ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಅಪರೇಷನ್ ಕಮಲದಂತಹ ಕೆಲಸವನ್ನು ತಪ್ಪಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ರಾಜಕೀಯ ವಿಶ್ಲೇಷಕರಾದ ಸುದೀಂದ್ರ ಕುಲಕರ್ಣಿ ಅವರು ಪ್ರತಿಕಾ ಹೇಳಿಕೆ ನೀಡಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವು ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ರಾಜ್ಯದ ಮತದಾರರು ಮತದಾನ ಮಾಡುವಾಗ ಯೋಚಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನ ಸಮಾನ್ಯರು ಬೆಲೆ ಏರಿಕೆ, ಭ್ರಷ್ಟ್ರಚಾರ , ರೈತರ ಸಮಸ್ಯೆಗಳು, ಕೋಮುವಾದ ಸೇರಿದಂತೆ ಅನೇಕ ಸಮಸ್ಯೆಗಳು ಎದುರಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬೇಕೆಂದರೆ ಬಿಜೆಪಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಸುದೀಂದ್ರ ಕುಲಕರ್ಣಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಈ ಹಿಂದೆ ಕೊಟ್ಟಿರುವ ಭರವಸೆಗಳು ಹೀಡೇರಿಸಿಲ್ಲ. ಜೊತೆಗೆ ರಾಜ್ಯ ಸರ್ಕಾರವೂ ಕೂಡ ಭ್ರಷ್ಟ್ರಾಚಾರದಲ್ಲಿ ಮುಳುಗಿದ್ದು ಜನ ಸಾಮಾನ್ಯ ಬೆಲೆ ಏರಿಕೆ, ಜಿಎಸ್ ಟಿ, ಭ್ರಷ್ಟಾಚಾರ ಸೇರಿದಂತೆ ಅನೇಕ ತೊಂದರೆಗಳನ್ನ ಎದುರಿಸುತ್ತಿದ್ದಾರೆ. ಇದೆಲ್ಲವನ್ನು ತಪ್ಪಿಸಲು ಬಿಜೆಪಿಯನ್ನ ಸೋಲಿಸುವ ಮೂಲಕ ಕಾಂಗ್ರೆಸ್ ಅನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.