• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಕರೋನಾಗೆ ಬಲಿಯಾದವರೆಷ್ಟು? : ಬಿಬಿಎಂಪಿ ಡೆತ್‌ ಆಡಿಟ್ ವರದಿ ಸಿದ್ಧ!

ಕರ್ಣ by ಕರ್ಣ
November 17, 2021
in ಕರ್ನಾಟಕ
0
ಬೆಂಗಳೂರಿನಲ್ಲಿ ಕರೋನಾಗೆ ಬಲಿಯಾದವರೆಷ್ಟು? : ಬಿಬಿಎಂಪಿ ಡೆತ್‌ ಆಡಿಟ್ ವರದಿ ಸಿದ್ಧ!
Share on WhatsAppShare on FacebookShare on Telegram

ಜನರ ಜೀವ ಹಿಂಡಿ ಹಿಪ್ಪೆ ಮಾಡಿದ ಕೊರೋನಾಗೆ ಎಷ್ಟು ಮಂದಿ ಬಲಿಯಾಗಿದ್ದಾರೆ ಎಂಬ ಲೆಕ್ಕವನ್ನು ಬಿಬಿಎಂಪಿ ಸಿದ್ಧ ಮಾಡಿಕೊಂಡಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಈವರೆಗೆ ಸೇರಿದಂತೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಕೊರೋನಾ ಡೆತ್ ಆಡಿಟ್ ವರದಿಯನ್ನು ಪಾಲಿಕೆ ತಯಾರಿಸಿದೆ. ಅಲ್ಲದೆ ಈ ಸಾವುಗಳಿಗೆಲ್ಲಾ ಏನು ಪ್ರಮುಖ ಕಾರಣ ಎಂಬ ಟಿಪ್ಪಣಿಯನ್ನೂ ಉಲ್ಲೇಖಿಸಿದೆ.

ADVERTISEMENT

ಬಿಬಿಎಂಪಿ ರೆಡಿ ಮಾಡಿದೆ ಕರೋನಾ ಡೆತ್ ಆಡಿಟ್ ವರದಿ.!!

ಕೊರೋನಾ ಎರಡನೇ ಡೋಸ್ ಪಡೆಯಲು ಜನರಿಂದ ಹಿಂದೇಟು ಹಾಕುತ್ತಿದ್ದಾರೆ. ಇದರ ನಡುವೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾವನ್ನಪ್ಪಿದ್ದವರ ಲೆಕ್ಕವನ್ನು ಪಾಲಿಕೆ ಸಿದ್ಧ ಮಾಡಿಕೊಂಡಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ನಿಜಕ್ಕೂ ಹೌಹಾರಿಸುವಂತಿದೆ. ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಕೊರೋನಾ ಕಿತ್ತುಕೊಂಡಿದ್ದು 10 ಸಾವಿರಕ್ಕೂ ಅಧಿಕ ಜೀವಗಳನ್ನು ಎಂದರೆ ನಂಬಲೇ ಬೇಕು. ಅದರಲ್ಲೂ ಬೆಂಗಳೂರಿನಲ್ಲಿ 70 ವರ್ಷಕ್ಕಿಂತ ಮೇಲ್ಪಟ್ಟವರೇ ಹೆಚ್ಚಾಗಿ ಕೊರೋನಾಗೆ ಉಸಿರು ಚೆಲ್ಲಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 16,307 ಮಂದಿಯನ್ನು ಬಲಿ ಪಡೆದ ಕೊರೋನಾ.!!

ಬಿಬಿಎಂಪಿ ನಡೆಸಿರುವ ಕೊರೋನಾ ಡೆತ್ ಆಡಿಟ್ ನಲ್ಲಿ ಮೊದಲ ಮತ್ತು ಎರಡನೇ ಅಲೆಯಲ್ಲಿ ಕೊರೋನಾಗೆ 16,307 ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ. ಈ ಪೈಕಿ 4,480 ಮೊದಲ ಅಲೆಯಲ್ಲಿ ಹಾಗು 11,827 ಮಂದಿ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿ ಕೋವಿಡ್ ಕಬಂಧಬಾಹುವಿಗೆ ಸಿಕ್ಕಿ ಉಸಿರು ಕಳೆದುಕೊಂಡಿದ್ದಾರೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಒಟ್ಟಾರೆ 5,453 ಮಂದಿ 70 ವರ್ಷ ಮೇಲ್ಪಟ್ಟವರು ಸಾವನ್ನಪ್ಪಿದ್ದಾರೆ. ಈ ಪೈಕಿ ಪರುಷರೇ ಹೆಚ್ಚು.

ಜನರ ನಿರ್ಲಕ್ಷ್ಯ.. ತಡವಾಗಿ ಚಿಕಿತ್ಸೆ.. ಕೊರೋನಾ ಕೇಕೆ.!!

ಇನ್ನು ಇಷ್ಟೊಂದು ಮಂದಿಯ ಕೊರೋನಾ ಸಾವಿಗೆ ಪ್ರಮುಖ ಕಾರಣವಾಗಿದ್ದು ಅವರ ನಿರ್ಲಕ್ಷ್ಯ ಮತ್ತು ಸೋಂಕಿನ ಗುಣ ಲಕ್ಷಣಗಳು ಕಾಣಿಸಿಕೊಂಡರೂ ಶೀಘ್ರವೇ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯದೇ ಇದ್ದಿದ್ದು ಎಂದು ಪಾಲಿಕೆ ಡೆತ್ ಆಡಿಟ್ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ ವಾಸ್ತವದಲ್ಲಿ ಎರಡನೇ ಅಲೆಯ ಹೊತ್ತಿಗೆಲ್ಲಾ ಜನರು ಕೊರೋನಾವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಹೀಗಿದ್ರೂ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಸೂಕ್ತ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಸಾಧ್ಯವಾಗದೇ ಇದ್ದಿದ್ದೇ ಇಷ್ಟೊಂದು ಸಾವಿಗೆ ಕಾರಣ ಎನ್ನಬಹುದು. ಆಕ್ಸಿಜನ್, ಬೆಡ್ ಹಾಗೂ ರೆಮಿಡಿಸ್ವಿರ್ ಔಷಧಿ ಸೂಕ್ತ ಸಮಯಕ್ಕೆ ಸಿಗದೆ ಇದ್ದಿದ್ದೇ ಇದಕ್ಕೆ ಸೂಕ್ತ ಉದಾಹರಣೆ. ಜನರ ನಿರ್ಲಕ್ಷ್ಯದ ಜೊತೆಗೆ ಸರ್ಕಾರ ಹಾಗೂ ಪಾಲಿಕೆ ಅಸಮರ್ಥತೆ ಕೂಡ ಈ ಸಾವಿಗೆ ಹೊಣೆಯಾಗಿದೆ.

ಒಟ್ಟಾರೆ ಕೊರೋನಾಗೆ ಈವರೆಗೆ 16,307 ಮಂದಿಗೆ ಬಲಿಯಾಗಿರುವುದಾಗಿ ಬಿಬಿಎಂಪಿ ವರದಿ ಸಿದ್ಧ ಮಾಡಿಕೊಂಡಿದೆ. ಅದರಲ್ಲೂ ಅದಕ್ಕೆ ಕೊಟ್ಟ ಕಾರಣದಲ್ಲಿ ಜನರೇ ಇದಕ್ಕೆ ಹೊಣೆ ಎಂದಿದೆ. ಆದರೆ ವಾಸ್ತವದಲ್ಲಿ ಜನರ ನಿರ್ಲಕ್ಷ್ಯದ ಜೊತೆಗೆ ಬಿಬಿಎಂಪಿಯ ಆಡಳಿತ ವೈಫಲ್ಯತೆಯೂ ಸಮನಾಗಿ ಕಾರಣವಾಗಿದೆ. ಸದ್ಯ ಸಾವಿನ ಪ್ರಮಾಣ ಕಡಿಮೆಯಾಗಿದೆ ನಿಜ. ಆದರೂ ಜನರ ನಿರ್ಲಕ್ಷ್ಯ ಮಾಡದೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಪಡೆಯುವ ಅಗತ್ಯವಿದೆ. ಅಂದಹಾಗೆ, ಮೊದಲ ಮತ್ತು ಎರಡನೇ ಅಲೆಯ ಡೆತ್‌ ಆಡಿತ್ ವರದಿಯನ್ನು ಬಿಬಿಎಂಪಿ ಮುಂದಿನ ವಾರ ಬಿಡುಗಡೆ ಮಾಡಲಿದೆ.

–         ಕರ್ಣ

Tags: BJPCongress PartyCovid 19ಕರೋನಾಕೋವಿಡ್-19ಡೆತ್‌ ಆಡಿಟ್ಬಿಜೆಪಿಬಿಬಿಎಂಪಿ
Previous Post

ಬಳ್ಳಾರಿ MLC ಎಲೆಕ್ಷನ್ : ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಸಹಕಾರ!

Next Post

ರಾಜಾಜಿನಗರ BBMP ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ – ಮಾಜಿ ಸಚಿವ ಸುರೇಶ್ ಕುಮಾರ್ ಮಾತು

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ರಾಜಾಜಿನಗರ BBMP ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ – ಮಾಜಿ ಸಚಿವ ಸುರೇಶ್ ಕುಮಾರ್ ಮಾತು

ರಾಜಾಜಿನಗರ BBMP ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ - ಮಾಜಿ ಸಚಿವ ಸುರೇಶ್ ಕುಮಾರ್ ಮಾತು

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada