• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ ಗಲಭೆ: ದೆಹಲಿ ಪೊಲೀಸ್ ಗೆ 25000 ರೂ. ದಂಡ ವಿಧಿಸಿದ ನ್ಯಾಯಾಲಯ

ಪ್ರತಿಧ್ವನಿ by ಪ್ರತಿಧ್ವನಿ
July 15, 2021
in ದೇಶ
0
ದೆಹಲಿ ಗಲಭೆ: ದೆಹಲಿ ಪೊಲೀಸ್ ಗೆ 25000 ರೂ. ದಂಡ ವಿಧಿಸಿದ ನ್ಯಾಯಾಲಯ
Share on WhatsAppShare on FacebookShare on Telegram

ದೆಹಲಿ ಗಲಭೆ ಪ್ರಕರಣ ಕುರಿತು ಪೊಲೀಸರ ತನಿಖೆಯನ್ನು ನಿಷ್ಕಾಳಜಿಯುತ ಹಾಗೂ ಪ್ರಹಸನದಂತಿದೆ ಎಂದಿರುವ ನ್ಯಾಯಾಲಯವು ದೆಹಲಿ ಪೋಲೀಸರಿಗೆ 25 ಸಾವಿರ ರೂ ದಂಡ ವಿಧಿಸುವ ಮೂಲಕ ಚಾಟಿಯೇಟು ಬೀಸಿದೆ.

ADVERTISEMENT

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಅವರು ದಂಡದ ಮೊತ್ತವನ್ನು ಭಜನ ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಆತನ ಮೇಲಾಧಿಕಾರಿಗಳಿಂದ ವಸೂಲಿ ಮಾಡುವಂತೆ ಆದೇಶಿಸಿದ್ದು, ಅಧಿಕಾರಿಗಳು ತಮ್ಮ ಶಾಸನಬದ್ಧ ಕರ್ತವ್ಯವನ್ನು ನಿಭಾಯಿಸುವಲ್ಲಿ ದಯನೀಯವಾಗಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿ ಗಲಭೆಯ ಸಂದರ್ಭದಲ್ಲಿ ಗುಂಡೇಟಿನಿಂದ ಎಡಗಣ್ಣನ್ನು ಕಳೆದುಕೊಂಡಿದ್ದ ಮೊಹಮ್ಮದ್ ನಾಸೀರ್ ಎಂಬಾತನ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸುವಂತೆ ಮ್ಯಾಜಿಸ್ಟೀರಿಯಲ್ ಕೋರ್ಟ್ ನೀಡಿದ ಆದೇಶವನ್ನು ಪೊಲೀಸರು ಈ ಮೊದಲು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ಧರು.
ಆದಾಗ್ಯೂ ತನಿಖಾಧಿಕಾರಿಗಳು, ಈಗಾಗಲೇ ಒಂದು ಎಫ್.ಐ.ಆರ್ ನ್ನು ದಾಖಲಿಸಿರುವುದರಿಂದ ಮತ್ತು ಗುಂಡುಹಾರಿಸಿದ್ದ ನೆಂದು ಹೇಳಲಾದ ವ್ಯಕ್ತಿಯು ಆ ಸಂದರ್ಭದಲ್ಲಿ ದೆಹಲಿಯಲ್ಲಿ ಉಪಸ್ಥಿತನಿದ್ದ ಎನ್ನುವುದಕ್ಕೆ ಯಾವುದೇ ಸಾಕ್ಷಾಧಾರಗಳಿಲ್ಲದೆ ಇರುವುದರಿಂದ ಮತ್ತೊಂದು ಪ್ರತ್ಯೇಕ ಎಫ್.ಐ.ಆರ್ ನ್ನು ದಾಖಲಿಸುವ ಅಗತ್ಯವಿಲ್ಲವೆಂದು ವಾದಿಸಿದ್ದರು.

ಈ ಕುರಿತ ತನಿಖೆಯಲ್ಲಿ ಪೊಲೀಸರ ದಕ್ಷತೆ ಹಾಗೂ ನ್ಯಾಯಪರತೆಯ ಕೊರತೆಯನ್ನು ಖಂಡಿಸಿದ ನ್ಯಾಯಾಧೀಶರು ಈ ತನಿಖೆಯು ಬೇಕಾಬಿಟ್ಟಿಯಾಗಿ ನಿಷ್ಕಾಳಜಿಯಿಂದ ನಡೆದ ಪ್ರಹಸನದಂತೆ ಇದೆ ಎಂದು ಅಭಿಪ್ರಾಯಪಟ್ಟರು.

ತನಿಖಾ ಮಟ್ಟವನ್ನು ಗಮನಿಸಿ ತನಿಖೆಯ ಮೇಲ್ವಿಚಾರಣೆ ನಡೆಸಲು ಹಾಗೂ ನ್ಯಾಯಾಲಯದ ಗಮನಕ್ಕೆ ತಂದು ಸೂಕ್ತ ಪರಿಹಾರಾತ್ಮಕ ಕ್ರಮಕೈಗೊಳ್ಳಲು ಈ ಆದೇಶದ ಪ್ರತಿಯನ್ನು ದೆಹಲಿ ಪೊಲೀಸ್ ಆಯುಕ್ತರಿಗೆ ತಲುಪಿಸುವಂತೆ ಜುಲೈ 13ರ ಆದೇಶದಲ್ಲಿ ತಿಳಿಸಲಾಗಿದೆ.

ಸಂತ್ರಸ್ತ ಮೊಹಮ್ಮದ್ ನಾಸೀರ್ ತನ್ನ ದೂರಿನಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಲಿಕ್ಕಾಗಿ ಕಾನೂನಿನಲ್ಲಿ ಲಭ್ಯವಿರುವ ಪರಿಹಾರಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮುಕ್ತರಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಂತ್ರಸ್ತರ ಪರ ವಕೀಲ ಮೆಹಮೂದ್ ಬಾಷಾ ರವರ ಪ್ರಕಾರ “ನರೇಶ್ ತ್ಯಾಗಿ ಎಂಬಾತ ನಾಸಿರ್ ನ ಮೇಲೆ ಗುಂಡು ಹಾರಿಸಿದ ನೆಂದು ಹೇಳಲಾಗಿದ್ದು ಅದರ ಪರಿಣಾಮವಾಗಿ ಗುಂಡೇಟಿನಿಂದ ನಾಸಿರ್ ನ ಎಡಗಣ್ಣಿಗೆ ಗಾಯವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ಈ ಕುರಿತು ಪೊಲೀಸರಿಗೆ ಸಾಕಷ್ಟು ಮನವಿ ಮಾಡಿದರೂ, ಎಫ್ಐಆರ್ ದಾಖಲಿಸದಿದ್ದರಿಂದ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯದ ಮೊರೆ ಹೋಗಬೇಕಾಯಿತು”ಎಂದು ಹೇಳಿದ್ದಾರೆ.

Tags: 000 by court for 'miserably failing' to investigate 2020 Delhi riotsDelhi Police fined Rs 25Delhi Riots
Previous Post

ಮೋದಿಯನ್ನು ಎದುರಿಸುವ ಪ್ರಬಲ ನಾಯಕನ ಆಯ್ಕೆಗೆ ಪ್ರಶಾಂತ್‌ ಕಿಶೋರ್‌ ಸಹಾಯ ಮಾಡಬಹುದು – ಸಂಜಯ್ ರಾವತ್

Next Post

ಹಗಲಲ್ಲಿ ಕವಿದ ಅಂಧಕಾರ- ನ್ಯಾಯಾಂಗದ ಹೊಣೆಗಾರಿಕೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಹಗಲಲ್ಲಿ ಕವಿದ ಅಂಧಕಾರ- ನ್ಯಾಯಾಂಗದ ಹೊಣೆಗಾರಿಕೆ

ಹಗಲಲ್ಲಿ ಕವಿದ ಅಂಧಕಾರ- ನ್ಯಾಯಾಂಗದ ಹೊಣೆಗಾರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada