
ನವದೆಹಲಿ: ಬಸ್ ಮಾರ್ಷಲ್ಗಳ ಮರು ನಿಯೋಜನೆ ಬಗ್ಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಒಪ್ಪಿಗೆ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾಗೆ ಮನವಿ ಮಾಡಲು ತಮ್ಮ ಜೊತೆ ಬರುವಂತೆ ದೆಹಲಿ ಸಚಿವ ಸೌರಭ್ ಭಾರಧ್ವಜ್ ಅವರು ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರ ಕಾಲು ಹಿಡಿದು ಮನವಿ ಮಾಡಿದರು.
BJP विधायकों और बस मार्शलों के सामने ही CM @AtishiAAP जी ने बुलाई Cabinet Meeting और नियुक्ति को लेकर Cabinet Note पास होने के बाद भी BJP विधायकों ने अपने ही LG से मिलने को किया इनकार… pic.twitter.com/LO7dhRS7Ha
— Gulab Singh Yadav (@GulabMatiala) October 5, 2024
ಇದಕ್ಕೆ ಅವರು ಸ್ಪಂದಿಸುತ್ತಿದಂತೆಯೇ, ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಕಾರನ್ನು ಬಿಟ್ಟು ಬಿಜೆಪಿ ನಾಯಕರ ಕಾರಿನಲ್ಲಿ ಕುಳಿತು ಸಚಿವರು, ಶಾಸಕರೊಂದಿಗೆ ಸಕ್ಸೇನಾ ಅವರ ಮನೆಗೆ ತೆರಳಿದರು. ಆದರೆ, ಅಲ್ಲಿಂದ ಹೊರ ಬರುತ್ತಿದಂತೆಯೇ ಎಎಪಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
दिल्ली सरकार के माननीय स्वास्थ्य मंत्री @Saurabh_MLAgk जी ने विजेंद्र गुप्ता जी के पैर पकड़ लिए और कहा अगर मेरे पैर पकड़ने से आप बड़े होते हैं तो मैं आपका पैर पकड़ता हूं आज ही चलिए LG साहब के पास और आज ही बस मार्शल की तुरंत नौकरी दिलाते है। pic.twitter.com/SQ0IFiVT5s
— Sanjeev Jha (@Sanjeev_aap) October 5, 2024
ಸಚಿವ ಸಂಪುಟದ ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿಯು ಲೆಫ್ಟಿನೆಂಟ್ ಗವರ್ನರ್ ಅವರನ್ನು ಒತ್ತಾಯಿಸಿಲ್ಲ’ ಎಂದು ಆರೋಪಿಸಿದ ಎಎಪಿ ನಾಯಕರು, ಲೆ.ಗವರ್ನರ್ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಲೆ.ಗವರ್ನರ್ ಅವರನ್ನು ಭೇಟಿ ಮಾಡಲು ಬಿಜೆಪಿ ಶಾಸಕರು ತಯಾರಿರಲಿಲ್ಲ. ಆದರೆ ನಾವು ಅವರನ್ನು ಜೊತೆಗೆ ಕರೆದುಕೊಂಡು ಹೋದೆವು. ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿ ಶಾಸಕರು ಲೆ.ಗವರ್ನರ್ ಅವರಿಗೆ ಮನವಿ ಮಾಡಲಿಲ್ಲ. ಬಿಜೆಪಿಯು ದ್ರೋಹ ಮಾಡಿದೆ’ ಎಂದು ಮುಖ್ಯಮಂತ್ರಿ ಆತಿಶಿ ಕಿಡಿಕಾರಿದರು.ಪ್ರತಿಭಟನೆ ನಡೆಸಿದ ಎಎಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಸಚಿವ ಸಂಪುಟದ ನಿರ್ಣಯಕ್ಕೆ ಲೆ.ಗವರ್ನರ್ ಸಹಿ ಮಾಡಿಲ್ಲ. ಇದರಿಂದಾಗಿ 10 ಸಾವಿರ ಬಸ್ ಮಾರ್ಷಲ್ಗಳಿಗೆ ಕೋಪಕ್ಕೆ ಅವರು ತುತ್ತಾಗಲಿದ್ದಾರೆ’ ಎಂದು ಸಚಿವ ಭಾರಧ್ವಜ್ ಹೇಳಿದರು.





