• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೋಲಿಗೆ ತಲೆ ಕೊಡ್ತಾರಾ ಡಿಸಿಎಂ ಡಿ.ಕೆ ಶಿವಕುಮಾರ್..?

ಕೃಷ್ಣ ಮಣಿ by ಕೃಷ್ಣ ಮಣಿ
June 26, 2024
in Top Story, ರಾಜಕೀಯ, ವಿಶೇಷ
0
ಸೋಲಿಗೆ ತಲೆ ಕೊಡ್ತಾರಾ ಡಿಸಿಎಂ ಡಿ.ಕೆ ಶಿವಕುಮಾರ್..?
Share on WhatsAppShare on FacebookShare on Telegram

ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರ ಪ್ರತಿನಿಧಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿ ಆದ ಬಳಿಕ ಚನ್ನಪಟ್ಟಣಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮುಂದಿನ 6 ತಿಂಗಳ ಒಳಗಾಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಈಗಾಗಲೇ ಡಿ.ಕೆ ಶಿವಕುಮಾರ್​ ಚನ್ನಪಟ್ಟಣದಲ್ಲಿ ಪ್ರವಾಸ ಶುರು ಮಾಡಿದ್ದು, ಟೆಂಪಲ್​ ರನ್​ ಮೂಲಕ ಮತದಾರರನ್ನು ಸೆಳೆಯುವ ಕಸರತ್ತು ಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಹೋದರ ಡಿ.ಕೆ ಸುರೇಶ್​ ಸೋಲಿಗೆ ಸೇಡು ತೀರಿಸಿಕೊಳ್ಳಲು ಡಿ.ಕೆ ಶಿವಕುಮಾರ್​ ತಂತ್ರಗಾರಿಕೆ ಮಾಡಿದ್ದಾರೆ ಎನ್ನಲಾಗ್ತಿದೆ.

ADVERTISEMENT

ಚನ್ನಪಟ್ಟಣದಲ್ಲಿ ಸ್ವತಃ ಡಿ.ಕೆ ಶಿವಕುಮಾರ್​​ ಅಖಾಡಕ್ಕೆ ಇಳಿದು ಗೆಲುವು ಸಾಧಿಸಿದ ಬಳಿಕ ಕನಕಪುರ ಕ್ಷೇತ್ರವನ್ನು ಸಹೋದರ ಡಿ.ಕೆ ಸುರೇಶ್​ಗೆ ಬಿಟ್ಟುಕೊಡಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಅಷ್ಟಕ್ಕೂ ಚನ್ನಪಟ್ಟಣ ಪ್ರವಾಸದ ವೇಳೆ ನನ್ನ ಹೊಸ ರಾಜಕೀಯ ಚನ್ನಪಟ್ಟಣದಿಂದ ಆರಂಭ ಎಂದಿದ್ದ ಮಾತು ಡಿ.ಕೆ ಶಿವಕುಮಾರ್​ ಸ್ಪರ್ಧೆ ಮಾಡುವ ಇಂಗಿತ ಎಂದೇ ಬಣ್ಣಿಸಲಾಗ್ತಿದೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಆಗಿದ್ದ ಡಿ.ಕೆ ಸುರೇಶ್​ ಸೋಲನ್ನಪ್ಪಿದ್ದು, ಇದೀಗ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದರೆ ಅಧಿಕಾರ ದಾಹ ಎನ್ನುವ ಕಾರಣಕ್ಕೆ ಸೋಲು ಅನುಭವಿಸುವ ಸಾಧ್ಯತೆಯಿದೆ. ಇದೇ ಕಾರಣದಿಂದ ಡಿಸಿಎಂ ಡಿ.ಕೆ ಶಿವಕುಮಾರ್​ ಸ್ಪರ್ಧೆ ಮಾಡಿ, ಗೆದ್ದ ಬಳಿಕ ಕನಕಪುರಕ್ಕೆ ಸುರೇಶ್​ ಪಟ್ಟಾಭಿಷೇಕ ಎಂದು ಸುರೇಶ್​ ಬೆಂಬಲಿಗರ ಮಾತುಕತೆ ನಡೆದಿದೆ.

ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಕನಕಪುರ, ರಾಮನಗರ, ಮಾಗಡಿಯಲ್ಲಿ ಗೆಲುವು ದಕ್ಕಿಸಿಕೊಂಡಿರುವ ಕಾಂಗ್ರೆಸ್​​, ಚನ್ನಪಟ್ಟಣದಲ್ಲಿ ಜೆಡಿಎಸ್​ ಎದುರು ಸೋಲುಂಡಿತ್ತು. ಇದೀಗ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಕೇಂದ್ರದಲ್ಲಿ ಸಚಿವರಾದ ಬಳಿಕ ತೆರವಾಗಿರುವ ಸ್ಥಾನವನ್ನು ಕಾಂಗ್ರೆಸ್​ ಗೆದ್ದುಕೊಂಡರೆ ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್​ ಅಧಿಪತ್ಯ ಸಾಧಿಸಿದಂತೆ ಆಗಲಿದೆ ಎನ್ನುವುದು ಡಿಕೆ ಶಿವಕುಮಾರ್​ ಲೆಕ್ಕಾಚಾರ. ಆದರೆ ಈ ಲೆಕ್ಕಾಚಾರದಲ್ಲಿ ಮತ್ತೆ ಡಿ.ಕೆ ಶಿವಕುಮಾರ್​ ಹಳಿ ತಪ್ಪುವ ಸಾಧ್ಯತೆಗಳು ಹೆಚ್ಚಿವೆ. ಇದಕ್ಕೆ ಕಾರಣ ಮುಖ್ಯಮಂತ್ರಿ ಸ್ಥಾನದ ಮೇಲೆ ಡಿ.ಕೆ ಶಿವಕುಮಾರ್​ ಇಟ್ಟಿರುವ ಕಣ್ಣು.

ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಬದಲಾವಣೆ ಅನ್ನೋದು ಡಿ.ಕೆ ಶಿವಕುಮಾರ್​ ಬೆಂಬಲಿಗರ ಅಂಬೋಣ. ಡಿ.ಕೆ ಶಿವಕುಮಾರ್​ ಶಕ್ತಿ ಕುಗ್ಗಿಸಬೇಕು ಎಂದು ಈಗಾಗಲೇ ಕಾಂಗ್ರೆಸ್​ನಲ್ಲೇ ಒಂದು ಗುಂಪು ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲೂ ಆ ಗುಂಪು ಕೆಲಸ ಮಾಡಿದೆ. ಅದೇ ಕಾರಣಕ್ಕೆ ಡಿ.ಕೆ ಸುರೇಶ್​ಗೇ ಭಾರೀ ಅಂತರದ ಸೋಲಾಗಿದೆ ಎನ್ನುವುದು ಕಾಂಗ್ರೆಸ್​ನಲ್ಲೇ ಕೇಳಿ ಬರ್ತಿರೋ ಮಾತು. ಇದೀಗ ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್​ ಅಥವಾ ಡಿ.ಕೆ ಸುರೇಶ್​ ಸ್ಪರ್ಧೆ ಮಾಡಿದರೂ ಕಾಂಗ್ರೆಸ್​ ನಾಯಕರುಗಳೇ ಸೋಲಿನ ಹಣೆಪಟ್ಟಿ ಕಟ್ಟುವುದಕ್ಕೆ ಸಜ್ಜಾಗಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಬಳಿಕ ಚನ್ನಪಟ್ಟಣದಲ್ಲೂ ಕಾಂಗ್ರೆಸ್​ ಸೋಲುಂಡರೆ ಡಿ.ಕೆ ಶಿವಕುಮಾರ್​ ಬಲ ಸಂಪೂರ್ಣವಾಗಿ ಕುಗ್ಗಲಿದ್ದು, ಮುಖ್ಯಮಂತ್ರಿ ಸ್ಥಾನದತ್ತ ಕಣ್ಣನ್ನೂ ಹಾಯಿಸದಂತೆ ಮಾಡುತ್ತಾರೆ ಎನ್ನಲಾಗ್ತಿದೆ. ಆದರೂ ರಾಜಕೀಯ ತಂತ್ರಗಾರಿಕೆಯಲ್ಲಿ ಗೆಲ್ಲೋದ್ಯಾರು ಅನ್ನೋದನ್ನು ಕಾದು ನೋಡ್ಬೇಕು.

ಕೃಷ್ಣಮಣಿ..

Tags: #CMSiddaramaiah #DCMDKShivakumar #modi #PrajwalRevanna RASHOK ##PrajwalRevannaPenDriveCase #jdspratidh#CMSiddaramaiahBJPCongress PartyDKShivakumarDKSureshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

13 ವರ್ಷದಿಂದ  ತಲೆಮರೆಸಿಕೊಂಡಿದ್ದ ರೌಡಿಶೀಟರ್ ಕೊನೆಗೂ ಅರೆಸ್ಟ್ ! 

Next Post

ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
Next Post
ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada