• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ಜಾರಿ ಮಾಡಿದ ದೆಹಲಿ ಕೊರ್ಟ್

Any Mind by Any Mind
October 29, 2021
in ದೇಶ
0
ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ಜಾರಿ ಮಾಡಿದ ದೆಹಲಿ ಕೊರ್ಟ್
Share on WhatsAppShare on FacebookShare on Telegram

ರಿಪಬ್ಲಿಕ್ ಟಿವಿ ಸುಳ್ಳು ವರದಿ ಪ್ರ ಭಿತ್ತರಿಸುವ ಮೂಲಕ ತಮ್ಮ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸಿದೆ ಎಂದು ಆರೋಪಿಸಿ ಪಾಪ್ಯುಪಲ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಲ್ಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಸಂಪಾದಕಿ ಅನನ್ಯಾ ವರ್ಮಾ ಅವರಿಗೆ ದೆಹಲಿ ಕೊರ್ಟ್ ಗುರುವಾರ ಸಮನ್ಸ್ ಜಾರಿ ಮಾಡಿದೆ.

ADVERTISEMENT

ದೆಹಲಿಯ ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶೀತಲ್ ಚೌಧರಿ ಪ್ರಧಾನ್ ಅವರು ಸಮನ್ಸ್ ಜಾರಿಗೊಳಿಸಿ ಪ್ರಕರಣವನ್ನು ಜನವರಿ 3ಕ್ಕೆ ಮುಂದೂಡಿದ್ದಾರೆ.

ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ₹1 ಲಕ್ಷ ಪರಿಹಾರ ಪಾವತಿಸಲು ಆದೇಶಿಸಿಬೇಕು. ಇನ್ನು ಮುಂದೆ ರಿಪಬ್ಲಿಕ್ ಟಿವಿ ಚಾನೆಲ್ ಅಥವಾ ವೆಬ್ಸೈಟ್ನಲ್ಲಿ ಫಿರ್ಯಾದುದಾರರ ವರ್ಚಸ್ಸಿಗೆ ಧಕ್ಕೆ ತರುವಂಥ ಯಾವುದೇ ಸುದ್ದಿ ಪ್ರಕಟಿಸದಂತೆ ಶಾಶ್ವತವಾಗಿ ಕಡ್ಡಾಯ ಪ್ರತಿಬಂಧಕಾದೇಶ ಹೊರಡಿಸಬೇಕು ಎಂದು ಪಿಎಫ್ಐ ಮನವಿಯಲ್ಲಿ ಕೋರಲಾಗಿದೆ.

ನ್ಯೂಸ್ ಬ್ರಾಡ್ಕಾಸ್ಟ್ ಸ್ಟ್ಯಾಂಡರ್ಡ್ಸ್ ಅಸೋಸಿಯೇಷನ್ ಅನ್ನು ಫಿರ್ಯಾದುದಾರರು ಪ್ರತಿವಾದಿಯಾಗಿಸಲಾಗಿದ್ದು, ರಿಪಬ್ಲಿಕ್ ಟಿವಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅಸ್ಸಾಂನ ದರ್ರಾಂಗ್ ದಾಳಿಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಎರಡು ವರದಿಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ʼದರ್ರಾಂಗ್ನಲ್ಲಿ ದಾಳಿ: ಪ್ರತಿಭಟನೆಗೆ ಜನರನ್ನು ಸೇರಿಸಿದ್ದ ಪಿಎಫ್ಐ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಇಬ್ಬರ ಬಂಧನʼ ಎಂಬ ವರದಿಯನ್ನು ರಿಪಬ್ಲಿಕ್ ಟಿವಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅದೇ ವರದಿಯನ್ನು ರಿಪಬ್ಲಿಕ್ ಟಿವಿಯಲ್ಲಿ ʼಅಸ್ಸಾಂ ದಾಳಿ ತನಿಖೆ: ಇಬ್ಬರು ಪಿಎಫ್ಐ ಕಾರ್ಯಕರ್ತರ ಬಂಧನʼ ಎಂಬ ಹೆಸರಿನಲ್ಲಿ ಪ್ರಸಾರ ಮಾಡಲಾಗಿದೆ ಎಂದು ಹೇಳಲಾಗಿದೆ.

“ಜನರನ್ನು ಪ್ರಚೋದಿಸುವ ಮತ್ತು ಪಿಎಫ್ಐ ಎತ್ತಿ ಕಟ್ಟುವ ಮತ್ತು ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ ಫಿರ್ಯಾದುದಾರರ ಪರವಾದ ಸದ್ಭಾವನೆಯನ್ನು ಹಾಳು ಮಾಡುವ ಉದ್ದೇಶದಿಂದ ಪ್ರತಿವಾದಿ ಸಂಸ್ಥೆಯು ವೆಬ್ಸೈಟ್ ಮತ್ತು ಟಿವಿಯಲ್ಲಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದೆ” ಎಂದು ಮನವಿಯಲ್ಲಿ ವಿವರಿಸಲಾಗಿದೆ.

ದರ್ರಾಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಮೊಹಮ್ಮದ್ ಅಸ್ಮತ್ ಅಲಿ ಮತ್ತು ಮೊಹಮ್ಮದ್ ಚಾಂದ್ ಮಮೂದ್ ಅವರು ಪಿಎಫ್ಐ ಜೊತೆ ಸಂಪರ್ಕ ಹೊಂದಿಲ್ಲ ಮತ್ತು ಅವರು ಯಾವುದೇ ರೀತಿಯಲ್ಲಿಯೂ ಪಿಎಫ್ಐ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳಲಾಗಿದೆ. ಸುದ್ದಿ ಪ್ರಕಟಿಸುವಾಗ ಯಾವುದೇ ತನಿಖೆ ಅಥವಾ ಪರಿಶೀಲನೆ ಮಾಡಲಾಗಿಲ್ಲ ಎಂದು ಪಿಎಫ್ಐ ತಕರಾರು ಎತ್ತಿದೆ.

ಆರೋಪಿತರು ಸ್ಥಳೀಯ ಪಂಚಾಯತ್ ನಾಯಕರಾಗಿದ್ದು, ಪಿಎಫ್ಐ ಜೊತೆ ನಂಟು ಹೊಂದಿರುವುದಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ದರ್ರಾಂಗ್ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ ಎಂದು ಪಿಎಫ್ಐ ತನ್ನನ್ನು ಸಮರ್ಥಿಸಿಕೊಂಡಿದೆ.

ಸುಳ್ಳು ವರದಿಗಾರಿಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಲಿಖಿತವಾಗಿ ಬೇಷರತ್ ಕ್ಷಮೆ ಕೋರುವಂತೆ ಸೆಪ್ಟೆಂಬರ್ 30ರಂದು ಕಾನೂನು ಬದ್ಧವಾಗಿ ನೋಟಿಸ್ ಜಾರಿಗೊಳಿಸಲಾಗಿತ್ತು. ಇದಕ್ಕೆ ರಿಪಬ್ಲಿಕ್ ಟಿವಿಯು ತಪ್ಪು ಮತ್ತು ನುಣಿಚಿಕೊಳ್ಳುವ ಪ್ರತಿಕ್ರಿಯೆ ನೀಡಿದೆ” ಎಂದು ಪೀಠಕ್ಕೆ ತಿಳಿಸಲಾಯಿತು.

Tags: Arnab GoswamiBJPCovid 19Delhi courtPFIPopular Front of IndiaRepublic TVsummonsಅರ್ನಾಬ್ ಗೋಸ್ವಾಮಿದೆಹಲಿ ಕೊರ್ಟ್ಬಿಜೆಪಿರಿಪಬ್ಲಿಕ್ ಟಿವಿಸಮನ್ಸ್
Previous Post

ಅಪ್ಪನ ಹಾದಿಯಲ್ಲೇ ಸಾಗಿದ ಅಪ್ಪು; ಪುನೀತ್ ರಾಜ್‌ಕುಮಾರ್‌ರಿಂದ ನೇತ್ರದಾನ

Next Post

ಬಣ್ಣದ ಲೋಕದ ಆಚೆಗೂ ಎಲ್ಲರ ಮೆಚ್ಚಿನ ಮನೆಮಗನಾಗಿ ಬೆಳೆದ ಬೆಟ್ಟದ ಹೂ ಪುನೀತ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

October 11, 2025
Next Post
ಬಣ್ಣದ ಲೋಕದ ಆಚೆಗೂ ಎಲ್ಲರ ಮೆಚ್ಚಿನ ಮನೆಮಗನಾಗಿ ಬೆಳೆದ ಬೆಟ್ಟದ ಹೂ ಪುನೀತ್

ಬಣ್ಣದ ಲೋಕದ ಆಚೆಗೂ ಎಲ್ಲರ ಮೆಚ್ಚಿನ ಮನೆಮಗನಾಗಿ ಬೆಳೆದ ಬೆಟ್ಟದ ಹೂ ಪುನೀತ್

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada