ, ಅವರು (ವಿರೋಧ) ಸೇನೆಗೆ ದ್ರೋಹ ಮಾಡಿದ್ದಾರೆ. ನನ್ನ ನಿಷ್ಠೆ ಸೇನೆಯ ಮೇಲಿದೆ. ನಿಮ್ಮ ಜೀವನದುದ್ದಕ್ಕೂ ನನ್ನನ್ನು ನಿಂದಿಸಿ. ನಾನು ಹೆದರುವುದಿಲ್ಲ. ಸೇನೆಯನ್ನು ಪ್ರಶ್ನಿಸುವುದನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಅಸ್ಸಾಂ ಸಿಎಂ ಶರ್ಮಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಉತ್ತರಾಖಂಡದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ತಂದೆ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ನಡುವಿನ ಸಂಬಂಧದ ಬಗ್ಗೆ ಶರ್ಮಾ ಮಾತನಾಡಿದ ನಂತರ ಈ ಮಾತಿನ ಚಕಮಕಿ ಪ್ರಾರಂಭವಾಯಿತು.

“ಅವರು (ರಾಹುಲ್ ಗಾಂಧಿ) ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನಮ್ಮ ಸೇನೆಯಿಂದ ಪುರಾವೆ ಕೇಳುತ್ತಾರೆ. ನೀವು ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ನಾವು ಎಂದಾದರೂ ನಿಮ್ಮ ಬಳಿ ಪುರಾವೆ ಕೇಳಿದ್ದೇವೆಯೇ? ನನ್ನ ಸೇನೆಯಿಂದ ಪುರಾವೆ ಕೇಳಲು ನಿಮಗೆ ಯಾವ ಹಕ್ಕಿದೆ?” ಎಂದು ಶರ್ಮಾ ಫೆಬ್ರವರಿ 11 ರಂದು ಪ್ರಶ್ನಿಸಿದ್ದರು.

“ನನಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಯಾವುದೇ ಸಂಬಂಧವಿಲ್ಲ, ಅವರ ಪಕ್ಷವೂ ಅಲ್ಲ. ಅವರು ಸಂಸದರು, ಕುಟುಂಬದ ಇತಿಹಾಸವನ್ನು ಹೊಂದಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು” ಎಂದು ರಾವ್ ಭಾನುವಾರ ಹೇಳಿದ್ದರು.

ಶನಿವಾರ ಕೂಡ ಕೆಸಿಆರ್‌ ಅವರು ಶರ್ಮಾ ವಿರುದ್ಧ ಹರಿಹಾಯ್ದು, ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಸ್ಥಾನದಿಂದ ಶರ್ಮಾ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಒತ್ತಾಯಿಸಿದ್ದರು.

“ಅಸ್ಸಾಂ ಮುಖ್ಯಮಂತ್ರಿ ಈ ರೀತಿ ಮಾತನಾಡುವುದು ಹೇಗೆ? ತಾಳ್ಮೆಗೆ ಮಿತಿ ಇದೆ,” ಎಂದು ಕೆಸಿಆರ್ ತಿಳಿಸಿದ್ದಾರೆ. ಇವರ ಹೊರತಾಗಿ ಇತರ ವಿರೋಧ ಪಕ್ಷದ ನಾಯಕರು ಕೂಡ ಶರ್ಮಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶರ್ಮಾ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಕೂಡ ಒತ್ತಾಯಿಸಿದೆ.

Tags: ‌ ರಾಹುಲ್‌ ಗಾಂಧಿBJPCongress PartyCovid 19himanta biswa sarmaNarendra Modiಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಕರೋನಾಕೆ ಚಂದ್ರಶೇಖರ ರಾವ್ಕೆಸಿಆರ್‌ಕೋವಿಡ್-19ನರೇಂದ್ರ ಮೋದಿಬಿಜೆಪಿರಾಹುಲ್‌ ಗಾಂಧಿಸರ್ಜಿಕಲ್ ಸ್ಟ್ರೈಕ್‌
Previous Post

ಹಿಜಾಬ್ ನೆರಳಿನಲ್ಲಿ ಅಡಗಿರುವ ಅಸಲಿ ಸತ್ಯಗಳೇ ಬೇರೆ! ಅಷ್ಟಕ್ಕೂ ಸಂಘ ಪರಿವಾರ ಸಾಧಿಸಲು ಹೊರಟಿದ್ದೇನು?

Next Post

ಹಿಜಾಬ್ ಧರಿಸಿರುವ ಹುಡುಗಿ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ : ಅಸಾದುದ್ದೀನ್ ಓವೈಸಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಹಿಜಾಬ್ ಧರಿಸಿರುವ ಹುಡುಗಿ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ : ಅಸಾದುದ್ದೀನ್ ಓವೈಸಿ

ಹಿಜಾಬ್ ಧರಿಸಿರುವ ಹುಡುಗಿ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ : ಅಸಾದುದ್ದೀನ್ ಓವೈಸಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada