• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸದನದಲ್ಲಿ ಬೆತ್ತಲಾದ “ಡಿಯರ್ ಮೀಡಿಯಾ”.

ಪ್ರತಿಧ್ವನಿ by ಪ್ರತಿಧ್ವನಿ
August 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

✍🏻‌ ರಾಜರಾಂ ತಲ್ಲೂರ್

ADVERTISEMENT

ಧರ್ಮಸ್ಥಳ ಠಾಣಾ ವ್ಯಾಪ್ತಿಯ 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ ಬಳಿಕ, ಈವತ್ತಿನ ತನಕ ನಾಡಿನ ಬಹುತೇಕ ಮಾಧ್ಯಮಗಳು ಮತ್ತು ತಮ್ಮದೇ ಅಜೆಂಡಾಗಳ ಹಿತಾಸಕ್ತಿಗಳಿರುವ ಸೋಷಿಯಲ್ ಮೀಡಿಯಾಗಳವರು ಹರಡಿದ ರಂಗುರಂಗಿನ ಸುಳ್ಳುಸುದ್ದಿಗಳನ್ನೆಲ್ಲ ವಿಧಾನಸಭೆಯಲ್ಲಿ ಇಂದು ಗೃಹಸಚಿವರು ತನ್ನ ಹೇಳಿಕೆಯ ಮೂಲಕ ಗುಡಿಸಿಹಾಕಿದ್ದಾರೆ. ಅವರ ಹೇಳಿಕೆಯಿಂದ ಎಲ್ಲ ನವರಂಗಿ ಡಿಯರ್ ಮೀಡಿಯಾಗಳೂ ಬೆತ್ತಲಾಗಿವೆ.

ಮಾಹಿತಿದಾರನ ವಿಚಾರಣೆಯ ಮೂಲಕ ಗುರುತಿಸಲಾದ ಪ್ರತೀ ಜಾಗದಿಂದ ಎಕ್ಸ್‌ಹ್ಯೂಮ್ ಮಾಡಿದ ಮಣ್ಣು, ಮತ್ತು ಸಿಕ್ಕಿದ ಮೂಳೆ ಇತ್ಯಾದಿ ಮಾದರಿಗಳೆಲ್ಲವೂ FSL ವಿಶ್ಲೇಷಣೆಗೆ ಹೋಗಿದ್ದು, ಅಲ್ಲಿಂದ ವರದಿ ಬಂದ ಬಳಿಕ ತನಿಖೆ ಮುಂದುವರಿದು, ನಿಜವಾಗಿಯೂ ಏನು ನಡೆದಿದೆ ಎಂಬುದು ಬಹಿರಂಗಗೊಳ್ಳಲಿದೆ ಎಂದು ಗೃಹಸಚಿವರು ಸದನದಲ್ಲಿ ಹೇಳಿದ್ದಾರೆ. ಯಾವುದೇ ಪ್ರಕರನದ ವಿಚಾರಣೆ ನಡೆಯುವುದು ಹೀಗೆಯೇ. ಪ್ರಥಮ ಮಾಹಿತಿದಾರ ವ್ಯಕ್ತಿ “V” ಗೆ ವಿಟ್ನೆಸ್ ಪ್ರೊಟೆಕ್ಷನ್ ಕಾಯಿದೆಯಡಿ ಹೇಗೆ ರಕ್ಷಣೆ ನೀಡಬೇಕೆಂದು ಜಿಲ್ಲಾ ನ್ಯಾಯಾಲಯದ ನಿರ್ದಿಷ್ಟ ಸಮಿತಿ ಆದೇಶ ನೀಡಿರುವ ಬಗ್ಗೆ ಕೂಡ ಸಚಿವರು ಸದನದಲ್ಲಿ ಹೇಳಿದ್ದಾರೆ.

ಇದಿಷ್ಟು ಅಧಿಕೃತ ಮಾಹಿತಿಯ ಹೊರತಾಗಿ, ಕಳೆದ ಒಂದು ತಿಂಗಳಿನಲ್ಲಿ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾದಲ್ಲಿ ಬಂದದ್ದೆಲ್ಲ ಅಕ್ಷರಶಃ ಕಳುಕು-ಕೆಸರು ಮತ್ತು “ಮಾಧ್ಯಮ” ಎಂಬ ಹೆಸರಿಗೆ ಕಳಂಕ ತರುವ ಸುದ್ದಿಗಳೇ. SITಯಂತಹ ವೃತ್ತಿಪರ ತನಿಖಾ ಸಂಸ್ಥೆಯೊಂದು ಪ್ರತೀದಿನ ಪತ್ರಕರ್ತರಿಗೆ ತಮ್ಮ ತನಿಖೆಯ ಮಾಹಿತಿಗಳನ್ನು ಬ್ರೀಫ್ ಮಾಡುತ್ತಿದ್ದರು ಎಂಬುದನ್ನು ಬುದ್ಧಿ ಶುದ್ಧ ಇರುವ ಯಾರೂ ನಂಬಲು ಸಾಧ್ಯ ಇಲ್ಲ. ಅಕಸ್ಮಾತ್ ಹಾಗೆ ಆಗಿದ್ದರೆ ಅದೂ ಅಪರಾಧವೇ. ಈ ಪ್ರಕರಣದಲ್ಲಿ “ಹಿತಾಸಕ್ತಿ ಪೀಡಿತ”ವಾದ, ವಿಷಯದ ಪರ ಮತ್ತು ವಿರುದ್ಧ ಇರುವ ಮಾಧ್ಯಮಗಳೆಲ್ಲವನ್ನೂ ಸರ್ಕಾರ (ಅಥವಾ ವಿಷಯ ಸಬ್ ಜುಡೀಸ್ ಆಗಿರುವ ಕಾರಣಕ್ಕೆ ಸಂಬಂಧಿತ ನ್ಯಾಯಾಂಗ ವ್ಯವಸ್ಥೆ) ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮಾಜದ ಶಾಂತಿ-ಸುವ್ಯವಸ್ಥೆಗೆ ಸವಾಲಾಗಬಲ್ಲ ಇಂತಹ “ಸಾರ್ವಜನಿಕ ಗಲೀಜು”ಗಳು ಇನ್ನೆಂದೂ ಮರುಕಳಿಸದಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮದ ಒಬ್ಬ ಮಾಜೀ ಕಸುಬುದಾರನಾಗಿ ನಾನು ಸಂಬಂಧಿತರನ್ನು ಒತ್ತಾಯಿಸುತ್ತೇನೆ. ಈ ಕ್ರಮ ಏಕೆ ಅಗತ್ಯ ಎಂದರೆ, ಈ ರೀತಿಯ ಹಸ್ತಕ್ಷೇಪಗಳು ನೇರವಾಗಿ ತನಿಖೆಯ ಮೇಲೆ ಪ್ರಭಾವ ಬೀರಬಹುದಾದ ಸಂಗತಿಗಳು. ಎಕ್ಸ್‌ಹ್ಯೂಮ್ ಮಾಡಲು ಹೋದಾಗ ಅಲ್ಲಿ ಕ್ಷಣಕ್ಷಣಕ್ಕೆ ಕ್ಯಾಮರಾ ಹಿಡಿದು ಕಾದವರೆಲ್ಲರೂ ನ್ಯಾಯ ವ್ಯವಸ್ಥೆಗೆ ಉಪಕಾರ ಮಾಡಿದ್ದಕ್ಕಿಂತ ತೊಂದರೆ ಮಾಡಿದ್ದೇ ಹೆಚ್ಚು (ಈ ಬಗ್ಗೆ ಈ ಹಿಂದೆಯೂ ಒಂದು ಪೋಸ್ಟ್‌ನಲ್ಲಿ ಹೇಳಿದ್ದೇನೆ). ಇಂತಹ ಅತ್ಯುತ್ಸಾಹಗಳ ಫಲವಾಗಿಯೇ ಅಲ್ಲಿ ಒಂದು ಹಂತದಲ್ಲಿ ಕ್ರಿಮಿನಲ್ ಪ್ರಕರಣಗಳೂ (ಗುಂಪು ಹಲ್ಲೆ) ನಡೆದವು.

ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂಬುದರಲ್ಲಿ ಯಾರಿಗೂ ಅನುಮಾನ ಇರಬಾರದು. ನ್ಯಾಯ ಸಿಗಬೇಕಿದ್ದರೆ, ನ್ಯಾಯ ವ್ಯವಸ್ಥೆಗೆ ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು. ಮಾಧ್ಯಮ ಏನಾದರೂ ಮಾಡುವುದಿದ್ದರೆ ಆ ನಿಟ್ಟಿನಲ್ಲಿ ಕೆಲಸ ಮಾಡಬಹುದಿತ್ತು. ಅಂತಹದೊಂದು ಅಮೂಲ್ಯ ಅವಕಾಶವನ್ನು ಅವು ಕಳೆದುಕೊಂಡವು. ವದಂತಿಗಳು, ಪರ-ವಿರುದ್ಧ ಸೋಷಿಯಲ್ ಮೀಡಿಯಾ ಬರೆಹಗಳು, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಮೌನವಾಗಿದ್ದವರ ಮೇಲೆ ಗೂಬೆ ಕೂರಿಸುವ ಪ್ರಯತ್ನಗಳು… ಎಲ್ಲವೂ ಎಷ್ಟು ಸಡಿಲು ನಾಲಿಗೆಯ ಕೆಲಸಗಳು ಎಂಬುದನ್ನು ಇಂದಿನ ಗೃಹಸಚಿವರ ಹೇಳಿಕೆ ಬಯಲು ಮಾಡಿದೆ. ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾದ ಕೆಸರೆರಚಾಟಗಳು ಇಡಿಯ ಘಟನೆಯ ನೆರೇಟಿವ್‌ಅನ್ನೇ “ಒಂದು ಧಾರ್ಮಿಕ ಸ್ಥಳಕ್ಕೆ ಅಪಚಾರ” ಎಂದು ಬದಲಾಗುವಂತೆ ಮಾಡಿದ್ದೂ ಸುಳ್ಳಲ್ಲ. ಇವೆಲ್ಲಾ ನ್ಯಾಯ ವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಪೂರಕ ಅಲ್ಲ ಮತ್ತು ಇದು ಸಂವಿಧಾನದಲ್ಲಿ ನಂಬಿಕೆ ಇರುವವರು ವ್ಯವಹರಿಸಬೇಕಾದ ರೀತಿಯೂ ಅಲ್ಲ.

ಈ ಪ್ರಕರಣ ಅದರ ತಾರ್ಕಿಕ ಅಂತ್ಯಕ್ಕೆ ತಲುಪಲಿ; ಅದಕ್ಕೆ ಇನ್ನಾದರೂ ಎಲ್ಲ ಸ್ಟೇಕ್ ಹೋಲ್ಡರ್‌ಗಳು ಸಹಕರಿಸಲಿ.

Tags: ​ dharmastala case​ dharmasthala sitdharmastalaDharmasthaladharmasthala 11 sitedharmasthala 2025dharmasthala casedharmasthala case tamildharmasthala chalodharmasthala girlDharmasthala horrordharmasthala issuesdharmasthala livedharmasthala newsdharmasthala news tamildharmasthala secretdharmasthala sitdharmasthala templedharmasthala truthdharmsthalaDK Shivakumarkarnataka dharmasthalaMediaNews ChannelsRajaram Tallurrti on dharmasthalasiddaramaiahsit dharmasthalasit in dharmastalaSocial Media🚨the dharmastala truth
Previous Post

ಚಾಮುಂಡಿ ಬೆಟ್ಟದ ನಂದಿ ದೇವಸ್ಥಾನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ .

Next Post

ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post

ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada